ಆ್ಯಪ್ನಗರ

4ನೇ ಒಡಿಐ ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ

ಭಾರತ-ಪಾಕ್‌ ಗಡಿಯಲ್ಲಿನ ಉದ್ವಿಗ್ನತೆ ಹೀಗೆಯೇ ಮುಂದುವರಿದ್ದಲ್ಲಿ ಮೊಹಾಲಿ ಮತ್ತು ದಿಲ್ಲಿಯಲ್ಲಿ ನಿಗದಿಯಾಗಿರುವ ಆಸ್ಪ್ರೇಲಿಯಾ ವಿರುದ್ಧದ 4ನೇ ಹಾಗೂ 5ನೇ ಏಕದಿನ ಪಂದ್ಯಗಳು ಕ್ರಮವಾಗಿ ಬೆಂಗಳೂರು ಮತ್ತು ಕೋಲ್ಕೊತಾಗೆ ಸ್ಥಳಾಂತರವಾಗುವ ಸಾಧ್ಯತೆಗಳಿವೆ.

Agencies 1 Mar 2019, 5:00 am
ಬೆಂಗಳೂರು : ಭಾರತ-ಪಾಕ್‌ ಗಡಿಯಲ್ಲಿನ ಉದ್ವಿಗ್ನತೆ ಹೀಗೆಯೇ ಮುಂದುವರಿದ್ದಲ್ಲಿ ಮೊಹಾಲಿ ಮತ್ತು ದಿಲ್ಲಿಯಲ್ಲಿ ನಿಗದಿಯಾಗಿರುವ ಆಸ್ಪ್ರೇಲಿಯಾ ವಿರುದ್ಧದ 4ನೇ ಹಾಗೂ 5ನೇ ಏಕದಿನ ಪಂದ್ಯಗಳು ಕ್ರಮವಾಗಿ ಬೆಂಗಳೂರು ಮತ್ತು ಕೋಲ್ಕೊತಾಗೆ ಸ್ಥಳಾಂತರವಾಗುವ ಸಾಧ್ಯತೆಗಳಿವೆ.
Vijaya Karnataka Web 4th odi face possibility of being relocatedh
4ನೇ ಒಡಿಐ ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ


ಈ ಕುರಿತ ಪ್ರಶ್ನೆಗೆ ವಿಜಯ ಕರ್ನಾಟಕಕ್ಕೆ ಪ್ರತಿಕ್ರಿಯಿಸಿದ ಕೆಎಸ್‌ಸಿಎ ವಕ್ತಾರ ವಿನಯ್‌ ಮೃತ್ಯುಂಜಯ, ''ಪಂದ್ಯಗಳು ಬದಲಾವಣೆಯಾಗುವ ಬಗ್ಗೆ ಬಿಸಿಸಿಐನಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಒಂದು ವೇಳೆ ಪಂದ್ಯ ಆಯೋಜನೆಗೆ ಸೂಚಿಸಿದರೆ ನಾವು ಸಿದ್ಧರಿದ್ದೇವೆ,'' ಎಂದರು.

4ನೇ ಪಂದ್ಯವನ್ನು ಮಾ.10ರಂದು ಮೊಹಾಲಿಯಲ್ಲೂ, 5ನೇ ಪಂದ್ಯವನ್ನು ಮಾ.13ರಂದು ದಿಲ್ಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣದಲ್ಲೂ ಆಯೋಜಿಸಲಾಗಿದೆ.

ಆದರೆ, ಜೈಷೆ ಉಗ್ರರು ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆಸಿದ ದಾಳಿಗೆ ಪ್ರತಿಯಾಗಿ ಭಾರತದ ವಾಯು ಪಡೆ ಬಾಲಕೋಟ್‌ನಲ್ಲಿ ವೈಮಾನಿಕ ದಾಳಿ ನಡೆಸಿದ ಪರಿಣಾಮ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ವಿಷಮ ಸ್ಥಿತಿಗೆ ತಿರುಗಿದೆ. ದೇಶದ ಎಲ್ಲ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ಸೂಚಿಸಿದೆ. ದೇಶದ ಪ್ರಮುಖ ಮೈದಾನಗಳಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.
ವಿಶೇಷವಾಗಿ ಭಾರತ-ಆಸ್ಪ್ರೇಲಿಯಾ ನಡುವಣ ಏಕದಿನ ಸರಣಿಗೆ ಹೆಚ್ಚಿನ ಭದ್ರತೆ ಕೈಗೊಳ್ಳಲು ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌