ಆ್ಯಪ್ನಗರ

ಆರ್‌ಸಿಬಿಗೆ ಸಡ್ಡು ನೀಡಲಿರುವ ಲೋಕಲ್ ಬಾಯ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಲೋಕಲ್ ಬಾಯ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ತೀವ್ರ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.

Vijaya Karnataka Web 24 Apr 2019, 7:02 pm
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ನಡುವಣ ಪಂದ್ಯವು ಹಲವಾರು ಕಾರಣಗಳಿಂದಾಗಿ ಅತಿ ಹೆಚ್ಚು ರೋಚಕತೆಗೆ ಸಾಕ್ಷಿಯಾಗಿದೆ.
Vijaya Karnataka Web kl-rahul-century


ಆರ್‌ಸಿಬಿ ತಂಡದಲ್ಲಿರುವ ಹಲವು ಆಟಗಾರರು ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿಯ ಪಾಲಾಗಿದ್ದಾರೆ. ಹಾಗಾಗಿ ಆರ್‌ಸಿಬಿ ಹಾಗೂ ಎಕ್ಸ್ ಆರ್‌ಸಿಬಿ ಆಟಗಾರರ ನಡುವಣ ಕದನವೆಂದೇ ವಿಶ್ಲೇಷಿಸಲಾಗುತ್ತಿದೆ.

ಈ ನಡುವೆ ಬೆಂಗಳೂರು ತಂಡದಲ್ಲಿದ್ದ ಸ್ಥಳೀಯ ಹೀರೊಗಳು ಸಹ ಈಗ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ. ಈ ಮೂಲಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿಗೆ ಸಡ್ಡು ನೀಡಲು ಲೋಕಲ್ ಬಾಯ್ಸ್ ಸಜ್ಜಾಗಿದ್ದಾರೆ.

ಕರ್ನಾಟಕದ ಸ್ಟಾರ್‌ಗಳಾದ ಕೆಎಲ್ ರಾಹುಲ್, ಮಯಾಂಕ್ ಅರ್ಗವಾರ್ಲ್, ಕರುಣ್ ನಾಯರ್ ಪಂಜಾಬ್ ಪರ ಆರ್‌ಸಿಬಿ ವಿರುದ್ಧ ಬೆಂಗಳೂರು ಮೈದಾನದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಒಟ್ಟಿನಲ್ಲಿ ಕನ್ನಡಿಗ ಅಭಿಮಾನಿಗಳು ಮಾತ್ರ ಯಾವ ತಂಡವನ್ನು ಬೆಂಬಲಿಸಬೇಕು ಎಂಬ ಗೊಂದಲದಲ್ಲಿದ್ದಾರೆ.
ಅತ್ತ ಒಂದು ಕಾಲದಲ್ಲಿ ಆರ್‌ಸಿಬಿ ಅವಿಭಾಜ್ಯ ಅಂಗವಾಗಿದ್ದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಪಂಜಾಬ್ ತಂಡದಲ್ಲಿ ಅಮೋಘ ಫಾರ್ಮ್ ನೀಡುತ್ತಿದ್ದಾರೆ. ಇದು ಕೂಡಾ ಪಂದ್ಯದ ರೋಚಕತೆಯನ್ನು ಹೆಚ್ಚಿಸಿದೆ. ಒಟ್ಟಿನಲ್ಲಿ ಪ್ರೇಕ್ಷಕರಿಗಂತೂ ರಸದೌತಣ ಗ್ಯಾರಂಟಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌