ಆ್ಯಪ್ನಗರ

ಯುವಿಗೆ ಪಂದ್ಯ ಗೆಲ್ಲಿಸೋ ಸಾಮರ್ಥ್ಯವಿದೆ: ಜಹೀರ್

ಮಧ್ಯಮ ಕ್ರಮಾಂಕದಲ್ಲಿ ಪಂದ್ಯ ಗೆಲ್ಲಿಸುವ ಸಾಮರ್ಥ್ಯದ ಅನುಭವಿ ಆಟಗಾರನ ಅಗತ್ಯವನ್ನು ಮನಗಂಡು ಯುವರಾಜ್ ಸಿಂಗ್ ಅವರನ್ನು ತಂಡಕ್ಕೆ ಆರಿಸಲಾಗಿದೆ ಎಂದು ಮುಂಬೈ ಇಂಡಿಯನ್ಸ್‌ ಕ್ರಿಕೆಟ್ ಚಟುವಟಿಕೆಗಳ ನಿರ್ದೇಶಕರಾಗಿರುವ ಜಹೀರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 20 Mar 2019, 5:40 pm
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್‌ಗಾಗಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಯುವರಾಜ್ ಸಿಂಗ್ ಅವರನ್ನು ಖರೀದಿಸಲು ಯಾರೂ ಮುಂದಾಗಿರಲಿಲ್ಲ. ಕೊನೆಗೂ ಎರಡು ಕೋಟಿ ರೂ.ಗಳ ಮೂಲ ಬೆಲೆಗೆ ಮುಂಬೈ ಇಂಡಿಯನ್ಸ್ ತೆಕ್ಕೆಗೆ ಸೇರಿದ್ದರು.
Vijaya Karnataka Web yuvraj-singh-01


ಇದೀಗ ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್‌ ಕ್ರಿಕೆಟ್ ಚಟುವಟಿಕೆಗಳ ನಿರ್ದೇಶಕರಾಗಿರುವ ಜಹೀರ್ ಖಾನ್, ಯುವಿ ಅವರಿಗೆ ಪಂದ್ಯ ಗೆಲ್ಲಿಸೋ ಸಾಮರ್ಥ್ಯವಿದ್ದು, ಅದಕ್ಕಾಗಿಯೇ ಖರೀದಿಸಿದ್ದೇವೆ ಎಂದು ಹೇಳಿದ್ದಾರೆ.

ಐಪಿಎಲ್ 12ನೇ ಆವೃತ್ತಿಯಲ್ಲಿ ಯುವಿ ಹರಾಜಾಗದಿರುವ ಆತಂಕ ಕಾಡಿತ್ತು. ಕೊನೆಗೆ ಚಾಂಪಿಯನ್ ಆಟಗಾರನ ಬೆನ್ನಿಗೆ ಮುಂಬೈ ಇಂಡಿಯನ್ಸ್ ನಿಂತಿತ್ತು.

ಯುವಿ ಅವರನ್ನು ತಂಡಕ್ಕೆ ಸೇರಿಸಿರುವುದು ಹೆಚ್ಚಿನ ಉತ್ತೇಜನವನ್ನು ನೀಡಿದೆ. ಪಂದ್ಯ ಗೆಲ್ಲಿಸುವ ಸಾಮರ್ಥ್ಯ ಅವರಲ್ಲಿದೆ. ಮಧ್ಯಮ ಕ್ರಮಾಂಕದಲ್ಲಿ ಪಂದ್ಯವನ್ನು ನಿಯಂತ್ರಿಸಬಲ್ಲ ಅನುಭವಿ ಆಟಗಾರನ ಅಗತ್ಯವಿತ್ತು. ಇದನ್ನೇ ಹರಾಜಿನ ವೇಳೆಯೂ ಚರ್ಚಿಸಲಾಗಿತ್ತು ಎಂದರು.

ವಿಶ್ವಕಪ್ ಗಮನದಲ್ಲಿಟ್ಟುಕೊಂಡು ನಾಯಕ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಹಾಗಾಗಿ ಮಧ್ಯಮ ಕ್ರಮಾಂಕದಲ್ಲಿ ಯುವಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎಂದರು.

ಅಂದ ಹಾಗೆ ಐಪಿಎಲ್‌ನಲ್ಲಿ ನಾಲ್ಕನೇ ಬಾರಿಗೆ ಮುಂಬೈ ಇಂಡಿಯನ್ಸ್ ಕಿರೀಟ ಎದುರು ನೋಡುತ್ತಿದೆ. ಪ್ರಸಕ್ತ ಸಾಲಿನಲ್ಲಿ ತನ್ನ ಮೊದಲ ಪಂದ್ಯದಲ್ಲಿ ಮಾರ್ಚ್ 24ರಂದು ಡೆಲ್ಲಿ ಡೇರ್‌ಡೆವಿಲ್ಸ್ ಸವಾಲನ್ನು ಎದುರಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌