ಆ್ಯಪ್ನಗರ

ಆರ್‌ಸಿಬಿ ಕಪ್ತಾನಗಿರಿಯಿಂದ ವಿರಾಟ್ ವಜಾಗೊಳಿಸಬೇಕೇ?

ಐಪಿಎಲ್‌ನಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಆರ್‌ಸಿಬಿ ಕೆಟ್ಟ ಪ್ರದರ್ಶನಕ್ಕೆ ನಾಯಕ ವಿರಾಟ್ ಕೊಹ್ಲಿ ಕಾರಣ ಎಂಬ ಆಕ್ರೋಶ ಬಲವಾಗುತ್ತಿದೆ. ಅಲ್ಲದೆ ನಾಯಕ ಸ್ಥಾನದಿಂದ ವಿರಾಟ್ ಕೊಹ್ಲಿರನ್ನು ತೆಗೆದು ಹಾಕುವಂತೆ ಬೇಡಿಕೆ ಬಲವಾಗುತ್ತಿದೆ.

Vijaya Karnataka Web 9 Apr 2019, 3:06 pm
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿ ಕೆಟ್ಟ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿದ ಎಲ್ಲ ಆರು ಪಂದ್ಯಗಳಲ್ಲಿ ಮುಗ್ಗರಿಸಿದೆ.
Vijaya Karnataka Web virat-kohli-07


ಇದರೊಂದಿಗೆ ಐಪಿಎಲ್‌ ಇತಿಹಾಸದಲ್ಲೇ ಅತಿ ಕೆಟ್ಟ ಆರಂಭವನ್ನು ಪಡೆದಿದೆ. ಐಪಿಎಲ್‌ನಲ್ಲಿ ಚೊಚ್ಚಲ ಕಿರೀಟ ಎದುರು ನೋಡುತ್ತಿರುವ ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಿದೆ.

ಇನ್ನೊಂದು ಪಂದ್ಯವನ್ನು ಸೋತರೆ ಆರ್‌ಸಿಬಿ ಪ್ಲೇ-ಆಫ್ ಸಾಧ್ಯತೆಯು ಬಹುತೇಕ ಕಣ್ಮರೆಯಾಗಲಿದೆ. ಅತ್ತ ನಾಯಕ ವಿರಾಟ್ ಕೊಹ್ಲಿ ಮೇಲೆ ಅತಿ ಹೆಚ್ಚಿನ ಟೀಕೆಗಳು ವ್ಯಕ್ತವಾಗುತ್ತಿದೆ.

ಓರ್ವ ಬ್ಯಾಟ್ಸ್‌ಮನ್ ಆಗಿ ವಿರಾಟ್ ವಿಶ್ವದ ನಂ.1 ಎಂಬುದರಲ್ಲಿ ಸಂಶಯವೇ ಇಲ್ಲ. ಆದರೆ ನಾಯಕತ್ವ ಕೌಶಲ್ಯದಲ್ಲಿ ಹಿಂದೆ ಬಿದ್ದಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.

ಇದೀಗ ಆರ್‌ಸಿಬಿ ಅಭಿಮಾನಿಗಳೇ ವಿರಾಟ್‌ರನ್ನು ನಾಯಕ ಸ್ಥಾನದಿಂದ ಕಿತ್ತು ತೆಗೆಯಬೇಕೆಂಬ ಆಕ್ರೋಶದ ಮಾತುಗಳನ್ನು ಆಡುತ್ತಿದ್ದಾರೆ.

ಐಪಿಎಲ್ ಪ್ರಥಮ ಆವೃತ್ತಿಯಿಂದಲೂ ಒಂದೇ ತಂಡದ ಪರ ಮಾತ್ರ ಆಡಿದ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಆದರೆ ಇದುವರೆಗೆ ಐಪಿಎಲ್ ಪ್ರಶಸ್ತಿ ಕನಸು ಮಾತ್ರ ದೂರವಾಗಿದೆ.

ಐಪಿಎಲ್‌ನಲ್ಲಿ ಕೆಟ್ಟ ಪ್ರದರ್ಶನವು ಮುಂಬರುವ ವಿಶ್ವಕಪ್ ಮೇಲೂ ವಿರಾಟ್ ಮೇಲೆ ಪರಿಣಾಮ ಬೀರಲಿದೆಯೆಂಬ ಆತಂಕವು ಮಡುಗಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌