ಕ್ರೈಸ್ಟ್ಚರ್ಚ್ ಮಸೀದಿ ದಾಳಿಗೆ ಬೆರಗಾದ ಕ್ರಿಕೆಟ್ ಲೋಕ
ನ್ಯೂಜಿಲೆಂಡ್ನ ಕ್ರೈಸ್ಟ್ಚರ್ಚ್ನಲ್ಲಿ ಮಸೀದಿ ಮೇಲೆ ನಡೆದ ಉಗ್ರರ ದಾಳಿಯನ್ನು ಕ್ರಿಕೆಟ್ ಜಗತ್ತಿನ ಪ್ರಮುಖರು ಬಲವಾಗಿ ಖಂಡಿಸಿದ್ದಾರೆ. ಅಲ್ಲದೆ ಮೃತಪಟ್ಟವರ ಕುಟುಂಬದವರಿಗಾಗಿ ಕಂಬನಿ ಮಿಡಿದಿದ್ದಾರೆ.
Vijaya Karnataka Web 15 Mar 2019, 2:22 pm
ಹೊಸದಿಲ್ಲಿ: ನ್ಯೂಜಿಲೆಂಡ್ನ ಕ್ರೈಸ್ಟ್ಚರ್ಚ್ನಲ್ಲಿ ಮಸೀದಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಕ್ರಿಕೆಟ್ ಲೋಕವೇ ಬೆಚ್ಚಿ ಬಿದ್ದಿದೆ.
ಘಟನೆಯ ಬೆನ್ನಲ್ಲೇ ನ್ಯೂಜಿಲೆಂಡ್ ಹಾಗೂ ಪ್ರವಾಸಿ ಬಾಂಗ್ಲಾದೇಶ ನಡುವಣ ಮೂರನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಅಲ್ ನೂರ್ ಮಸೀದಿಗೆ ಪ್ರಾರ್ಥನೆ ಮಾಡಲು ಬಸ್ನಲ್ಲಿ ತೆರಳಿರುವ ಬಾಂಗ್ಲಾದೇಶ ಕ್ರಿಕೆಟಿಗರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು.
ಇತಿಹಾಸದತ್ತ ಗಮನಿಸಿದಾಗ ವರುಷಗಳ ಹಿಂದೆ ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಉಗ್ರರ ದಾಳಿ ನಡೆದಿತ್ತು. ಅಂದು ಲಂಕನ್ ಆಟಗಾರರಿಗೆ ಗುಂಡೇಟು ತಗಲಿತ್ತು.
ಭಯೋತ್ಪಾದನೆಯ ಕರಿನೆರಳು ಮೂಡಿರುವ ಹಿನ್ನಲೆಯಲ್ಲಿ ಬಾಂಗ್ಲಾ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ರದ್ದು ಮಾಡಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸ್ವಾಗತಿಸಿದೆ.
ಹಿಂದೊಮ್ಮೆ ಭಾರತದಲ್ಲಿ ಉಗ್ರರ ದಾಳಿ ನಡೆದಾಗ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಿರುವುದನ್ನು ನೀವಿಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಪ್ರಸ್ತುತ ಕ್ರಿಕೆಟ್ ಜಗತ್ತಿನ ಮಾಜಿ ಹಾಗೂ ಸಮಕಾಲೀನ ಆಟಗಾರರು ಕ್ರೈಸ್ಟ್ಚರ್ಚ್ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ.
ಘಟನೆಯ ಬೆನ್ನಲ್ಲೇ ನ್ಯೂಜಿಲೆಂಡ್ ಹಾಗೂ ಪ್ರವಾಸಿ ಬಾಂಗ್ಲಾದೇಶ ನಡುವಣ ಮೂರನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಅಲ್ ನೂರ್ ಮಸೀದಿಗೆ ಪ್ರಾರ್ಥನೆ ಮಾಡಲು ಬಸ್ನಲ್ಲಿ ತೆರಳಿರುವ ಬಾಂಗ್ಲಾದೇಶ ಕ್ರಿಕೆಟಿಗರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು.
ಇತಿಹಾಸದತ್ತ ಗಮನಿಸಿದಾಗ ವರುಷಗಳ ಹಿಂದೆ ಪಾಕಿಸ್ತಾನದಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಉಗ್ರರ ದಾಳಿ ನಡೆದಿತ್ತು. ಅಂದು ಲಂಕನ್ ಆಟಗಾರರಿಗೆ ಗುಂಡೇಟು ತಗಲಿತ್ತು.
ಭಯೋತ್ಪಾದನೆಯ ಕರಿನೆರಳು ಮೂಡಿರುವ ಹಿನ್ನಲೆಯಲ್ಲಿ ಬಾಂಗ್ಲಾ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ರದ್ದು ಮಾಡಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸ್ವಾಗತಿಸಿದೆ.
ಹಿಂದೊಮ್ಮೆ ಭಾರತದಲ್ಲಿ ಉಗ್ರರ ದಾಳಿ ನಡೆದಾಗ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ಚೆನ್ನೈ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವ ಮೂಲಕ ಕ್ರಿಕೆಟ್ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಿರುವುದನ್ನು ನೀವಿಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಪ್ರಸ್ತುತ ಕ್ರಿಕೆಟ್ ಜಗತ್ತಿನ ಮಾಜಿ ಹಾಗೂ ಸಮಕಾಲೀನ ಆಟಗಾರರು ಕ್ರೈಸ್ಟ್ಚರ್ಚ್ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ.