ಮುಂಬೈ: ಪ್ರಸ್ತುತ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀರಸ ಪ್ರದರ್ಶನ ಮುಂದುವರಿಸಿದೆ. ನೂತನ ನಾಯಕ ರವೀಂದ್ರ ಜಡೇಜಾ ಅವರ ಸಾರಥ್ಯದಲ್ಲಿ ಆಡುತ್ತಿರುವ ಹಾಲಿ ಚಾಂಪಿಯನ್ಸ್ ಚೆನ್ನೈ, ಇನ್ನೂ ಒಂದೇ ಒಂದು ಪಂದ್ಯದಲ್ಲಿ ಗೆಲುವು ಪಡೆಯಲು ಸಾಧ್ಯವಾಗಿಲ್ಲವೆಂಬುದು ಅಭಿಮಾನಿಗಳ ಪಾಲಿಗೆ ಬೇಸರದ ಸಂಗತಿ.
ಇಲ್ಲಿಯವರೆಗೂ ಆಡಿದ ನಾಲ್ಕೂ ಪಂದ್ಯಗಳಲ್ಲಿ ಚೆನ್ನೈ ಸೋಲು ಅನುಭವಿಸಿದೆ. ಆರಂಭಿಕ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ಗಳಿಂದ ಸೋತಿದ್ದರೆ, ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಅಷ್ಟೇ ವಿಕೆಟ್ಗಳ ಅಂತರದಲ್ಲಿ ಪರಾಭವಗೊಂಡಿತ್ತು. ನಂತರ 3 ಮತ್ತು 4ನೇ ಪಂದ್ಯಗಳಲ್ಲಿ ಕ್ರಮವಾಗಿ ಪಂಜಾಬ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಒಪ್ಪಿಕೊಂಡಿತ್ತು.
ಸತತ ನಾಲ್ಕು ಸೋಲುಗಳಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 2022ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ ಖಾತೆ ತೆರೆಯದೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಮಂಗಳವಾರ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕೆ ಇಳಿಯಲಿದೆ. ಅಂದಹಾಗೆ, ಸಿಎಸ್ಕೆ ಆರಂಭಿಕ ವೈಫಲ್ಯಕ್ಕೆ ಪ್ರಮುಖ 5 ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.
ಇಲ್ಲಿಯವರೆಗೂ ಆಡಿದ ನಾಲ್ಕೂ ಪಂದ್ಯಗಳಲ್ಲಿ ಚೆನ್ನೈ ಸೋಲು ಅನುಭವಿಸಿದೆ. ಆರಂಭಿಕ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ಗಳಿಂದ ಸೋತಿದ್ದರೆ, ಎರಡನೇ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ಧ ಅಷ್ಟೇ ವಿಕೆಟ್ಗಳ ಅಂತರದಲ್ಲಿ ಪರಾಭವಗೊಂಡಿತ್ತು. ನಂತರ 3 ಮತ್ತು 4ನೇ ಪಂದ್ಯಗಳಲ್ಲಿ ಕ್ರಮವಾಗಿ ಪಂಜಾಬ್ ಕಿಂಗ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಒಪ್ಪಿಕೊಂಡಿತ್ತು.
ಸತತ ನಾಲ್ಕು ಸೋಲುಗಳಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 2022ರ ಐಪಿಎಲ್ ಟೂರ್ನಿಯ ಪಾಯಿಂಟ್ಸ್ ಟೇಬಲ್ನಲ್ಲಿ ಖಾತೆ ತೆರೆಯದೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಮಂಗಳವಾರ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕೆ ಇಳಿಯಲಿದೆ. ಅಂದಹಾಗೆ, ಸಿಎಸ್ಕೆ ಆರಂಭಿಕ ವೈಫಲ್ಯಕ್ಕೆ ಪ್ರಮುಖ 5 ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.