ಕೋಲ್ಕತಾ: ಭಾರತದ ಎರಡು ಬಾರಿಯ ವಿಶ್ವಕಪ್ ವಿಜೇತ ಹೀರೊ ಹಿರಿಯ ಎಡಗೈ ಆಲ್ರೌಂಡರ್ ಯುವರಾಜ್ ಸಿಂಗ್, ಮಗದೊಂದು ವಿಶ್ವಕಪ್ ಗುರಿಯಾಗಿರಿಸಿಕೊಂಡಿದ್ದಾರೆ. ಕ್ರಿಕೆಟ್ ನನಗೆ ಸರ್ವಸ್ವವನ್ನು ನೀಡಿದೆ. ನಾನು ಕ್ರಿಕೆಟ್ ಬಿಟ್ಟು ಹೋಗುವಾಗ ಶ್ರೇಷ್ಠ ಮಟ್ಟದಲ್ಲಿ ಇರಲು ಬಯಸುತ್ತೇನೆ. ಯಾವುದೇ ಬೇಸರ ಕಾಡುವುದನ್ನು ನಾನು ಇಷ್ಟಪಡುವುದಿಲ್ಲ ಎಂದು 2007 ಚೊಚ್ಚಲ ಟ್ವೆಂಟಿ-20 ಹಾಗೂ 2011 ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಅಭಿಪ್ರಾಯಪಟ್ಟರು.
2019 ಆವೃತ್ತಿಗಾಗಿನ ಐಪಿಎಲ್ ಹರಾಜಿನಲ್ಲಿ 1 ಕೋಟಿ ರೂ.ಗಳ ಮೂಲ ಬೆಲೆಗೆ 37ರ ಹರೆಯದ ಯುವಿ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿತ್ತು.
ಇದರಂತೆ ದೇಶೀಯ ಸೇರಿದಂತೆ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನದೊಂದಿಗೆ 2019 ವಿಶ್ವಕಪ್ ವೇಳೆಗೆ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಗುರಿ ಇರಿಸಿಕೊಂಡಿದ್ದಾರೆ.
ನನ್ನ ಶ್ರೇಷ್ಠ ನಿರ್ವಹಣೆ ನೀಡಲು ಪ್ರಯತ್ನಿಸುತ್ತಿದ್ದೇನೆ. ರಣಜಿ ಟ್ರೋಫಿಯಲ್ಲಿ ಫೈನಲ್ ಲೀಗ್ ಮ್ಯಾಚ್ ಇದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದ್ದೇನೆ. ಅಲ್ಲಿಂದ ಬಳಿಕ ರಾಷ್ಟ್ರೀಯ ಟ್ವೆಂಟಿ-20 ಹಾಗೂ ಐಪಿಎಲ್ ಟೂರ್ನಿಗಳಿವೆ. ಇಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಭರವಸೆಯಿದೆ ಎಂದರು.
ಅದೇ ಹೊತ್ತಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಇತಿಹಾಸ ರಚಿಸಿರುವ ವಿರಾಟ್ ಕೊಹ್ಲಿ ಬಳಗವನ್ನು ಪ್ರಶಂಸಿಸಲು ಯುವಿ ಮರೆಯಲಿಲ್ಲ. ವಿಶೇಷವಾಗಿಯೂ ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಶ್ರೇಷ್ಠ ಪ್ರದರ್ಶನ ನೀಡಿದರು. ಕೆಲ ಕ್ರಮಾಂಕದಲ್ಲಿ ರಿಷಬ್ ಪಂತ್ ರನ್ ಗಳಿಸಿರುವುದು ಉತ್ತಮ ಸಂಕೇತವಾಗಿದೆ ಎಂದರು.
2019 ಆವೃತ್ತಿಗಾಗಿನ ಐಪಿಎಲ್ ಹರಾಜಿನಲ್ಲಿ 1 ಕೋಟಿ ರೂ.ಗಳ ಮೂಲ ಬೆಲೆಗೆ 37ರ ಹರೆಯದ ಯುವಿ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿತ್ತು.
ಇದರಂತೆ ದೇಶೀಯ ಸೇರಿದಂತೆ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನದೊಂದಿಗೆ 2019 ವಿಶ್ವಕಪ್ ವೇಳೆಗೆ ತಂಡಕ್ಕೆ ಕಮ್ ಬ್ಯಾಕ್ ಮಾಡುವ ಗುರಿ ಇರಿಸಿಕೊಂಡಿದ್ದಾರೆ.
ನನ್ನ ಶ್ರೇಷ್ಠ ನಿರ್ವಹಣೆ ನೀಡಲು ಪ್ರಯತ್ನಿಸುತ್ತಿದ್ದೇನೆ. ರಣಜಿ ಟ್ರೋಫಿಯಲ್ಲಿ ಫೈನಲ್ ಲೀಗ್ ಮ್ಯಾಚ್ ಇದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದ್ದೇನೆ. ಅಲ್ಲಿಂದ ಬಳಿಕ ರಾಷ್ಟ್ರೀಯ ಟ್ವೆಂಟಿ-20 ಹಾಗೂ ಐಪಿಎಲ್ ಟೂರ್ನಿಗಳಿವೆ. ಇಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಭರವಸೆಯಿದೆ ಎಂದರು.
ಅದೇ ಹೊತ್ತಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಇತಿಹಾಸ ರಚಿಸಿರುವ ವಿರಾಟ್ ಕೊಹ್ಲಿ ಬಳಗವನ್ನು ಪ್ರಶಂಸಿಸಲು ಯುವಿ ಮರೆಯಲಿಲ್ಲ. ವಿಶೇಷವಾಗಿಯೂ ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಶ್ರೇಷ್ಠ ಪ್ರದರ್ಶನ ನೀಡಿದರು. ಕೆಲ ಕ್ರಮಾಂಕದಲ್ಲಿ ರಿಷಬ್ ಪಂತ್ ರನ್ ಗಳಿಸಿರುವುದು ಉತ್ತಮ ಸಂಕೇತವಾಗಿದೆ ಎಂದರು.