ಆ್ಯಪ್ನಗರ

'ಟೇಕ್ ಇಟ್ ಈಸಿ' ಅಭಿಮಾನಿಗಳಿಗೆ ವಿನಯ್ ಕುಮಾರ್ ಕರೆ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರೋಚಕ ಮುಖಾಮುಖಿಯಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ರೋಚಕ ಗೆಲುವನ್ನು ದಾಖಲಿಸಿದೆ.

Vijaya Karnataka Web 11 Apr 2018, 6:11 pm
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನಲ್ಲಿ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರೋಚಕ ಮುಖಾಮುಖಿಯಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ರೋಚಕ ಗೆಲುವನ್ನು ದಾಖಲಿಸಿದೆ.
Vijaya Karnataka Web vinay-kumar


ಮೊದಲು ಬ್ಯಾಟಿಂಗ್ ನಡೆಸಿದ ಕೆಕೆಆರ್ ಆಂಡ್ರೆ ರಸೆಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರು ವಿಕೆಟ್ ನಷ್ಟಕ್ಕೆ 202 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.

ಕೇವಲ 36 ಎಸೆತಗಳನ್ನು ಎದುರಿಸಿರುವ ರಸೆಲ್ 88 ರನ್ ಗಳಿಸಿ ಅಜೇಯರಾಗುಳಿದಿದ್ದರು. ಇದರಲ್ಲಿ 11 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.

ಆದರೆ ಎರಡು ವರ್ಷಗಳ ನಿಷೇಧದ ಬಳಿಕ ತವರಿನ ಮೈದಾನದಲ್ಲಿ ಮೊದಲ ಪಂದ್ಯವನ್ನಾಡಿರುವ ಸಿಎಸ್‌ಕೆ ಅಂತಿಮ ಓವರ್‌ನಲ್ಲಿ ಗೆಲುವಿನ ನಗು ಬೀರಿತ್ತು. ಕೇವಲ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸ್ಯಾಮ್ ಬಿಲ್ಲಿಂಗ್ಸ್ ವಿಜಯ ರೂವಾರಿ ಎನಿಸಿಕೊಂಡಿದ್ದರು.

ವಿನಯ್ ಕುಮಾರ್ ಅವರ ಕೊನೆಯ ಓವರ್‌ನಲ್ಲಿ ಚೆನ್ನೈ ಗೆಲುವಿಗೆ 17 ರನ್‌ಗಳ ಅವಶ್ಯಕತೆಯಿತ್ತು. ಮಗದೊಮ್ಮೆ ಬೆಸ್ಟ್ ಫಿನಿಶರ್ ಎನಿಸಿಕೊಂಡ ಡ್ವೇನ್ ಬ್ರಾವೋ ಸಿಕ್ಸರ್ ಸಿಡಿಸುವ ಮೂಲಕ ಗೆಲುವಿನ ಸನಿಹಕ್ಕೆ ತಲುಪಿಸಿದರು. ಬಳಿಕ ರವೀಂದ್ರ ಜಡೇಜಾ ಸಹ ಸಿಕ್ಸರ್ ಬಾರಿಸುವ ಮೂಲಕ ರೋಚಕ ಗೆಲುವು ಒದಗಿಸಿಕೊಟ್ಟಿದ್ದರು.

ಕರ್ನಾಟಕದ ನಾಯಕ ವಿನಯ್ ಕುಮಾರ್ ಅಪಾರ ಅನುಭವ ಸಂಪತ್ತನ್ನು ಹೊಂದಿದ್ದರು. ಆದರೆ ಅತಿ ಒತ್ತಡದ ಕೊನೆಯ ಓವರ್‌ನ ನಿರ್ಣಾಯಕ ಹಂತದಲ್ಲಿ ನೊ ಬಾಲ್ ಎಸೆದಿರುವುದು ಟೀಕೆಗೆ ಕಾರಣವಾಗಿತ್ತು. ಅಲ್ಲದೆ ಅಭಿಮಾನಿಗಳಲ್ಲಿ ನಿರಾಸೆಯನ್ನುಂಟು ಮಾಡಿದೆ.

ಈ ನಡುವೆ ಟ್ವೀಟ್ ಮಾಡಿರುವ ವಿನಯ್, ಹಗುರವಾಗಿ ತೆಗೆದುಕೊಳ್ಳುವಂತೆ ಬೇಡಿಕೊಂಡಿದ್ದಾರೆ. ಅಂತಿಮವಾಗಿ ಇವೆಲ್ಲವೂ ಪಂದ್ಯವಾಗಿದ್ದು, ಈ ಹಿಂದೆ ಆರ್‌ಸಿಬಿ ವಿರುದ್ಧ 9 ರನ್ ಹಾಗೂ ಮುಂಬಯಿ ಇಂಡಿಯನ್ಸ್ ವಿರುದ್ಧ 10 ರನ್ ಡಿಫೆಂಡ್ ಮಾಡಿರುವುದನ್ನು ಉಲ್ಲೇಖಿಸಿದ್ದಾರೆ. ಕೆಲವೊಮ್ಮೆ ತಪ್ಪುಗಳು ಆಗುತ್ತದೆ. ಹಾಗಾಗಿ ಚಿಲ್ ಆಗಿರಿ ಎಂದು ಹೇಳಿದ್ದಾರೆ.

ಇದರೊಂದಿಗೆ 1.5 ಓವರ್‌ ಎಸೆದಿರುವ ವಿನಯ್ 35 ರನ್ ಬಿಟ್ಟುಕೊಟ್ಟಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌