ಆ್ಯಪ್ನಗರ

ಪುಲ್ವಾಮಾ ಹುತಾತ್ಮ ಯೋಧರ ಕುಟುಂಬ ಕಲ್ಯಾಣಕ್ಕಾಗಿ 25 ಲಕ್ಷ ನೀಡಿದ ಪಂಜಾಬ್

ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿಯಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್, ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿರುವ ಯೋಧರ ಕುಟುಂಬಗಳ ಕಲ್ಯಾಣಕ್ಕಾಗಿ ಧನ ಸಹಾಯ ಮಾಡುವ ಮೂಲಕ ಮಾದರಿಯಾಗಿದೆ.

Times Now 20 Mar 2019, 11:35 am
ಜೈಪುರ: ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮಗೊಂಡಿದ್ದರು. ಇದು ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತಾಗಿದೆ.
Vijaya Karnataka Web kings-xi-punjab


ಇದೀಗ ಪುಲ್ವಾಮಾದಲ್ಲಿ ಹುತಾತ್ಮಗೊಂಡಿರುವ ಐವರು ಯೋಧರ ಕುಟುಂಬದ ಕಲ್ಯಾಣಕ್ಕಾಗಿ ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿಯು ಒಟ್ಟು 25 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದೆ.

ಹುತಾತ್ಮ ಯೋಧರಾದ ಜೈಮಲ್ ಸಿಂಗ್, ಸುಖಿಂದರ್ ಸಿಂಗ್, ಮಣಿಂದರ್ ಸಿಂಗ್, ಕುಲ್ವಿಂದರ್ ಸಿಂಗ್ ಹಾಗೂ ತಿಲಕ್ ರಾಜ್ ಕುಟುಂಬಕ್ಕೆ ತಲಾ ಐದು ಲಕ್ಷ ರೂ.ಗಳನ್ನು ಪಂಜಾಬ್ ತಂಡವು ನೀಡಿದೆ.

ಈ ಸಂದರ್ಭದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾದ ರವಿಚಂದ್ರನ್ ಅಶ್ವಿನ್ ಸಹ ಉಪಸ್ಥಿತರಿದ್ದರು.

ಈ ಮೊದಲು ಬಿಸಿಸಿಐ ಸಹ ಹುತಾತ್ಮ ಯೋಧರ ಕುಟುಂಬದ ಕಲ್ಯಾಣಕ್ಕಾಗಿ ಸಹಾಯ ಹಸ್ತವನ್ನು ಚಾಚಿತ್ತು. ಅಲ್ಲದೆ ವರ್ಣರಂಜಿತ ಉದ್ಘಾಟನಾ ಸಮಾರಂಭವನ್ನು ಕೈಬಿಡಲು ನಿರ್ಧರಿಸಿತ್ತು.

ಇನ್ನು ಕಳೆದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ, ಹುತಾತ್ಮ ಯೋಧರ ಗೌರವಾರ್ಥ ಆರ್ಮಿ ಕ್ಯಾಪ್ ಧರಿಸಿ ಕಣಕ್ಕಿಳಿದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌