ಆ್ಯಪ್ನಗರ

ಧೋನಿ ಆಡುವಾಗ ಬೌಲರ್‌ಗಳಿಗೆ ಕಷ್ಟ: ರಹಾನೆ

ಚೆನ್ನೈನಲ್ಲಿ ಭಾನುವಾರ ಸಿಎಸ್‌ಕೆ ತಂಡ 3 ವಿಕೆಟ್‌ ನಷ್ಟಕ್ಕೆ 27 ರನ್‌ ಗಳಿಸಿದ್ದಾಗ ಕ್ರೀಸಿಗಿಳಿದಿದ್ದ ಧೋನಿ ಕೇವಲ 46 ಎಸೆತಗಳಲ್ಲಿ ಅಜೇಯ 75 ರನ್‌ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ್ದರು.

Vijaya Karnataka Web 1 Apr 2019, 6:50 pm
ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಎಂ.ಎಸ್‌. ಧೋನಿ ಕ್ರೀಸಿನಲ್ಲಿರುವಷ್ಟು ಹೊತ್ತು ಬೌಲರ್‌ಗಳಿಗೆ ಕಷ್ಟ ಎಂದು ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web Dhoni


ಚೆನ್ನೈನಲ್ಲಿ ಭಾನುವಾರ ಸಿಎಸ್‌ಕೆ ತಂಡ 3 ವಿಕೆಟ್‌ ನಷ್ಟಕ್ಕೆ 27 ರನ್‌ ಗಳಿಸಿದ್ದಾಗ ಕ್ರೀಸಿಗಿಳಿದಿದ್ದ ಧೋನಿ ಕೇವಲ 46 ಎಸೆತಗಳಲ್ಲಿ ಅಜೇಯ 75 ರನ್‌ ಸಿಡಿಸಿ ಪಂದ್ಯದ ಗತಿಯನ್ನೇ ಬದಲಾಯಿಸಿದ್ದರು. ಪಿಚ್‌ ಬ್ಯಾಟಿಂಗ್‌ಗೆ ಸಹಕರಿಸದ ಹೊರತಾಗಿಯೂ ಸಿಎಸ್‌ಕೆ 20 ಓವರ್‌ಗಳಲ್ಲಿ 175 ರನ್‌ ಗಳಿಸಿತ್ತು.

ಗುರಿ ಬೆನ್ನಟ್ಟಿದ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಲಷ್ಟೇ ಶಕ್ತವಾಗಿತ್ತು. ''ಕೊನೆಯ ಓವರ್‌ಗಳಲ್ಲಿ ಬೌಲಿಂಗ್‌ ಮಾಡಲು ತುಂಬ ಕಷ್ಟವಾಯಿತು. ಬೌಲರ್‌ಗಳಿಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ವೇಗಿಗಳೂ ಸಂಕಷ್ಟಕ್ಕೀಡಾದರು,'' ಎಂದು ಪಂದ್ಯಾನಂತರದ ಸುದ್ದಿಗೋಷ್ಠಿಯಲ್ಲಿ ರಹಾನೆ ಹೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌