ಆ್ಯಪ್ನಗರ

ಕೋಚ್ ಹುದ್ದೆಗೆ ಸಂದರ್ಶನ ಕೈಬಿಡಲು ಬಿಸಿಸಿಐ ಚಿಂತನೆ

ಕ್ರಿಕೆಟ್ ಅಡ್ವೈಸರಿ ಕೌನ್ಸಿಲ್ (ಸಿಎಸಿ) ಸದಸ್ಯ ಸೌರವ್ ಗಂಗೂಲಿ ಹಾಗೂ ಟೀಂ ಇಂಡಿಯಾದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ತಂಡದಿಂದ ಹೊರಗುಳಿದ ಬಳಿಕ ಕೋಚ್ ಹುದ್ದೆಯ ಸಂದರ್ಶನ ಪ್ರಕ್ರಿಯೆಯಿಂದ ದೂರವಿರಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತನೆ ನಡೆಸುತ್ತಿದೆ.

ಟೈಮ್ಸ್ ಆಫ್ ಇಂಡಿಯಾ 9 Jul 2017, 11:23 am
ಹೊಸದಿಲ್ಲಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಯ್ಕೆ ಪ್ರಕ್ರಿಯೆಯಲ್ಲಿ ಸಂದರ್ಶನ ಭಾಗವನ್ನು ಕೈ ಬಿಡಲು ಬಿಸಿಸಿಐ ಚಿಂತನೆ ನಡೆಸಿದೆ.
Vijaya Karnataka Web  bcci mulls scrapping interview process for coach
ಕೋಚ್ ಹುದ್ದೆಗೆ ಸಂದರ್ಶನ ಕೈಬಿಡಲು ಬಿಸಿಸಿಐ ಚಿಂತನೆ


ಹಿರಿಯರ ತಂಡದಿಂದ ಹೊರಬಿದ್ದ ಬಳಿಕ ಸಿಎಸಿ ಸದಸ್ಯ ಸೌರವ್‌ ಗಂಗೂಲಿ ಹಾಗೂ ತಂಡದ ಮಾಜಿ ನಿರ್ದೇಶಕ ರವಿ ಶಾಸ್ತ್ರಿ ನಡುವೆ ಕಳೆದ ವರ್ಷ ಮಾತಿನ ಚಕಮಕಿ ನಡೆದಿತ್ತು. ಇಂಥ ಅಹಿತರ ಘಟನೆ ಪುನರಾರ್ವತನೆ ಆಗದಂತೆ ಮುನ್ನೆಚ್ಚರಿಕೆ ವಹಿಸಿರುವ ಬಿಸಿಸಿಐ ಈ ಬಗ್ಗೆ ಚಿಂತನೆ ನಡೆಸಿದೆ.

ಸಿಎಸಿ ಸದಸ್ಯರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿ ಅವರೇ ಹೊಸ ತರಬೇತಿದಾರರ ನೇಮಕ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲ್ಲಿ ಎಂದು ಟೀಂ ಇಂಡಿಯಾ ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಹಾಗೂ ತಂಡದ ಹಿರಿಯ ಆಟಗಾರರ ವಿರೋಧದ ಹಿನ್ನೆಲೆಯಲ್ಲಿ ಅನಿಲ್ ಕುಂಬ್ಳೆ ಕೋಚ್ ಹುದ್ದೆಯ ರೇಸ್‌ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

'ಗಂಗೂಲಿ ಹಾಗೂ ರವಿ ಶಾಸ್ತ್ರಿ ಅವರನ್ನೇ ಪುನರಾವರ್ತಿಸಬಾರದು ಎಂದು ಬೋರ್ಡ್ ಸದಸ್ಯರು ಅಭಿಪ್ರಾಯಪಟ್ಟಿದ್ದು, ಶೀಘ್ರದಲ್ಲಿಯೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕ್ರಿಕೆಟ್ ಮಂಡಳಿಯ ಉನ್ನತ ಮೂಲಗಳು ತಿಳಿಸಿವೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನ. ಅನಿಲ್‌ ಕುಂಬ್ಳೆ ರಾಜೀನಾಮೆ ನೀಡಿದ ಬಳಿಕ ಕೋಚ್ ಹುದ್ದೆಗೆ ಭಾರತೀಯ ಕ್ರಿಕೆಟ್ ಮಂಡಳಿ ಎರಡನೇ ಬಾರಿ ಅರ್ಜಿ ಆಹ್ವಾನಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌