ಆ್ಯಪ್ನಗರ

ವಿಶ್ವಕಪ್‌ನಿಂದ ಕೊಕ್; ಮನೀಶ್ ನೀಡಿದ ಸಂದೇಶವೇನು?

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಫಾರ್ಮ್ ಕಂಡುಕೊಂಡಿರುವ ಕರ್ನಾಟಕದ ಮನೀಶ್ ಪಾಂಡೆ, ತಮ್ಮನ್ನು ವಿಶ್ವಕಪ್‌ಗಾಗಿನ ಭಾರತ ತಂಡದಿಂದ ಹೊರಗಟ್ಟಿರುವ ಆಯ್ಕೆ ಸಮಿತಿಗೆ ಬ್ಯಾಟ್ ಮೂಲಕವೇ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

Vijaya Karnataka Web 3 May 2019, 8:39 pm
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಗುರುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಸೋಲನ್ನು ಅನುಭವಿಸಿರಬಹದು.
Vijaya Karnataka Web manish-pandey-04


ಆದರೆ ಕರ್ನಾಟಕ ಮೂಲದ ಮನೀಶ್ ಪಾಂಡೆ ತೋರಿದ ಹೋರಾಟ ಮನೋಭಾವವು ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮೂಲಕ ತಮ್ಮನ್ನು ಏಕದಿನ ವಿಶ್ವಕಪ್ ತಂಡದಿಂದ ಹೊರಗಟ್ಟಿರುವುದಕ್ಕೆ ತಕ್ಕ ಸಂದೇಶವನ್ನೇ ರವಾನಿಸಿದ್ದಾರೆ.

ರೋಚಕ ಟೈಗೊಂಡು ಪಂದ್ಯದಲ್ಲಿ ಸೂಪರ್ ಓವರ್‌ನಲ್ಲಿ ಹೈದರಾಬಾದ್ ಸೋಲಿಗೆ ಶರಣಾಗಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ 162 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.

ಬಳಿಕ ಹೈದರಾಬಾದ್ ಪರ ಏಕಾಂಕಿ ಹೋರಾಟ ನೀಡಿದ ಪಾಂಡೆ 71 ರನ್ ಗಳಿಸಿ ಅಜೇಯರಾಗುಳಿದರು. 47 ಎಸೆತಗಳನ್ನು ಎದುರಿಸಿದ ಪಾಂಡೆ ಇನ್ನಿಂಗ್ಸ್‌ನಲ್ಲಿ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಸೇರಿದ್ದವು.

ಹಾರ್ದಿಕ್ ಪಾಂಡ್ಯ ಅವರ ಕೊನೆಯ ಓವರ್‌ನಲ್ಲಿ ಗೆಲುವಿಗೆ 17 ರನ್‌ಗಳ ಅವಶ್ಯಕತೆಯಿತ್ತು. ಅತ್ತ ಕೆಚ್ಚೆದೆಯ ಇನ್ನಿಂಗ್ಸ್ ಕಟ್ಟಿದ ಪಾಂಡೆ ಮುಂಬೈ ಪಾಳೇಯದಲ್ಲಿ ನಡುಕ ಸೃಷ್ಟಿಸಿದರು. ಅಂತಿಮ ಎಸೆತವನ್ನು ಸಿಕ್ಸರ್‌ಗಟ್ಟುವ ಮೂಲಕ ರೋಚಕ ಟೈ ಮಾಡುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಸೂಪರ್ ಓವರ್‌ನಲ್ಲಿ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದ್ದರು.

ಈ ಎಲ್ಲದರ ಮೂಲಕ ತಾವೇ 4ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರ ಎಂಬುದನ್ನು ಸಾರಿದರು. ಆದರೆ ಆಯ್ಕೆ ಸಮಿತಿಯಿಂದ ಸೂಕ್ತ ಬೆಂಬಲ ಸಿಗದೇ ಹೋಗಿದ್ದರಿಂದ ವಿಶ್ವಕಪ್ ಕನಸು ನೂಚ್ಚುನೂರಾಗಿದೆ.

ಮನೀಶ್ ಕೊನೆಯ ನಾಲ್ಕು ಇನ್ನಿಂಗ್ಸ್‌ಗಳು: 83*,61,36,71*

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌