ಆ್ಯಪ್ನಗರ

ಭಾರತಕ್ಕೆ ಸೋಲು: ಬಾಂಗ್ಲಾದಲ್ಲಿ ಅಭಿಮಾನಿ ಆತ್ಮಹತ್ಯೆ

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಸೋಲು ಕಂಡಿದ್ದರಿಂದ ಮನ ನೊಂದ ಬಾಂಗ್ಲಾದೇಶದ ಕ್ರಿಕೆಟ್‌ ಪ್ರಿಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

PTI 20 Jun 2017, 9:00 am

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಸೋಲು ಕಂಡಿದ್ದರಿಂದ ಮನ ನೊಂದ ಬಾಂಗ್ಲಾದೇಶದ ಕ್ರಿಕೆಟ್‌ ಪ್ರಿಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇಲ್ಲಿನ ಜಮಾಲ್ಪುರ್‌ ನಿವಾಸಿಯಾಗಿದ್ದ 25 ವರ್ಷದ ಬಿದ್ಯುತ್‌ ಎಂಬ ಯುವಕ ಭಾರತ ತಂಡದ ಕಟ್ಟಾ ಅಭಿಮಾನಿಯಾಗಿದ್ದರು. ಮಿನಿ ವಿಶ್ವಕಪ್‌ ಎಂದೇ ಕರೆಸಿಕೊಳ್ಳುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಟೀಮ್‌ ಇಂಡಿಯಾದ 180 ರನ್‌ಗಳ ಹೀನಾಯ ಸೋಲನ್ನು ಅರಗಿಸಿಕೊಳ್ಳಲಾಗದೆ ಚಲಿಸುತ್ತಿದ್ದ ರೈಲಿನ ಮುಂಭಾಗಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಢಾಕಾ ಟ್ರಿಬ್ಯುನಲ್‌ ಪತ್ರಿಕೆಗೆ ಸ್ಥಳೀಯ ಪೊಲೀಸ್‌ ಅಕಾರಿ ನಾಸಿರುಲ್‌ ಇಸ್ಲಾಂ ಖಚಿತ ಪಡಿಸಿದ್ದಾರೆ.

ಜೂ.15ರಂದು ಎಜ್‌ಬಾಸ್ಟನ್‌ನಲ್ಲಿ ನಡೆದ 2ನೇ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ದಾಖಲೆಯ 4ನೇ ಬಾರಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ಗೆ ಲಗ್ಗೆಯಿಟ್ಟಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌