ಆ್ಯಪ್ನಗರ

ಪಂತ್ ಫೆಂಟಾಸ್ಟಿಕ್; ಮುಂಬೈ ದಿಕ್ಕಾಪಾಲು

ಇಂಡಿಯನ್ ಪ್ರೀಮಿಯರ್ ಲೀಗ್‌ 12ನೇ ಆವೃತ್ತಿಯಲ್ಲಿ ರಿಷಬ್ ಪಂತ್ ಬಿರುಸಿನ ಅರ್ಧಶತಕ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಈ ಮೂಲಕ ಮುಂಬರುವ ಏಕದಿನ ವಿಶ್ವಕಪ್‌ಗಾಗಿ ತಂಡ ಆರಿಸುವ ಆಯ್ಕೆದಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

Vijaya Karnataka Web 24 Mar 2019, 10:17 pm
ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಉದಯೋನ್ಮುಖ ರಿಷಬ್ ಪಂತ್ ಮಗದೊಮ್ಮೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web Rishabh-pant-01


ಮುಂಬೈ ಇಂಡಿಯನ್ಸ್ ವಿರುದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಪಂತ್ ಕೇವಲ 27 ಎಸೆತಗಳಲ್ಲೇ 78 ರನ್ ಸಿಡಿಸಿದರು.

ಪಂತ್ ಅರ್ಧಶತಕತವಂತೂ ಕೇವಲ 18 ಎಸೆತಗಳಲ್ಲಿ ದಾಖಲಾಗಿದ್ದರು. ಅಲ್ಲದೆ ಅಜೇಯ ಇನ್ನಿಂಗ್ಸ್ ಕಟ್ಟಿದ ಪಂತ್ ತಲಾ ಏಳು ಸಿಕ್ಸರ್ ಹಾಗೂ ಬೌಂಡರಿಗಳನ್ನು ಬಾರಿಸಿದ್ದರು.

ಮೊದಲ ರನ್ನಿಗಾಗಿ ಐದು ಎಸೆತಗಳನ್ನು ಎದುರಿಸಿದ್ದ ಪಂತ್ ಅಲ್ಲಿಂದ ಬಳಿಕ ಹಿಂತಿರುಗಿಯೇ ನೋಡಿಲ್ಲ. ಜಸ್ಪ್ರೀತ್ ಬುಮ್ರಾ ಸೇರಿದಂತೆ ಬಲಿಷ್ಠ ಮುಂಬೈ ದಾಳಿಯನ್ನು ಮನಬಂದಂತೆ ದಂಡಿಸಿದರು.

ಮುಂಬರುವ ಏಕದಿನ ವಿಶ್ವಕಪ್‌ ಭಾರತ ತಂಡಗಾಗಿನ ರೇಸ್‌ನಲ್ಲಿರುವ ಪಂತ್ ಇದೀಗ ತಮ್ಮ ಸಾಮರ್ಥ್ಯಕ್ಕೆ ತಕ್ಕ ಇನ್ನಿಂಗ್ಸ್ ಆಡುವ ಮೂಲಕ ಗಮನ ಸೆಳೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌