ಆ್ಯಪ್ನಗರ

ರೋಹಿತ್‌ ಶರ್ಮಾ ಜೊತೆ ಈ ಆಟಗಾರನೇ ಇನಿಂಗ್ಸ್‌ ಆರಂಭಿಸಬೇಕೆಂದ ದಾನೀಶ್‌ ಕನೇರಿಯಾ!

Danish Kaneria on Suryakumar Yadav: ದೀರ್ಘಾವಧಿ ಬಳಿಕ ಭಾರತ ತಂಡಕ್ಕೆ ಮರಳಿರುವ ಕೆ.ಎಲ್‌ ರಾಹುಲ್‌ ಅವರ ಬದಲು 2022ರ ಏಷ್ಯಾ ಕಪ್‌ ಟೂರ್ನಿಯಲ್ಲಿ ನಾಯಕ ರೋಹಿತ್‌ ಶರ್ಮಾ ಜೊತೆ ಸೂರ್ಯಕುಮಾರ್‌ ಯಾದವ್‌ ಇನಿಂಗ್ಸ್‌ ಆರಂಭಿಸಬೇಕೆಂದು ಪಾಕಿಸ್ತಾನ ಮಾಜಿ ಸ್ಪಿನ್ನರ್‌ ದಾನೀಶ್‌ ಕನೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೆ.ಎಲ್‌ ರಾಹುಲ್‌ ಈ ಹಿಂದೆ ಎಲ್ಲಾ ಕ್ರಮಾಂಕಗಳಲ್ಲಿಯೂ ಬ್ಯಾಟ್‌ ಬೀಸುವ ಮೂಲಕ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಆದ್ದರಿಂದ ಅವರನ್ನು ಬೇರೆ ಕ್ರಮಾಂಕದಲ್ಲಿ ಆಡಿಸಬೇಕೆಂದು ಮಾಜಿ ಸ್ಪಿನ್ನರ್‌ ಸಲಹೆ ನೀಡಿದ್ದಾರೆ.

Authored byರಮೇಶ ಕೋಟೆ | Vijaya Karnataka Web 12 Aug 2022, 5:46 pm

ಹೈಲೈಟ್ಸ್‌:

  • ಯುಎಇ ಆತಿಥ್ಯದಲ್ಲಿ ಆಗಸ್ಟ್ 27 ರಿಂದ ಆರಂಭವಾಗುವ 2022ರ ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿ.
  • ರೋಹಿತ್‌ ಶರ್ಮಾ ಜೊತೆ ಸೂರ್ಯಕುಮಾರ್‌ ಇನಿಂಗ್ಸ್ ಆರಂಭಿಸಬೇಕೆಂದ ದಾನೀಶ್‌ ಕನೇರಿಯಾ.
  • ವೆಸ್ಟ್‌ ಇಂಡೀಸ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೂರ್ಯಕುಮಾರ್‌ ಇನಿಂಗ್ಸ್ ಆರಂಭಿಸಿದ್ದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Rohit sharma-Danish Kaneria
ದಾನೀಶ್‌ ಕನೇರಿಯಾ-ರೋಹಿತ್‌ ಶರ್ಮಾ (ಚಿತ್ರ: ರೋಹಿತ್‌ ಶರ್ಮಾ ಟ್ವಿಟರ್‌, ಟಿಒಐ)
ಹೊಸದಿಲ್ಲಿ: ಯುಎಇ ಆತಿಥ್ಯದಲ್ಲಿ ಆಗಸ್ಟ್‌ 27 ರಿಂದ ಆರಂಭವಾಗುವ 2022ರ ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಜೊತೆ ಸೂರ್ಯಕುಮಾರ್‌ ಯಾದವ್‌ ಇನಿಂಗ್ಸ್‌ ಆರಂಭಿಸಬೇಕೆಂದು ಪಾಕಿಸ್ತಾನ ಮಾಜಿ ಸ್ಪಿನ್ನರ್‌ ದಾನೀಶ್‌ ಕನೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ವರ್ಷಾಂತ್ಯದಲ್ಲಿ 2022ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯು ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿದೆ. ಈ ಟೂರ್ನಿಗೂ ಮುನ್ನ ಭಾರತ ತಂಡ ಸಂಯೋಜನೆಯನ್ನು ಟೆಸ್ಟ್‌ ಮಾಡಲು ಏಷ್ಯಾ ಕಪ್‌ ಟೂರ್ನಿಯು ಅತ್ಯುತ್ತಮ ವೇದಿಕೆಯಾಗಿದೆ. ಈ ಟೂರ್ನಿಯಲ್ಲಿ ರೋಹಿತ್‌ ಶರ್ಮಾ ಹಾಗೂ ಕೆ.ಎಲ್‌ ರಾಹುಲ್‌ ಅವರನ್ನು ಮೊದಲ ಆಯ್ಕೆಯ ಆರಂಭಿಕರನ್ನಾಗಿ ಟೀಮ್‌ ಮ್ಯಾನೇಜ್‌ಮೆಂಟ್‌ ಪ್ರಯತ್ನಿಸಬಹುದು.

ಪೆಬ್ರವರಿಯಿಂದ ರೋಹಿತ್‌ ಶರ್ಮಾ ಹಾಗೂ ಕೆಎಲ್‌ ರಾಹುಲ್‌ ಟಿ20 ಸ್ವರೂಪದಲ್ಲಿ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ಆದರೆ, 2022ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಟೂರ್ನಿಯ ಬಳಿಕ ಕೆಎಲ್‌ ರಾಹುಲ್‌ ಗಾಯಕ್ಕೆ ತುತ್ತಾದ ಬಳಿಕ, ಆರಂಭಿಕ ಸ್ಥಾನಕ್ಕೆ ಇಶಾನ್‌ ಕಿಶನ್‌, ರಿಷಭ್‌ ಪಂತ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರನ್ನು ಪ್ರಯತ್ನಿಸಲಾಗಿತ್ತು.
ಏಷ್ಯಾ ಕಪ್‌ ಟೂರ್ನಿಯು ವಿರಾಟ್‌ ಕೊಹ್ಲಿಗೆ ನಿರ್ಣಾಯಕವಾಗಿದೆ: ಕನೇರಿಯಾ!
ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡಕ್ಕೆ ಕೆ.ಎಲ್‌ ರಾಹುಲ್‌ ಇದೀಗ ಮರಳಿದ್ದಾರೆ. ಇದರ ಹೊರತಾಗಿಯೂ ವೆಸ್ಟ್‌ ಇಂಡೀಸ್‌ ವಿರುದ್ಧ ಟಿ20 ಸರಣಿಯಲ್ಲಿ ಕ್ರಮವಾಗಿ 24, 11, 76 ಹಾಗೂ 24 ರನ್‌ ಗಳಿಸಿದ್ದ ಸೂರ್ಯಕುಮಾರ್‌ ಯಾದವ್‌ ಅವರಿಗೆ ರೋಹಿತ್‌ ಶರ್ಮಾ ಜೊತೆ ಇನಿಂಗ್ಸ್‌ ಆರಂಭಿಸಲು ಅವಕಾಶ ಕಲ್ಪಿಸಬೇಕೆಂದು ದಾನೀಶ್‌ ಕನೇರಿಯಾ ಸಲಹೆ ನೀಡಿದ್ದಾರೆ.

"ರೋಹಿತ್‌ ಶರ್ಮಾ ಜೊತೆ ಸೂರ್ಯಕುಮಾರ್‌ ಯಾದವ್‌ ಇನಿಂಗ್ಸ್ ಆರಂಭಿಸುವುದನ್ನು ಮುಂದುವರಿಸಬೇಕು. ರೋಹಿತ್‌ ಶರ್ಮಾ ಜೊತೆ ಓಪನರ್‌ ಆಗಿ ಸೂರ್ಯ ಸ್ಥಿರ ಪ್ರದರ್ಶನ ತೋರಿದ್ದಾರೆ. ಕೆ.ಎಲ್‌ ರಾಹುಲ್‌ ತಂಡಕ್ಕೆ ಮರಳಿದ್ದಾರೆ. ಆದರೆ, ಅವರು ಕೆಲ ಕ್ರಮಾಂಕದಲ್ಲಿ ಆಡಬೇಕೆಂದು ನಾನು ಬಯಸುತ್ತೇನೆ," ಎಂದರು.
Asia Cup 2022: ಕೆ.ಎಲ್‌ ರಾಹುಲ್‌ ಬದಲು ಈ ಆಟಗಾರ ಇನಿಂಗ್ಸ್‌ ಆರಂಭಿಸಬಹುದೆಂದ ಪಾರ್ಥಿವ್‌ ಪಟೇಲ್‌!
"ಈ ರೀತಿ ಯಾಕೆ ಹೇಳುತ್ತಿದ್ದೇನೆ ಎಂದರೆ, ಕೆ.ಎಲ್‌ ರಾಹುಲ್‌ ಈ ಹಿಂದೆ ವಿಭಿನ್ನ ಸನ್ನಿವೇಶಗಳಲ್ಲಿ ಬ್ಯಾಟ್‌ ಮಾಡಿದ್ದಾರೆ ಹಾಗೂ ಎಲ್ಲಾ ಸಂದರ್ಭಗಳಲ್ಲಿಯೂ ರನ್‌ ಗಳಿಸಿದ್ದಾರೆ. ಹಾಗಾಗಿ, ರೋಹಿತ್‌ ಶರ್ಮಾ ಜೊತೆ ಸೂರ್ಯಕುಮಾರ್‌ ಯಾದವ್‌ ಇನಿಂಗ್ಸ್‌ ಆರಂಭಿಸಬೇಕು," ಎಂದು ದಾನೇಶ್‌ ಕನೇರಿಯಾ ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

2022ರ ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್‌ ಪಂತ್ (ವಿಕೆಟ್‌ ಕೀಪರ್‌), ದಿನೇಶ್ ಕಾರ್ತಿಕ್ (ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್‌, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ , ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಸ್ಟ್ಯಾಂಡ್‌ ಬೈ ಆಟಗಾರರು: ಶ್ರೇಯಸ್‌ ಅಯ್ಯರ್‌, ಅಕ್ಷರ್ ಪಟೇಲ್‌ ಹಾಗೂ ದೀಪಕ್‌ ಚಹರ್‌.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌