ಆ್ಯಪ್ನಗರ

ಮತ್ತೆ ಒಂದಾಗಲಿದ್ದಾರೆ ವಿರಾಟ್ ಕೊಹ್ಲಿ- ಸಂಜಯ್ ಬಂಗಾರ್?

ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸ್ಥಾನದಿಂದ ತೆರವುಗೊಂಡಿರುವ ಮಾಜಿ ಆಟಗಾರ ಸಂಜಯ್ ಬಂಗಾರ್, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆಯಿದೆ.

Vijaya Karnataka Web 25 Aug 2019, 4:56 pm
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸ್ಥಾನದಿಂದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರನ್ನು ತೆರವುಗೊಳಿಸಲಾಗಿದೆ. ಆದರೂ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಸಂಜಯ್ ಬಂಗಾರ್ ಮತ್ತೆ ಜತೆಯಾಗಿ ಕಾರ್ಯ ನಿರ್ವಹಿಸುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿದೆ.
Vijaya Karnataka Web sanjay-bangar


ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ಆಗಿ ಸಂಜಯ್ ಬಂಗಾರ್ ನೇಮಕಗೊಳ್ಳುವ ಸಾಧ್ಯತೆಯಿದೆ. ಈ ಮೂಲಕ ಕೊಹ್ಲಿ ಹಾಗೂ ಬಂಗಾರ್ ಮಗದೊಮ್ಮೆ ಒಂದಾಗಲಿದ್ದಾರೆ.

ಈ ಮೊದಲು ಆರ್‌ಸಿಬಿ ಫ್ರಾಂಚೈಸಿಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿತ್ತು. ಮುಖ್ಯ ಕೋಚ್ ಸ್ಥಾನಕ್ಕೆ ಗ್ಯಾರಿ ಕರ್ಸ್ಟನ್ ಬದಲು ಆಸ್ಟ್ರೇಲಿಯಾ ಮಾಜಿ ಆಟಗಾರ ಸೈಮನ್ ಕ್ಯಾಟಿಚ್ ನೇಮಕಗೊಳಿಸಲಾಗಿದೆ. ಹಾಗೆಯೇ ಕ್ರಿಕೆಟ್ ಚಟುವಟಿಕೆಯ ನಿರ್ದೇಶಕರಾಗಿ ನ್ಯೂಜಿಲೆಂಡ್‌ನ ಮಾಜಿ ಆಟಗಾರ ಮೈಕ್ ಹೆಸ್ಸನ್ ನೇಮಕಗೊಳಿಸಲಾಗಿದೆ.

ಐಪಿಎಲ್‌ನಲ್ಲಿ ಆರ್‌ಸಿಬಿ ತಂಡವು ಇನ್ನಷ್ಟೇ ಚೊಚ್ಚಲ ಕಿರೀಟವನ್ನು ಗೆಲ್ಲಬೇಕಿದೆ. ಇದರಂತೆ ಕೋಟಿಂಗ್ ಪ್ಯಾನೆಲ್‌ನಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಾಗಿದೆ. ಸಂಜಯ್ ಬಂಗಾರ್ ಕೂಡಾ ಆರ್‌ಸಿಬಿ ಪಾಳೇಯವನ್ನು ಸೇರಿಕೊಂಡರೆ ಮತ್ತಷ್ಟು ಬಲಿಷ್ಠವಾಗುವುದು ಖಚಿತ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌