ಆ್ಯಪ್ನಗರ

ಸ್ಟೇನ್ ಎಕ್ಸ್ ಫಾಕ್ಟರ್, ಚಹಲ್ ವಿಶೇಷ: ಎಬಿ ಡಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಗೆ ಮರಳಿದೆ. ಈ ಮೂಲಕ ಪ್ಲೇ-ಆಫ್ ಪ್ರವೇಶ ಸಾಧ್ಯತೆಯನ್ನು ಜೀವಂತವಾಗಿರಿಸಿದೆ.

Vijaya Karnataka Web 23 Apr 2019, 4:11 pm
ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಆರಂಭದ ಆರು ಪಂದ್ಯಗಳು ಸೋತು ಮುಗ್ಗರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ವಿಜಯದ ಹಾದಿಗೆ ಮರಳಿದೆ.

ಪ್ಲೇ-ಆಫ್ ಪ್ರವೇಶವನ್ನು ಜೀವಂತವಾಗಿರಿಸಲು ಮುಂದಿನ ಎಲ್ಲ ಪಂದ್ಯಗಳಲ್ಲೂ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಒಂದು ರನ್ ಅಂತರದ ರೋಚಕ ಗೆಲುವು ದಾಖಲಿಸಿತು.

ತಂಡದ ಪ್ರತಿಯೊಬ್ಬ ಸದಸ್ಯನೂ ಗೆಲುವಿಗಾಗಿ ಪ್ರಯತ್ನಿಸುತ್ತಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಜೀವಂತವಾಗಿರಲು ಸಾಂಘಿಕ ಹೋರಾಟವನ್ನು ನೀಡುತ್ತಿದ್ದೇವೆ ಎಂದಿದ್ದಾರೆ.

ನಮ್ಮ ಫೀಲ್ಡಿಂಗ್ ಸುಧಾರಣೆ ಕಂಡಿದೆ. ಒತ್ತಡದ ಪರಿಸ್ಥಿತಿಯಲ್ಲೂ ಉತ್ತಮ ನಿರ್ವಹಣೆ ನೀಡುತ್ತಿದ್ದೇವೆ ಎಂದರು.

ಕೌಲ್ಟರ್ ನೈಲ್ ಗಾಯಾಳುವಾದಾಗ ಟೂರ್ನಿಯ ಮಧ್ಯದಲ್ಲಿ ಡೇಲ್ ಸ್ಟೇನ್ ತಂಡವನ್ನು ಸೇರಿಕೊಂಡಿದ್ದರು. ಈಗ ಸ್ಟೇನ್ ಎಕ್ಸ್-ಫಾಕ್ಟರ್ ಆಗಿ ಪರಿಣಮಿಸಿದ್ದಾರೆ ಎಂದು ವಿಲಿಯರ್ಸ್ ನುಡಿದರು.

ಹಾಗೆಯೇ ಟೂರ್ನಿಯುದ್ಧಕ್ಕೂ ಸ್ಥಿರ ಪ್ರದರ್ಶನ ನೀಡುತ್ತಿರುವ ಚಹಲ್ ಅವರನ್ನು ವಿಶೇಷ ಎಂದು ಕೊಂಡಾಡಿದ್ದಾರೆ. ಅಲ್ಲದೆ ಜಾಣ ಬೌಲರ್ ಎಂದು ಶ್ಲಾಘಿಸಿದ್ದಾರೆ.

ಚಹಲ್ ಭಾರತ ತಂಡವನ್ನು ಚೆಸ್ ಚಾಂಪಿಯನ್‌ಶಿಪ್‌ನಲ್ಲೂ ಪ್ರತಿನಿಧಿಸಿದ್ದಾರೆ. ಹಾಗಾಗಿ ಲೆಗ್ ಬ್ರೇಕ್ ಬೌಲಿಂಗ್‌ನಲ್ಲಿ ತಮ್ಮದೆ ಆದ ರಣತಂತ್ರ ರೂಪಿಸುತ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌