ಆ್ಯಪ್ನಗರ

ಕಾವೇರಿ ಎಫೆಕ್ಟ್; ಐಪಿಎಲ್ ಪಂದ್ಯಗಳು ಚೆನ್ನೈನಿಂದ ಔಟ್?

ಇದೀಗ ಬಂದಿರುವ ತಾಜಾ ಮಾಹಿತಿಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತವರು ಪಂದ್ಯಗಳನ್ನು ಎಂ.ಎ.ಚಿದಂಬರಂ ಕ್ರೀಡಾಂಗಣದಿಂದ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಭದ್ರತಾ ಕಾರಣಗಳಿಂದಾಗಿ ಸಿಎಸ್‌ಕೆ ಪಂದ್ಯಗಳನ್ನು ಚೆನ್ನೈಯಿಂದ ಸ್ಥಳಾಂತರ ಮಾಡಲಾಗುತ್ತಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

Vijaya Karnataka Web 11 Apr 2018, 4:17 pm
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರದ ಧೋರಣೆ ಖಂಡಿಸಿ ತಮಿಳುನಾಡಿನ ವಿವಿಧ ಸಂಘಟನೆಗಳ ಕಾರ್ಯಕರ್ತರು ಐಪಿಎಲ್‌ ಪಂದ್ಯ ವಿರೋಧಿಸಿ ಮಂಗಳವಾರ ಭಾರಿ ಪ್ರತಿಭಟನೆ ನಡೆಸಿದ್ದರು.
Vijaya Karnataka Web jadeja-shoe


ಇದೀಗ ಬಂದಿರುವ ತಾಜಾ ಮಾಹಿತಿಗಳ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತವರು ಪಂದ್ಯಗಳನ್ನು ಎಂ.ಎ.ಚಿದಂಬರಂ ಕ್ರೀಡಾಂಗಣದಿಂದ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಭದ್ರತಾ ಕಾರಣಗಳಿಂದಾಗಿ ಸಿಎಸ್‌ಕೆ ಪಂದ್ಯಗಳನ್ನು ಚೆನ್ನೈಯಿಂದ ಸ್ಥಳಾಂತರ ಮಾಡಲಾಗುತ್ತಿದೆ. ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

ಮಂಗಳವಾರದಂದು ಐಪಿಎಲ್ ಪಂದ್ಯದ ವೇಳೆ ಸ್ಟೇಡಿಯಂ ಹೊರಗೆ ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳು ಕೂಗಿ ಗದ್ದಲ ನಡೆಸಿದರು. ಆದರೆ ನಿಗದಿಯಂತೆ ಚೆನ್ನೈ ಸೂಪರ್‌ ಕಿಂಗ್ಸ್‌-ಕೋಲ್ಕೊತಾ ನೈಟ್‌ ರೈಡರ್ಸ್‌ ನಡುವಿನ ಪಂದ್ಯ ನಡೆಯಿತು. ಮುಂಜಾಗ್ರತಾ ಕ್ರಮವಾಗಿ 4 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು.

ಪಂದ್ಯ ನಡೆಯುತ್ತಿರುವ ವೇಳೆ ಪ್ರತಿಭಟನೆಕಾರರು ಸಿಎಸ್‌ಕೆ ಅಭಿಮಾನಿಗಳಿಗೆ ಸ್ಟೇಡಿಯಂನೊಳಗೆ ಪ್ರವೇಶಿಸಿದಂತೆ ತಡೆಯೊಡ್ಡಲು ಪ್ರಯತ್ನಿಸಿದರು. ಸಿಎಸ್‌ಕೆ ಜರ್ಸಿ ಹಾಗೂ ಟಿಕೆಟ್‌ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.


ಪಂದ್ಯ ಆರಂಭಕ್ಕೂ ಮುನ್ನ ಪ್ರತಿಭಟನೆಕಾರನ್ನು ಚದುರಿಸಲು ಪೊಲೀಸ್ ಲಾಟಿ ಪ್ರಹಾರವನ್ನು ನಡೆಸಿದ್ದರು. ಪರಿಸ್ಥಿತಿ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ನಾಮ್‌ ತಮಿಳರ್‌, ಟಿವಿಕೆ, ಸಿವಿಕೆ ಇತ್ಯಾದಿ ಸಂಘಟನೆಗಳ ನೂರಾರು ಸದಸ್ಯರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಪ್ರತಿಭಟನೆಯ ಭಾಗವಾಗಿ ಶೂವೊಂದನ್ನು ಸ್ಟೇಡಿಯಂ ಒಳಗಡೆ ಬಿಸಾಡಿರುವುದು ಮತ್ತಷ್ಟು ಕಾವೇರಿದ ವಾತಾವರಣವನ್ನು ಸೃಷ್ಟಿ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌