ಆ್ಯಪ್ನಗರ

ಚೆನ್ನೈ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಪ್ರಿಲ್ 20 ಭಾನುವಾರ ರಾತ್ರಿ 8ಕ್ಕೆ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಸವಾಲನ್ನು ಎದುರಿಸಲಿದೆ.

Vijaya Karnataka Web 20 Apr 2019, 6:08 pm
ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗಳಿಸಿದ ಗೆಲುವಿನ ಆತ್ಮವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರದಂದು ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಆವೃತ್ತಿಯ ಮಗದೊಂದು ಹೈ ವೋಲ್ಟೇಜ್ ಪಂದ್ಯದಲ್ಲಿ ಬದ್ಧ ವೈರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.
Vijaya Karnataka Web kohli-dhoni-04


ಮನೆಯಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ, ಗೆಲುವಿಗಿಂತ ಕಡಿಮೆ ಏನನ್ನು ನಿರೀಕ್ಷಿಸುತ್ತಿಲ್ಲ. ಅಲ್ಲದೆ ಐಪಿಎಲ್ 2019 ಉದ್ಘಾಟನಾ ಪಂದ್ಯದಲ್ಲಿ ಎದುರಾದ ಸೋಲಿಗೆ ತಿರುಗೇಟು ನೀಡುವ ಆತ್ಮವಿಶ್ವಾಸದಲ್ಲಿದೆ.

ಐಪಿಎಲ್‌ನಲ್ಲಿ ಐದನೇ ಶತಕ ಬಾರಿಸಿರುವ ನಾಯಕ ವಿರಾಟ್ ಕೊಹ್ಲಿ ತಂಡದ ಶಕ್ತಿಯಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿರುವ ಎಬಿ ಡಿ ವಿಲಿಯರ್ಸ್ ಚೇತರಿಸಿಕೊಂಡಿದ್ದು, ಆರ್‌ಸಿಬಿ ವಿರುದ್ಧ ನಿರ್ಣಾಯಕ ಕದನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಹಾಗಿದ್ದರೂ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೆಟ್ಟ ಪ್ರದರ್ಶನವು ಹಿನ್ನಡೆಯಾಗಿ ಪರಿಣಮಿಸಿದೆ. ಒಂಬತ್ತು ವರ್ಷಗಳ ಬಳಿಕೆ ತಂಡವನ್ನು ಪ್ರವೇಶಿಸಿರುವ ಡೇಲ್ ಸ್ಟೈನ್ ಪರಿಣಾಮಕಾರಿ ಎನಿಸಿಕೊಂಡರೂ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಹಾಗೂ ಉಮೇಶ್ ಯಾದವ್ ಕೆಟ್ಟ ಪ್ರದರ್ಶನ ಚಿಂತೆಗೆ ಕಾರಣವಾಗಿದೆ.

ಅತ್ತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಿನ ಆಘಾತ ಎದುರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಗಾಯದಿಂದಾಗಿ ಕೊನೆಯ ಪಂದ್ಯ ಮಿಸ್ ಮಾಡಿಕೊಂಡಿರುವ ನಾಯಕ ಮಹೇಂದ್ರ ಸಿಂಗ್ ಧೋನಿ ಆರ್‌ಸಿಬಿ ವಿರುದ್ಧ ಆಡುವ ಭರವಸೆಯಲ್ಲಿದ್ದಾರೆ.

ಚೆನ್ನೈ ವಿರುದ್ಧದ ಪಂದ್ಯ ಅಭಿಮಾನಿಗಳ ಪಾಲಿಗೂ ಅತಿ ಹೆಚ್ಚು ಕುತೂಹಲವನ್ನುಂಟು ಮಾಡಿದೆ. ಪ್ಲೇ-ಆಫ್ ಹಂತ ಪ್ರವೇಶ ಜೀವಂತವಾಗಿರಿಸಲು ಮುಂದಿನ ಎಲ್ಲ ಪಂದ್ಯದಲ್ಲೂ ಗೆಲ್ಲಲೇ ಬೇಕಾದ ಒತ್ತಡಕ್ಕೆ ಆರ್‌ಸಿಬಿ ಸಿಲುಕಿದೆ. ಇವೆಲ್ಲದರ ನಡುವೆ ಆರ್‌ಸಿಬಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌