ಆ್ಯಪ್ನಗರ

ರಾಹುಲ್, ಮನೀಷ್ ಇನ್; 12ರ ಬಳಗ ಪ್ರಕಟ

ಕೋಲ್ಕತ್ತಾದಲ್ಲಿ ಭಾನುವಾರ ಸಂಜೆ ನಡೆಯಲಿದೆ ಮೊದಲ ಕದನ

Vijaya Karnataka Web 4 Nov 2018, 3:13 pm
ಕೋಲ್ಕತ್ತಾ: ಇಲ್ಲಿನ ಈಡೆನ್ ಗಾರ್ಡೆನ್ಸ್ ಮೈದಾನದಲ್ಲಿ ಭಾನುವಾರ ಸಂಜೆ ಪ್ರವಾಸಿ ವೆಸ್ಟ್‌ಇಂಡೀಸ್ ವಿರುದ್ಧ ಆರಂಭವಾಗಲಿರುವ ಮೊದಲ ಟ್ವೆಂಟಿ-20 ಪಂದ್ಯಕ್ಕೆ 12ರ ಬಳಗದ ಭಾರತ ತಂಡವನ್ನು ಪ್ರಕಟಿಸಲಾಗಿದೆ.
Vijaya Karnataka Web kl-rahul-team-india


ಇದರಂತೆ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕರ್ನಾಟಕದ ಮನೀಷ್ ಪಾಂಡೆ ಹಾಗೂ ಕೆಎಲ್ ರಾಹುಲ್ ತಂಡವನ್ನು ಸೇರಿಕೊಂಡಿದ್ದಾರೆ.

ಇನ್ನು ಆರಂಭಿಕನಾಗಿ ಶಿಖರ್ ಧವನ್ ಮತ್ತು ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್, ಕೃುಣಾಲ್ ಪಾಂಡ್ಯ ಹಾಗೂ ವಿಕೆಟ್ ಕೀಪರ್ ರಿಷಭ್ ಪಂತ್ (ವಿಕೆಟ್ ಕೀಪರ್) ಕಾಣಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್ ಹಾಗೂ ಜಸ್ಪ್ರೀತ್ ಬುಮ್ರಾ ಪ್ರಮುಖ ವೇಗಿಗಳಾಗಿರಲಿದ್ದು, ಇವರ ಜೊತೆಗೆ ಯುವ ಎಡಗೈ ವೇಗಿ ಖಲೀಲ್ ಅಹ್ಮದ್ ಕೂಡಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಯುಜ್ವೇಂದ್ರ ಚಹಲ್ ಹಾಗೂ ಕುಲ್‌ದೀಪ್ ಯಾದವ್ ಸ್ಪಿನ್ನಿಂಗ್ ಅಸ್ತ್ರವಾಗಲಿದ್ದಾರೆ. ಈ ಪೈಕಿ ಯಾರು ಅವಕಾಶ ವಂಚಿತವಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಹಿರಿಯ ಅನುಭವಿ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ಹಿನ್ನಲೆಯಲ್ಲಿ ಯುವ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುತ್ತದ್ದಾರೆ.

ಇನ್ನು ವಿರಾಟ್ ಕೊಹ್ಲಿ ಅವರ ನಂ.3ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌