ಆ್ಯಪ್ನಗರ

ರಾಜಸ್ಥಾನ್‌ಗೆ 'ಜೈ' ಹಾಡಿದ ಉನಾದ್ಕಟ್

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಮಿಂಚಿದ ಜೈದೇವ್ ಉನಾದ್ಕಟ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

Vijaya Karnataka Web 27 Apr 2019, 11:49 pm
Vijaya Karnataka Web jaydev-unadkat-01
ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿರುವ ರಾಜಸ್ಥಾನ್ ರಾಯಲ್ಸ್ ಪ್ಲೇ-ಆಫ್ ಕನಸು ಜೀವಂತವಾಗಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಹೈದರಾಬಾದ್ ಮನೀಷ್ ಪಾಂಡೆ (61) ಅರ್ಧಶತಕದ ಹೊರತಾಗಿಯೂ ಎಂಟು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಲಷ್ಟೇ ಶಕ್ತವಾಯಿತು.

ಬಳಿಕ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ಅಜಿಂಕ್ಯ ರಹಾನೆ (39), ಲಯಮ್ ಲಿವಿಂಗ್‌ಸ್ಟೋನ್ (44) ಹಾಗೂ ಸಂಜು ಸ್ಯಾಮ್ಸನ್ (48*) ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಇನ್ನು ಐದು ಎಸೆತಗಳು ಬಾಕಿ ಉಳಿದಿರುವಂತೆಯೇ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಇದರೊಂದಿಗೆ ಮನೆಯಂಗಣದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಗೆಲುವಿನೊಂದಿಗೆ ತೆರೆ ಎಳೆಯಿತು.

ಹೈದರಾಬಾದ್ ಓಟಕ್ಕೆ ಬ್ರೇಕ್ ಹಾಕಿದ ಎಡಗೈ ವೇಗಿ ಜೈದೇವ್ ಉನಾದ್ಕಟ್ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಕೇವಲ 26 ರನ್ ತೆತ್ತರಲ್ಲದೆ ಎರಡು ವಿಕೆಟ್ ಕಿತ್ತು ಮಿಂಚಿದರು. ಈ ಮೂಲಕ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರವಾದರು.

ಅಷ್ಟೇ ಯಾಕೆ ಮೂರು ಅತ್ಯದ್ಭುತ ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಫೀಲ್ಡಿಂಗ್‌ನಲ್ಲೂ ತಮ್ಮ ಸಾಮರ್ಥ್ಯವನ್ನು ಮೆರೆದರು. ಅಲ್ಲದೆ ತಾವೇಕೆ ಐಪಿಎಲ್ ಹರಾಜಿನಲ್ಲಿ ಕೋಟಿ ಕೋಟಿ ರೂಪಾಯಿಗಳಿಗೆ ಹರಾಜುಗೊಂಡಿದ್ದೇನೆ ಎಂಬುದನ್ನು ಸಾಬೀತು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌