ಆ್ಯಪ್ನಗರ

ಕ್ರೀಡಾಸ್ಫೂರ್ತಿ ಮೆರೆದ ಕ್ಯಾಪ್ಟನ್ ಕೂಲ್ ಧೋನಿ

ಈ ನಡುವೆ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಸ್ಫೂರ್ತಿ ಮೆರೆಯುವ ಮೂಲಕ ಗಮನ ಸೆಳೆದಿದ್ದಾರೆ.

Vijaya Karnataka Web 7 Apr 2018, 10:31 pm
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ.
Vijaya Karnataka Web hardik-pandya-injury-02


ಈ ನಡುವೆ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಸ್ಫೂರ್ತಿ ಮೆರೆಯುವ ಮೂಲಕ ಗಮನ ಸೆಳೆದಿದ್ದಾರೆ.

ಮುಂಬಯಿ ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಅಲ್ಲದೆ ಕ್ರೀಸಿನಲ್ಲೇ ಬಿದ್ದು ಚಡಪಡಿಸುತ್ತಿದ್ದರು.


ಈ ಹಂತದಲ್ಲಿ ಪಾಂಡ್ಯ ಬಳಿ ತೆರಳಿದ ಧೋನಿ ಆರೋಗ್ಯವನ್ನು ವಿಚಾರಿಸಿದರು. ಕೇವಲ ಧೋನಿ ಮಾತ್ರವಲ್ಲದೆ ಚೆನ್ನೈ ತಂಡದ ಆಟಗಾರರಾದ ಹರಭಜನ್ ಸಿಂಗ್ ಹಾಗೂ ಡೇಯ್ನ್ ಬ್ರಾವೋ ಸಹ ಹಾರ್ದಿಕ್‌ಗೆ ಪ್ರೋತ್ಸಾಹ ತುಂಬಿದರು.

ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆಯುವಾಗಲೂ ಪೇರ್ ಪ್ಲೇ ಆಟವನ್ನು ತೋರಿರುವ ಚೆನ್ನೈ ಆಟಗಾರರು ಮಗದೊಮ್ಮೆ ಗಮನ ಸೆಳೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌