ಆ್ಯಪ್ನಗರ

ಮಳೆಯಲ್ಲೂ ಆರ್‌ಸಿಬಿಗೆ ಚಿಯರ್ ಹಾಡಿದ ರಾಹುಲ್ ದ್ರಾವಿಡ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯಕ್ಕೆ ಮಳೆಯ ಅಡ್ಡಿಯಾಗಿದೆ. ಈ ನಡುವೆ ಮಾಜಿ ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಚಿಯರ್ ಹಾಡುವ ಮೂಲಕ ಗಮನ ಸೆಳೆದಿದ್ದಾರೆ.

Vijaya Karnataka Web 30 Apr 2019, 10:59 pm
Vijaya Karnataka Web rahul-dravid
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್‌ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅತಿ ಕೆಟ್ಟ ಪ್ರದರ್ಶನವನ್ನು ನೀಡರಬಹುದು.

ಟೂರ್ನಿಯಿಂದಲೇ ಬಹುತೇಕ ಹೊರನಡೆದಿರಬಹುದು. ಈ ನಡುವೆ ಗೆಲ್ಲಲೇ ಬೇಕಾದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೆ ಮಳೆ ಅಡ್ಡಿಯಾಗಿರಬಹುದು.

ಈ ಎಲ್ಲದರ ನಡುವೆಯೂ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ತಡೆಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್, ಬೆಂಗಳೂರು ತಂಡಕ್ಕೆ ಚಿಯರ್ ಹಾಡಿರುವುದು ಅವರ ಹೃದಯ ವೈಶಾಲ್ಯತೆಗೆ ಸಾಕ್ಷಿಯಾಗಿದೆ.

ರಾತ್ರಿ 8 ಗಂಟೆಯ ಹೊತ್ತಿಗೆ ಸುರಿಯಲಾರಂಭಿಸಿದ ಮಳೆಯು 10.30 ಗಂಟೆಯ ವರೆಗೂ ಮುಂದುವರಿದಿತ್ತು. ಅಭಿಮಾನಿಗಳಂತೂ ಆರ್‌ಸಿಬಿ ಪಂದ್ಯ ನೋಡಲು ಕಾತರದಲ್ಲಿದ್ದರು. ಇದರಂತೆ ದೇವರಲ್ಲಿ ಬೇಡಿಕೊಂಡಿದ್ದರು.

ಅತ್ತ ರಾಹುಲ್ ದ್ರಾವಿಡ್ ಕೂಡಾ ಮಳೆಯ ನಡುವೆಯೇ ಇತ್ತಂಡಗಳಿಗೂ ಚಿಯರ್ ಹೇಳುವ ಮೂಲಕ ಗಮನ ಸೆಳೆದಿದ್ದಾರೆ. ಇದು ಅಪ್ಪಟ್ಟ ಕ್ರಿಕೆಟ್ ಪ್ರೀತಿಗೆ ಸಾಕ್ಷಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌