ಆ್ಯಪ್ನಗರ

ಅನುಭವ ಹಾಗೂ ಪ್ರತಿಭೆಯಿಂದ ಸಮತೋಲನ: ಎಬಿ ಡಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಪ್ರಬಲ ತಂಡವಾಗಿ ಮೂಡಿಬರುವುದರತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗಮನ ಕೇಂದ್ರಿಕರಿಸಿದೆ ಎಂದು ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿ ವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.

TOI.in 23 Mar 2019, 2:43 pm
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಮಾರ್ಚ್ 23 ಶನಿವಾರದಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ.
Vijaya Karnataka Web ab-de-villiers-01


ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಒತ್ತಡ ರಹಿತ ಕ್ರಿಕೆಟ್ ಆಡಲಿರುವ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ ಆರ್‌ಸಿಬಿ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಲಿದ್ದಾರೆ.

ಇದೀಗ ತಂಡದ ಸಂಯೋಜನೆ ಬಗ್ಗೆ ಪ್ರತಿಕ್ರಿಯಿಸಿರುವ ಎಬಿ ಡಿ, ಅನುಭವ ಹಾಗೂ ಪ್ರತಿಭೆಯಿಂದ ಹೆಚ್ಚಿನ ಸಮತೋಲನವನ್ನು ಕಾಪಾಡಿಕೊಂಡಿದೆ ಎಂದರು.

ಇದೇ ಸರಿಯಾದ ಸಮಯ, ಆರ್‌ಸಿಬಿ ಹೆಚ್ಚು ಸ್ಮಾರ್ಟ್ ಹಾಗೂ ಪ್ರಬಲವಾಗಿ ಆಡುವ ಸಮಯವಿದು. ಸ್ಥಿರ ಪ್ರದರ್ಶನದ ಮೂಲಕ ಟೂರ್ನಿಯಲ್ಲಿ ಪರಿಣಾಮ ಬೀರಬೇಕು. ಅಲ್ಲದೆ ಮೊದಲ ಸವಾಲು ಸ್ವೀಕರಿಸಲು ಸಂಪೂರ್ಣವಾಗಿ ಸಜ್ಜಾರಾಗಿದ್ದೇವೆ ಎಂದರು.

ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವುದಾಗಿ ಅಭಿಮಾನಿಗಳಿಗೂ ಖಾತ್ರಿಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌