ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 7 ವಿಕೆಟ್ಗಳ ಭರ್ಜರಿ ಗೆಲುವು ಪಡೆದ ಬೆನ್ನಲ್ಲೆ ಕರ್ನಾಟಕದ ಅಭಿಮಾನಿಗಳು ಫೈನಲ್ ಪಂದ್ಯಕ್ಕೆ ನಮಗೆ ಬೆಂಬಲಿಸಬೇಕೆಂದು ದೇವದತ್ ಪಡಿಕ್ಕಲ್ ಮನವಿ ಮಾಡಿದ್ದಾರೆ. ಶುಕ್ರವಾರ ರಾತ್ರಿ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್ಸಿಬಿ ರಜತ್ ಪಾಟಿದಾರ್(57 ರನ್) ಅರ್ಧಶತಕದ ಹೊರತಾಗಿಯೂ ತನ್ನ ಪಾಲಿನ 20 ಓವರ್ಗಳಿಗೆ 157 ರನ್ಗಳಿಗೆ ಸೀಮಿತವಾಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ರಾಜಸ್ಥಾನ್, ಜೋಸ್ ಬಟ್ಲರ್(106*) ಅವರ ಶತಕದ ಬಲದಿಂದ 18.1 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಗೆಲುವಿನ ದಡ ಸೇರಿತ್ತು.
ಈ ಪಂದ್ಯದ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ಗೆ ಪ್ರವೇಶ ಮಾಡಿತು. ಆ ಮೂಲಕ ಭಾನುವಾರ ಇದೇ ಮೈದಾನದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುವ ಫೈನಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಕಾದಾಟ ನಡೆಸಲಿದೆ.
ಬಟ್ಲರ್ ಶತಕ, ಆರ್ಸಿಬಿ ಕನಸು ಭಗ್ನ, ಫೈನಲ್ಗೆ ರಾಜಸ್ಥಾನ್ ರಾಯಲ್ಸ್!
ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದೇವದತ್ ಪಡಿಕ್ಕಲ್, ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಪ್ರವೇಶ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು ಹಾಗೂ ಆರ್ಸಿಬಿ ಹಾಗೂ ಬೆಂಗಳೂರು ತಂಡದ ಅಭಿಮಾನಿಗಳಿಗೆ ಹಾರ್ಡ್ ಲಕ್ ಎಂದರು. ಇದರ ಜೊತೆಗೆ ಗುಜರಾತ್ ಟೈಟನ್ಸ್ ವಿರುದ್ಧದ ಫೈನಲ್ ಹಣಾಹಣಿಯಲ್ಲಿ ಕರ್ನಾಟಕದ ಹುಡುಗರಿಗೆ ಆರ್ಸಿಬಿ ಅಭಿಮಾನಿಗಳು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.
"ಫೈನಲ್ಗೆ ಪ್ರವೇಶ ಮಾಡಿದ್ದೇವೆ ಹಾಗೂ ಆ ಸ್ಥಾನಕ್ಕೇರಲು ರಾಜಸ್ಥಾನ್ ರಾಯಲ್ಸ್ ತಂಡ ಅರ್ಹವಾಗಿದೆ. ವಿಶೇಷವಾಗಿ ಜೋಸ್ ಬಟ್ಲರ್ ಅವರ ಹೆಸರನ್ನು ಉಲ್ಲೇಖಿಸುತ್ತೇನೆ. ಆರ್ಸಿಬಿ ಹಾಗೂ ಆ ತಂಡದ ಅಭಿಮಾನಿಗಳಿಗೆ ಹಾರ್ಡ್ ಲಕ್. ಗುಜರಾತ್ ಟೈಟನ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಹುಡುಗರಿಗೆ ಆರ್ಸಿಬಿ ಅಭಿಮಾನಿಗಳು ಬೆಂಬಲಿಸಲಿದ್ದಾರೆಂಬ ನಿರೀಕ್ಷೆ ಇದೆ," ಎಂದು ದೇವದತ್ ಪಡಿಕ್ಕಲ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ.
'ಆರ್ಸಿಬಿ ತಂಡದ ಬಗ್ಗೆ ಹೆಮ್ಮೆಯಾಗುತ್ತಿದೆ': ಸೋಲಿನ ಬಳಿಕ ಫಾಫ್ ಡು ಪ್ಲೆಸಿಸ್ ಭಾವುಕ!
ಶೇನ್ ವಾರ್ನ್ ನೆನೆದ ಜೋಸ್ ಬಟ್ಲರ್: "ವಿಶ್ವದ ಅತಿ ದೊಡ್ಡ ಟಿ20 ಟೂರ್ನಿಯ ಫೈನಲ್ನಲ್ಲಿ ಆಡಲು ತುಂಬಾ ಉತ್ಸುಕನಾಗಿದ್ದೇನೆ. ಉದ್ಘಾಟನಾ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ಶೇನ್ ವಾರ್ನ್, ನಮ್ಮ ತಂಡದ ಮೇಲೆ ಅತ್ಯಂತ ಹೆಚ್ಚಿನ ಪ್ರಭಾವ ಬೀರಿದ್ದಾರೆ. ಅವರು ಖಂಡಿತವಾಗಿಯೂ ಮೇಲಿನಿಂದ ನಮ್ಮನ್ನು ನೋಡುವ ಮೂಲಕ ಹೆಮ್ಮೆ ಪಟ್ಟಿರುತ್ತಾರೆ," ಎಂದು ಹೇಳುವ ಮೂಲಕ ಜೋಸ್ ಬಟ್ಲರ್ ಭಾವುಕರಾದರು.
ಈ ಪಂದ್ಯದ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ಗೆ ಪ್ರವೇಶ ಮಾಡಿತು. ಆ ಮೂಲಕ ಭಾನುವಾರ ಇದೇ ಮೈದಾನದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುವ ಫೈನಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಕಾದಾಟ ನಡೆಸಲಿದೆ.
ಬಟ್ಲರ್ ಶತಕ, ಆರ್ಸಿಬಿ ಕನಸು ಭಗ್ನ, ಫೈನಲ್ಗೆ ರಾಜಸ್ಥಾನ್ ರಾಯಲ್ಸ್!
ಗೆಲುವಿನ ಬಳಿಕ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದೇವದತ್ ಪಡಿಕ್ಕಲ್, ರಾಜಸ್ಥಾನ್ ರಾಯಲ್ಸ್ ತಂಡ ಫೈನಲ್ ಪ್ರವೇಶ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು ಹಾಗೂ ಆರ್ಸಿಬಿ ಹಾಗೂ ಬೆಂಗಳೂರು ತಂಡದ ಅಭಿಮಾನಿಗಳಿಗೆ ಹಾರ್ಡ್ ಲಕ್ ಎಂದರು. ಇದರ ಜೊತೆಗೆ ಗುಜರಾತ್ ಟೈಟನ್ಸ್ ವಿರುದ್ಧದ ಫೈನಲ್ ಹಣಾಹಣಿಯಲ್ಲಿ ಕರ್ನಾಟಕದ ಹುಡುಗರಿಗೆ ಆರ್ಸಿಬಿ ಅಭಿಮಾನಿಗಳು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ.
"ಫೈನಲ್ಗೆ ಪ್ರವೇಶ ಮಾಡಿದ್ದೇವೆ ಹಾಗೂ ಆ ಸ್ಥಾನಕ್ಕೇರಲು ರಾಜಸ್ಥಾನ್ ರಾಯಲ್ಸ್ ತಂಡ ಅರ್ಹವಾಗಿದೆ. ವಿಶೇಷವಾಗಿ ಜೋಸ್ ಬಟ್ಲರ್ ಅವರ ಹೆಸರನ್ನು ಉಲ್ಲೇಖಿಸುತ್ತೇನೆ. ಆರ್ಸಿಬಿ ಹಾಗೂ ಆ ತಂಡದ ಅಭಿಮಾನಿಗಳಿಗೆ ಹಾರ್ಡ್ ಲಕ್. ಗುಜರಾತ್ ಟೈಟನ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಹುಡುಗರಿಗೆ ಆರ್ಸಿಬಿ ಅಭಿಮಾನಿಗಳು ಬೆಂಬಲಿಸಲಿದ್ದಾರೆಂಬ ನಿರೀಕ್ಷೆ ಇದೆ," ಎಂದು ದೇವದತ್ ಪಡಿಕ್ಕಲ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ.
'ಆರ್ಸಿಬಿ ತಂಡದ ಬಗ್ಗೆ ಹೆಮ್ಮೆಯಾಗುತ್ತಿದೆ': ಸೋಲಿನ ಬಳಿಕ ಫಾಫ್ ಡು ಪ್ಲೆಸಿಸ್ ಭಾವುಕ!
ಶೇನ್ ವಾರ್ನ್ ನೆನೆದ ಜೋಸ್ ಬಟ್ಲರ್: "ವಿಶ್ವದ ಅತಿ ದೊಡ್ಡ ಟಿ20 ಟೂರ್ನಿಯ ಫೈನಲ್ನಲ್ಲಿ ಆಡಲು ತುಂಬಾ ಉತ್ಸುಕನಾಗಿದ್ದೇನೆ. ಉದ್ಘಾಟನಾ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ಶೇನ್ ವಾರ್ನ್, ನಮ್ಮ ತಂಡದ ಮೇಲೆ ಅತ್ಯಂತ ಹೆಚ್ಚಿನ ಪ್ರಭಾವ ಬೀರಿದ್ದಾರೆ. ಅವರು ಖಂಡಿತವಾಗಿಯೂ ಮೇಲಿನಿಂದ ನಮ್ಮನ್ನು ನೋಡುವ ಮೂಲಕ ಹೆಮ್ಮೆ ಪಟ್ಟಿರುತ್ತಾರೆ," ಎಂದು ಹೇಳುವ ಮೂಲಕ ಜೋಸ್ ಬಟ್ಲರ್ ಭಾವುಕರಾದರು.