ಆ್ಯಪ್ನಗರ

‘ಧೋನಿ ಪೆವಿಲಿಯನ್‌’ ಉದ್ಘಾಟನೆಗೆ ಧೋನಿ ನಿರಾಕರಣೆ

ಮಗದೊಮ್ಮೆ ಸರಳ, ಸಜ್ಜನಿಕೆಯ ವ್ಯಕ್ತಿತ್ವವನ್ನು ಮೆರೆದಿರುವ ಮಾಜಿ ಕೂಲ್ ನಾಯಕ ಮಹೇಂದ್ರ ಸಿಂಗ್ ಧೋನಿ, ತಮ್ಮ ಹುಟ್ಟೂರಲ್ಲಿರುವ ರಾಂಚಿ ಸ್ಟೇಡಿಯಂನಲ್ಲಿ ಹೊಸದಾಗಿ ನಿರ್ಮಿಸಿರುವ ಧೋನಿ ಪೆವಿಲಿಯನ್ ಉದ್ಘಾಟಿಸಲು ನಯವಾಗಿ ನಿರಾಕರಿಸಿದ್ದಾರೆ.

Vijaya Karnataka Web 7 Mar 2019, 10:34 am
ರಾಂಚಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಇಲ್ಲಿನ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ 'ಧೋನಿ ಪೆವಿಲಿಯನ್‌' ಉದ್ಘಾಟನೆಯ ಆಹ್ವಾನವನ್ನು ನಯವಾಗಿ ನಿರಾಕರಿಸಿದ್ದಾರೆ.
Vijaya Karnataka Web ms-dhoni-08


ಮುಂಬಯಿನ ವಾಂಖೆಡೆ ಕ್ರೀಡಾಂಗಣದಲ್ಲಿ ಸುನಿಲ್‌ ಗವಾಸ್ಕರ್‌ ಸ್ಟ್ಯಾಂಡ್‌ ಹಾಗೂ ದಿಲ್ಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣದಲ್ಲಿ ವೀರೇಂದ್ರ ಸೆಹ್ವಾಗ್‌ ಸ್ಟ್ಯಾಂಡ್‌ ಇದ್ದಂತೆ ಜಾರ್ಖಂಡ್‌ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿ 'ಧೋನಿ ಪೆವಿಲಿಯನ್‌' ನಿರ್ಮಿಸಲಾಗಿದೆ. ಆಸ್ಪ್ರೇಲಿಯಾ ವಿರುದ್ಧ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಲಿರುವ 3ನೇ ಏಕದಿನ ಪಂದ್ಯಕ್ಕೆ ಮೊದಲು ಉದ್ಘಾಟನಾ ಕಾರ್ಯಕ್ರಮವಿದೆ.

"ನನ್ನದೇ ಮನೆಯಲ್ಲಿ ಏನು ಉದ್ಘಾಟನೆ ಮಾಡೋಣ?" ಎಂಬ ಧೋನಿ ಹೇಳಿಕೆಯನ್ನು ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ದೇಬಾಶಿಸ್ ಚಕ್ರಬೋರ್ತಿ ಉಲ್ಲೇಖಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌