ಆ್ಯಪ್ನಗರ

MI vs RR: 'ಶಾಂತವಾಗಿರಿ, ಹಾರ್ದಿಕ್‌ಗೆ ಉಸಿರಾಡಲು ಬಿಡಿ'-ಫ್ಯಾನ್ಸ್‌ಗೆ ರೋಹಿತ್ ಶರ್ಮಾ ಮನವಿ!

Rohit Sharma backs Hardik pandya:ಪ್ರಸ್ತುತ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಹಾರ್ದಿಕ್‌ ಪಾಂಡ್ಯ ಅವರ ವಿರುದ್ಧ ಅಭಿಮಾನಿಗಳ ಆಕ್ರೋಶ ಮುಂದುವರಿದಿದೆ. ಸೋಮವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ತನ್ನ ಮೂರನೇ ಪಂದ್ಯದಲ್ಲಿಯೂ ಮುಂಬೈ ಇಂಡಿಯನ್ಸ್ ಸೋಲು ಅನುಭವಿಸಿತು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹ್ಯಾಟ್ರಿಕ್‌ ಸೋಲಿನ ಆಘಾತ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಹಾರ್ದಿಕ್‌ ಪಾಂಡ್ಯ ವಿರುದ್ಧ ಅಭಿಮಾನಿಗಳು ಗ್ಯಾಲರಿಯಿಂದ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಮನಿಸಿದ ರೋಹಿತ್‌ ಶರ್ಮಾ ಶಾಂತವಾಗಿರಿ ಎಂದು ಮನವಿ ಮಾಡಿದ್ದಾರೆ.

Authored byರಮೇಶ ಕೋಟೆ | Vijaya Karnataka Web 2 Apr 2024, 1:40 am

ಹೈಲೈಟ್ಸ್‌:

  • ಪ್ರಸ್ತುತ 2024ರ ಇಂಡಿಯನ್‌ ಪ್ರೀಮಿಯರ್ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿ ನಡೆಯುತ್ತಿದೆ.
  • ಸೋಮವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಮುಂಬೈ ಇಂಡಿಯನ್ಸ್‌ಗೆ 6 ವಿಕೆಟ್‌ ಸೋಲು.
  • ಹ್ಯಾಟ್ರಿಕ್‌ ಸೋಲಿನಿಂದ ಹಾರ್ದಿಕ್‌ ಪಾಂಡ್ಯ ವಿರುದ್ದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Rohit Sharma
ರೋಹಿತ್ ಶರ್ಮಾ (ಚಿತ್ರ: ಟ್ವಿಟರ್)
ಮುಂಬೈ: ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸೋಲಿನ ಸರಪಳಿ ಮುಂದುವರಿದಿದೆ. ಸೋಮವಾರ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಹಾರ್ದಿಕ್‌ ಪಾಂಡ್ಯ ಅವರ ನಾಯಕತ್ವದ ಮುಂಬೈ ಇಂಡಿಯನ್ಸ್ ಹ್ಯಾಟ್ರಿಕ್‌ ಸೋಲು ಅನುಭವಿಸಿತು. ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ ಹಾಗೂ ನಾಯಕತ್ವದಿಂದ ಕೆಳಗಿಳಿಯುವಂತೆ ಆಗ್ರಹಿಸಿದ್ದಾರೆ.
ಸೋಮವಾರ ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಆರಂಭವಾದಾಗಲೇ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರನ್ನು ರೇಗಿಸಿದರು. ಟಾಸ್ ವೇಳೆ ಸಂಜಯ್ ಮಾಂಜ್ರೇಕರ್‌ ಕೂಡ ಪ್ರೇಕ್ಷಕರನ್ನು ಸಮಾಧಾನಪಡಿಸಲು ಯತ್ನಿಸಿದರು. ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ವೇಳೆಯೂ ಪರಿಸ್ಥಿತಿ ಬದಲಾಗಲಿಲ್ಲ. ಹಾರ್ದಿಕ್ ಪಾಂಡ್ಯ ಅವರು ತೆರೆಗೆ ಬರುತ್ತಿದ್ದಂತೆಯೇ ಅಭಿಮಾನಿಗಳು ರೊಚ್ಚಿಗೆದ್ದರು. ಈ ವೇಳೆ ರೋಹಿತ್ ಶರ್ಮಾ ಪ್ರೇಕ್ಷಕರನ್ನು ಶಾಂತವಾಗಿರುವಂತೆ ಮನವಿ ಮಾಡಿದರು. ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಶರ್ಮಾ ತಮ್ಮ ಕೈಸನ್ನೆಯ ಮೂಲಕ ಪ್ರೇಕ್ಷಕರಿಗೆ ಶಾಂತವಾಗಿರುವಂತೆ ಸೂಚಿಸಿದರು.
MI vs DC ಪಂದ್ಯದ Live ಸ್ಕೋರ್‌ಕಾರ್ಡ್‌

ಮುಂಬೈ ಇಂಡಿಯನ್ಸ್‌ 125ಕ್ಕೆ 9


ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್ ಮಾಡುವಂತಾದ ಮುಂಬೈ ಇಂಡಿಯನ್ಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು 125 ರನ್‌ಗಳಿಗೆ ಸೀಮಿತವಾಯಿತು. ಟ್ರೆಂಟ್‌ ಬೌಲ್ಟ್‌ ಮಾರಕ ಬೌಲಿಂಗ್‌ ದಾಳಿಯಲ್ಲಿ ರೋಹಿತ್ ಶರ್ಮಾ, ನಮನ್ ಧಿರ್ ಹಾಗೂ ಡೆವಾಲ್ಡ್‌ ಬ್ರೆವಿಸ್‌ ಗೋಲ್ಡನ್‌ ಡಕ್‌ಔಟ್‌ ಆದರು. ಯುಜ್ವೇಂದ್ರ ಚಹಲ್‌ ಅವರು ಮುಂಬೈ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನು ನಿಯಂತ್ರಿಸಿದರು. ಆ ಮೂಲಕ ಕೇವಲ 11 ರನ್‌ ನೀಡಿ3 ವಿಕೆಟ್‌ ಕಿತ್ತರು.

ಇದರ ನಡುವೆ ನಾಯಕ ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಜೋಡಿ ಮುರಿಯದ ಐದನೇ ವಿಕೆಟ್‌ಗೆ 56 ರನ್‌ಗಳ ನಿರ್ಣಾಯಕ ರನ್‌ಗಳನ್ನು ಕಲೆ ಹಾಕಿರು. ಇದರ ನೆರವಿನಿಂದ ಮುಂಬೈ 100 ರನ್‌ಗಳ ಗಡಿ ದಾಟಲು ನೆರವಾದರು. ತಿಲಕ್‌ ವರ್ಮಾ 32 ರನ್‌ ಗಳಿಸಿದರೆ, ಹಾರ್ದಿಕ್ ಪಾಂಡ್ಯ 34 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಅತ್ಯುತ್ತಮ ಬ್ಯಾಟ್‌ ಮಾಡುತ್ತಿದ್ದ ಹಾರ್ದಿಕ್‌ಗೆ ಅಭಿಮಾನಿಗಳು ಬೆಂಬಲವನ್ನು ವ್ಯಕ್ತಪಡಿಸಿದರು. ಆದರೆ, ಅವರು ಫೀಲ್ಡಿಂಗ್‌ ವೇಳೆ ಕ್ಯಾಚ್‌ ಬಿಟ್ಟಿದ್ದರಿಂದ ಅಭಿಮಾನಿಗಳು ರೊಚ್ಚಿಗೆದ್ದರು ಹಾಗೂ ನಾಯಕನ ವಿರುದ್ದ ಆಕ್ರೋಸ ವ್ಯಕ್ತಪಡಿಸಿದ್ದಾರೆ.


ರೋಹಿತ್‌ ಶರ್ಮಾ ಮನವಿಗೆ ಬೆಲೆ ಕೊಡ್ತಾರಾ ಫ್ಯಾನ್ಸ್‌?



ಹಾರ್ದಿಕ್‌ ಪಾಂಡ್ಯ ಅವರಿಗೆ ಗೌರವ ನೀಡಿ ಹಾಗೂ ಅವರಿಗೆ ಕಸಿವಿಸಿ ಆಗುವಂತೆ ಮಾಡಬೇಡಿ ಎಂದು ರೋಹಿತ್ ಶರ್ಮಾ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿದ್ದಾರೆ. ಹಾಗಾಗಿ ಮುಂದಿನ ಪಂದ್ಯಗಳಲ್ಲಿ ಹಾರ್ದಿಕ್‌ ಪಾಂಡ್ಯ ವಿಷಯದಲ್ಲಿ ಅಭಿಮಾನಿಗಳು ಯಾವ ರೀತಿ ವರ್ತಿಸಲಿದ್ದಾರೆಂದು ಕಾದು ನೋಡಬೇಕಾಗಿದೆ. ರೋಹಿತ್ ಮಾತಿಗೆ ಅಭಿಮಾನಿಗಳು ಬೆಲೆ ಕೊಡುತ್ತಾರೆ ಅಥವಾ ಇಲ್ಲವಾ ಎಂಬುದು ಕುತೂಹಲಕಾರಿ ಅಂಶವಾಗಿದೆ.
MI vs RR: ಮುಂಬೈಗೆ ಆಘಾತ, ರಾಜಸ್ಥಾನ್‌ ರಾಯಲ್ಸ್‌ಗೆ ಹ್ಯಾಟ್ರಿಕ್‌ ಜಯ!

ಮುಂಬೈ ಇಂಡಿಯನ್ಸ್‌ಗೆ ಹ್ಯಾಟ್ರಿಕ್‌ ಸೋಲು


ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮತ್ತು ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಅವರ ಶಿಸ್ತುಬದ್ದ ಬೌಲಿಂಗ್‌ ದಾಳಿಯ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ 6 ವಿಕೆಟ್‌ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿತು. ಮುಂಬೈ ನೀಡಿದ್ದ 126 ರನ್‌ಗಳ ಗುರಿಯನ್ನು ಹಿಂಬಾಲಿಸಿದ ರಾಜಸ್ಥಾನ್‌ ರಾಯಲ್ಸ್ ತಂಡ, ರಿಯಾನ್‌ ಪರಾಗ್‌ (54*) ಅರ್ಧಶತಕದ ಬಲದಿಂದ 15.3 ಓವರ್‌ಗಳಿಗೆ 127 ರನ್ ಗಳಿಸಿ ಗೆಲುವಿನ ದಡ ಸೇರಿತು. ಮುಂಬೈ ಪರ ಆಕಾಶ್‌ ಮಾಧ್ವಲ್‌ ಅವರು 3 ವಿಕೆಟ್‌ ಪಡೆದು ಯಶಸ್ವಿ ಬೌಲರ್‌ ಎನಿಸಿಕೊಂಡಿದ್ದಾರೆ.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌