ಆ್ಯಪ್ನಗರ

ಪಂದ್ಯಶ್ರೇಷ್ಠ ಪ್ರಶಸ್ತಿ ಅಭಿಮಾನಿಗೆ ನೀಡಿ ಹಿರಿತನ ಮೆರೆದ ವಿಲಿಯರ್ಸ್!

ಕೆಲವು ದಿನಗಳೇ ಹಿಂದೆಯಷ್ಟೇ ಬೆಂಗಳೂರಿನ ಅಭಿಮಾನಿಗಳು ಇಡೀ ವಿಶ್ವದಲ್ಲೇ ಅತ್ಯುತ್ತಮ ಹಾಗೂ ನಿಷ್ಠಾವಂತ ಅಭಿಮಾನಿಗಳು ಎಂದು ಹೇಳಿಕೆ ಕೊಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಬಿ ಡಿ ವಿಲಿಯರ್ಸ್ ಇದೀಗ, ಇಂಡಿಯನ್ ಪ್ರೀಮಿಯರ್ ಲೀಗ್ 11ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ದಾಖಲಾದ ನಿರ್ಣಾಯಕ ಗೆಲುವಿನ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಅಭಿಮಾನಿಯೊಬ್ಬರಿಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

Vijaya Karnataka Web 18 May 2018, 5:10 pm
ಬೆಂಗಳೂರು: ಕೆಲವು ದಿನಗಳೇ ಹಿಂದೆಯಷ್ಟೇ ಬೆಂಗಳೂರಿನ ಅಭಿಮಾನಿಗಳು ಇಡೀ ವಿಶ್ವದಲ್ಲೇ ಅತ್ಯುತ್ತಮ ಹಾಗೂ ನಿಷ್ಠಾವಂತ ಅಭಿಮಾನಿಗಳು ಎಂದು ಹೇಳಿಕೆ ಕೊಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಬಿ ಡಿ ವಿಲಿಯರ್ಸ್ ಇದೀಗ, ಇಂಡಿಯನ್ ಪ್ರೀಮಿಯರ್ ಲೀಗ್ 11ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ದಾಖಲಾದ ನಿರ್ಣಾಯಕ ಗೆಲುವಿನ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಅಭಿಮಾನಿಯೊಬ್ಬರಿಗೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web ab-de-villiers-award


ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ನಲ್ಲಿ ಮಿಂಚಿದ ವಿಲಿಯರ್ಸ್ ಕೇವಲ 39 ಎಸೆತಗಳಲ್ಲಿ 69 ರನ್ ಬಾರಿಸಿದ್ದರು. ಇದರಲ್ಲಿ 12 ಬೌಂಡರಿ ಹಾಗೂ ಸಿಕ್ಸರ್ ಸೇರಿಕೊಂಡಿದ್ದವು. ಬಳಿಕ ಫೀಲ್ಡಿಂಗ್‌ನಲ್ಲೂ ಜಾದೂ ಮೆರೆದ ಎಬಿಡಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದರು.

ಪಂದ್ಯದ ಬಳಿಕ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ಸ್ವೀಕರಿಸಿದ ವಿಲಿಯರ್ಸ್ ಬಳಿಕ ಪೆವಿಲಿಯನ್‌ಗೆ ಹಿಂತಿರುತ್ತಿದ್ದ ವೇಳೆ ಸ್ಟೇಡಿಯಂನಲ್ಲಿ ಜೈಕಾರ ಕೂಗುತ್ತಿದ್ದ ಅಭಿಮಾನಿಗಳತ್ತ ತೆರಳಿ ಹಸ್ತವಾಘವ ಮಾಡಿದರು. ಬಳಿಕ ತಮ್ಮಲ್ಲಿದ್ದ ಪ್ರಶಸ್ತಿಯನ್ನು ಅಭಿಮಾನಿಯೊಬ್ಬರಿಗೆ ನೀಡಿದರು.

ಇದು ಐಪಿಎಲ್ 11ರಲ್ಲಿ ಆರ್‌ಸಿಬಿ ಮನೆಯಂಗಳದಲ್ಲಿ ಆಡಿದ ಕೊನೆಯ ಪಂದ್ಯವಾಗಿತ್ತು. ಅಲ್ಲದೆ ಪ್ರತಿ ಬಾರಿಯೂ ತಮ್ಮ ಹಾಗೂ ತಂಡದ ಯಶಸ್ಸಿನಲ್ಲಿ ಅಭಿಮಾನಿಗಳನ್ನು ನೆನೆಸಿಕೊಳ್ಳುವ ವಿಲಿಯರ್ಸ್, ಮತ್ತೊಮ್ಮೆ ಪ್ರೀತಿಗೆ ಪಾತ್ರವಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌