ಆ್ಯಪ್ನಗರ

ಆರ್‌ಸಿಬಿ ವಿರುದ್ಧ ಸರ್ವಾಂಗೀಣ ಪ್ರದರ್ಶನ: ವಿವಿಎಸ್‌ ಲಕ್ಷ್ಮಣ್‌

ಆರ್‌ಸಿಬಿ ವಿರುದ್ಧ ಸನ್‌ರೈಸರ್ಸ್‌ ಸರ್ವಾಂಗೀಣ ಪ್ರದರ್ಶನ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka 4 May 2019, 10:35 am
ಬೆಂಗಳೂರು: ತವರಿನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಶನಿವಾರದ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ ಎಂದು ಸನ್‌ರೈಸರ್ಸ್‌ ಸಲಹೆಗಾರ ವಿವಿಎಸ್‌ ಲಕ್ಷ್ಮಣ್‌ ಹೇಳಿದ್ದಾರೆ.
Vijaya Karnataka Web SRH


ಮುಂಬಯಿ ವಿರುದ್ಧದ ಪಂದ್ಯ ಸನ್‌ರೈಸರ್ಸ್‌ ಪಾಲಿಗೆ ಮರೀಚಿಕೆಯಂತಾಯಿತು. ವಾಂಖೆಡೆಯಲ್ಲಿ ಬಲಿಷ್ಠ ತಂಡದ ವಿರುದ್ಧ ಸಾಧ್ಯವಾದಷ್ಟು ಉತ್ತಮ ಪ್ರದರ್ಶನವನ್ನೇ ನೀಡಿದೆವು. ಆದರೆ, ಕೊನೆಯಲ್ಲಿ ಕೊಂಚ ಎಡವಿದೆವು. ಇನ್ನು, ಪ್ಲೇಆಫ್‌ ಸ್ಪರ್ಧೆಯಲ್ಲಿ ಉಳಿದುಕೊಳ್ಳಬೇಕಾದರೆ, ಶನಿವಾರ ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕಾದ ಒತ್ತಡದಲ್ಲಿದ್ದೇವೆ.

3ನೇ ಕ್ರಮಾಂಕಕ್ಕೆ ಬಡ್ತಿ ಪಡೆದಂದಿನಿಂದ ಭರ್ಜರಿ ಪ್ರದರ್ಶನ ನೀಡುತ್ತಿರುವ ಮನೀಶ್‌ ಪಾಂಡೆ ಮತ್ತು ಮೊಹಮ್ಮದ್‌ ನಬಿ ದ್ವಯರ ಸಂದರ್ಭೋಚಿತ ಬ್ಯಾಟಿಂಗ್‌ನಿಂದಾಗಿ ಟೈ ಮಾಡಿಕೊಂಡೆವು.

ಆದರೆ, ಸೂಪರ್‌ ಓವರ್‌ನಲ್ಲಿ ಮೊದಲ ಎಸೆತದಲ್ಲೇ ವಿಕೆಟ್‌ ಉರುಳಿದ್ದು ನಮಗೆ ಮುಳುವಾಯಿತು. ಏನೇ ಇರಲಿ, ನಮ್ಮದು ಬಲಾಢ್ಯ ತಂಡವೆಂಬುದರಲ್ಲಿ ಅನುಮಾನವಿಲ್ಲ. ಅಂಕಪಟ್ಟಿಯೇ ಅದನ್ನು ಸಾರಿ ಹೇಳುತ್ತದೆ. ಆರ್‌ಸಿಬಿ ವಿರುದ್ಧ ಸನ್‌ರೈಸರ್ಸ್‌ ಸರ್ವಾಂಗೀಣ ಪ್ರದರ್ಶನ ನೀಡಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌