Please enable javascript.Virat Kohli Smashes Massive Hits Against Spinners Ashwin, Chahal In Training Session-Watch - ಅಶ್ವಿನ್‌-ಚಹಲ್‌ಗೆ ಸಿಡಿಲಬ್ಬರದ ಬ್ಯಾಟಿಂಗ್‌ ' : ಪಾಕ್‌ಗೆ ವಾರ್ನಿಂಗ್‌ ಕೊಟ್ಟ ವಿರಾಟ್‌ ಕೊಹ್ಲಿ!

IND vs PAK: 'ಅಶ್ವಿನ್‌-ಚಹಲ್‌ಗೆ ಸಿಡಿಲಬ್ಬರದ ಬ್ಯಾಟಿಂಗ್‌ ' : ಪಾಕ್‌ಗೆ ವಾರ್ನಿಂಗ್‌ ಕೊಟ್ಟ ವಿರಾಟ್‌ ಕೊಹ್ಲಿ!

Authored byರಮೇಶ ಕೋಟೆ | Vijaya Karnataka Web 26 Aug 2022, 6:46 pm
Subscribe

Asia cup 2022, IND vs PAK: ಆಗಸ್ಟ್‌ 27 ರಿಂದ ಯುಎಇ ಆತಿಥ್ಯದಲ್ಲಿ ಆರಂಭವಾಗಲಿರುವ 2022ರ ಏಷ್ಯಾ ಕಪ್‌ ಟೂರ್ನಿಯ ನಿಮಿತ್ತ ಭಾರತ ತಂಡ ಅಭ್ಯಾಸದಲ್ಲಿ ತೊಡಗಿದೆ. ಇಂಗ್ಲೆಂಡ್‌ ಪ್ರವಾಸದ ಬಳಿಕ ಸುಮಾರು ಒಂದೂವರೆ ತಿಂಗಳು ವಿಶ್ರಾಂತಿ ಪಡೆದಿದ್ದ ವಿರಾಟ್‌ ಕೊಹ್ಲಿ ಇದೀಗ ಭಾರತ ತಂಡಕ್ಕೆ ಮರಳಿದ್ದಾರೆ. ಬುಧವಾರ ವಿರಾಟ್‌ ಕೊಹ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್‌ ಅಭ್ಯಾಸ ನಡೆಸಿದ್ದರು. ಅದರಂತೆ ಹಿರಿಯ ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಹಲ್‌ ಹಾಗೂ ಆರ್‌ ಅಶ್ವಿನ್‌ ಅವರಿಗೆ ಕೊಹ್ಲಿ ದೊಡ್ಡ-ದೊಡ್ಡ ಹೊಡೆತಗಳನ್ನು ಬಾರಿಸಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಹೈಲೈಟ್ಸ್‌:

  • ಆಗಸ್ಟ್‌ 27 ರಿಂದ ಯುಎಇ ಆತಿಥ್ಯದಲ್ಲಿ ಆರಂಭವಾಗಲಿರುವ 2022ರ ಏಷ್ಯಾ ಕಪ್‌ ಟೂರ್ನಿ.
  • ಏಷ್ಯಾ ಕಪ್‌ ಟೂರ್ನಿ ನಿಮಿತ್ತ ಟೀಮ್‌ ಇಂಡಿಯಾ ಆಟಗಾರರು ದುಬೈನಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
  • ಅಭ್ಯಾಸದಲ್ಲಿ ಚಹಲ್‌ ಹಾಗೂ ಅಶ್ವಿನ್‌ ಬೌಲಿಂಗ್‌ನಲ್ಲಿ ಕೊಹ್ಲಿ ದೊಡ್ಡ ಹೊಡೆತಗಳನ್ನು ಬಾರಿಸಿದ್ದಾರೆ.
Virat Kohli1
ವಿರಾಟ್‌ ಕೊಹ್ಲಿ (ಚಿತ್ರ: ಟಿಒಐ ಟ್ವಿಟರ್‌)
ದುಬೈ: ಇಂಗ್ಲೆಂಡ್‌ ಪ್ರವಾಸದ ಬಳಿಕ ಒಂದೂವರೆ ತಿಂಗಳು ವಿಶ್ರಾಂತಿ ಪಡೆದಿದ್ದ ಟೀಮ್‌ ಇಂಡಿಯಾ ಮಾಜಿ ನಾಯಕ ಹಾಗೂ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ 2022ರ ಏಷ್ಯಾ ಕಪ್‌ ಟೂರ್ನಿ ನಿಮಿತ್ತ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ. ಅಷ್ಟೇ ಅಲ್ಲದೆ ನೆಟ್‌ ಪ್ರಾಕ್ಟಿಸ್‌ನಲ್ಲಿ ದೊಡ್ಡ-ದೊಡ್ಡ ಹೊಡೆತಗಳನ್ನು ಹೊಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಆಗಸ್ಟ್‌ 27 ರಂದು ಯುಎಇ ಆತಿಥ್ಯದಲ್ಲಿ 2022ರ ಏಷ್ಯಾ ಕಪ್‌ ಟೂರ್ನಿ ಆರಂಭವಾಗಲಿದೆ. ಇದರ ಮುಂದಿನ ದಿನ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ವಿರಾಟ್‌ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ.

ಕಳೆದ ವೆಸ್ಟ್‌ ಇಂಡೀಸ್‌ ಹಾಗೂ ಜಿಂಬಾಬ್ವೆ ಪ್ರವಾಸಗಳಿಗೆ ವಿರಾಟ್‌ ಕೊಹ್ಲಿ ವಿಶ್ರಾಂತಿ ಪಡೆದಿದ್ದರು. ಇದೀಗ ಹೊಸ ಹುಮ್ಮಸ್ಸಿನೊಂದಿಗೆ ಈ ಮಹತ್ವದ ಟೂರ್ನಿಗೆ ಮರಳಲು ಅವರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಭಾರತ ತಂಡದ ಅಭ್ಯಾಸದ ವೇಳೆ ವಿರಾಟ್‌ ಕೊಹ್ಲಿ ನೆಟ್ಸ್‌ನಲ್ಲಿ ಕಾಣಿಸಿಕೊಂಡಿದ್ದರು.
Asia Cuo 2022: 'ವಿರಾಟ್‌ ಕೊಹ್ಲಿ ಅರ್ಧಶತಕ ಸಿಡಿಸಿದ್ರೆ, ಎಲ್ಲರೂ ಬಾಯಿ ಮುಚ್ಚಿಕೊಳ್ಳುತ್ತಾರೆ': ರವಿ ಶಾಸ್ತ್ರಿ!
ಬುಧವಾರ ನಡೆದಿದ್ದ ನೆಟ್‌ ಸೆಷನ್‌ನಲ್ಲಿ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಅಭ್ಯಾಸದ ಮೂಲಕ ಬೆವರು ಹರಿಸಿದ್ದರು. ನೆಟ್ಸ್‌ನಲ್ಲಿ ಹೆಚ್ಚು ಹೊತ್ತು ಬ್ಯಾಟ್‌ ಮಾಡಿದ ಕೊಹ್ಲಿ, ಹಿರಿಯ ಸ್ಪಿನ್ನರ್‌ಗಳಾದ ಯುಜ್ವೇಂದ್ರ ಚಹಲ್‌ ಹಾಗೂ ಆರ್‌ ಅಶ್ವಿನ್ ಅವರನ್ನು ಎದುರಿಸಿದ್ದರು. ಅದರಂತೆ ಆರ್‌ ಅಶ್ವಿನ್‌ ಎಸೆತಕ್ಕೆ ಡೀಪ್‌ ಮಿಡ್‌ ವಿಕೆಟ್‌ ಕಡೆಗೆ ದೊಡ್ಡ ಹೊಡೆತ ಹೊಡೆದರೆ, ಚಹಲ್‌ ಎಸೆತಕ್ಕೆ ಲಾಂಗ್‌ ಆಫ್‌ ಕಡೆಗೆ ಚೆಂಡನ್ನು ಬಾರಿಸಿದರು. ಆ ಮೂಲಕ ಫಾರ್ಮ್‌ಗೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಕಳೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿಯೂ ವಿರಾಟ್‌ ಕೊಹ್ಲಿ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬಂದಿರಲಿಲ್ಲ. ಅವರು ಆಡಿದ್ದ 16 ಇನಿಂಗ್ಸ್‌ಗಳಿಂದ ಗಳಿಸಿದ್ದು ಒಂದೇ ಒಂದು ಅರ್ಧಶತಕ ಮಾತ್ರ. ಮತ್ತೊಂದೆಡೆ ಇಂಗ್ಲೆಂಡ್‌ ಪ್ರವಾಸದಲ್ಲಿ ಎಲ್ಲಾ ಸ್ವರೂಪದಲ್ಲಿ ಆಡಿದ 6 ಪಂದ್ಯಗಳಿಂದ ಅವರು ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತ ಕೇವಲ 20 ರನ್‌.
Asia Cup 2022: 'ಲಯಕ್ಕೆ ಮರಳುತ್ತಿದ್ದೇನೆ'-ತಮ್ಮ ಕಳಪೆ ಫಾರ್ಮ್‌ ಬಗ್ಗೆ ಮೌನ ಮುರಿದ ವಿರಾಟ್‌ ಕೊಹ್ಲಿ!
ಇಂಗ್ಲೆಂಡ್‌ ಪ್ರವಾಸದಲ್ಲಿ ವಿರಾಟ್‌ ಕೊಹ್ಲಿ ವೈಫಲ್ಯ ಅನುಭವಿಸುವ ಮೂಲಕ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಈ ವೇಳೆ ಪಾಕಿಸ್ತಾನ ನಾಯಕ ಬಾಬರ್ ಆಝಮ್, ಕೊಹ್ಲಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಇದೀಗ ಈ ಇಬ್ಬರೂ ಆಟಗಾರರು ಆಗಸ್ಟ್‌ 28 ರಂದು ನಡೆಯುವ ಪಂದ್ಯದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದಾರೆ.

ಹೋದ ವರ್ಷ ನಡೆದಿದ್ದ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 10 ವಿಕೆಟ್‌ಗಳಿಂದ ಬಲಿಷ್ಠ ಭಾರತ ತಂಡವನ್ನು ಮಣಿಸಿತ್ತು. ನಂತರ, ಲೀಗ್‌ ಹಂತದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಸೋಲು ಮೂಲಕ ಭಾರತ ಟೂರ್ನಿಯಿಂದ ಹೊರ ಬಿದ್ದಿತ್ತು.
Asia Cup 2022 : ಈ ಬಾರಿ ಏಷ್ಯಾ ಕಪ್ ಗೆಲ್ಲುವ ತಮ್ಮ ನೆಚ್ಚಿನ ತಂಡ ಆರಿಸಿದ ಶೇನ್‌ ವಾಟ್ಸನ್‌!
ಏಷ್ಯಾ ಕಪ್‌ ಟೂರ್ನಿಯ ಭಾರತ ತಂಡ
ಓಪನರ್ಸ್‌: ರೋಹಿತ್‌ ಶರ್ಮಾ ಮತ್ತು ಕೆ.ಎಲ್‌ ರಾಹುಲ್‌
ಮಧ್ಯಮ ಕ್ರಮಾಂಕದ ಬ್ಯಾಟರ್ಸ್‌: ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ
ವಿಕೆಟ್‌ಕೀಪರ್ಸ್‌: ರಿಷಭ್ ಪಂತ್‌ ಮತ್ತು ದಿನೇಶ್‌ ಕಾರ್ತಿಕ್
ಆಲ್‌ರೌಂಡರ್ಸ್‌: ಹಾರ್ದಿಕ್‌ ಪಾಂಡ್ಯ ಮತ್ತು ರವೀಂದ್ರ ಜಡೇಜಾ
ವೇಗದ ಬೌಲರ್ಸ್‌: ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌
ಸ್ಪಿನ್ನರ್ಸ್‌: ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌
ಕಾಯ್ದಿರಿಸಿದ ಆಟಗಾರರು: ಅಕ್ಷರ್‌ ಪಟೇಲ್‌, ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.
ರಮೇಶ ಕೋಟೆ
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ