ಆ್ಯಪ್ನಗರ

World Cup: ಭಜ್ಜಿ ವಿಶ್ವಕಪ್ ತಂಡದಲ್ಲಿ ರಾಹುಲ್‌ಗಿಲ್ಲ ಸ್ಥಾನ

2019 ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ 15 ಸದಸ್ಯ ಬಳಗದ ಸಂಭಾವ್ಯರ ತಂಡವನ್ನು ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಪ್ರಕಟಿಸಿದ್ದಾರೆ. ಪ್ರಸ್ತುತ ಪಟ್ಟಿಯಲ್ಲಿ ಕರ್ನಾಟಕದ ಕೆಎಲ್ ರಾಹುಲ್‌ ಹೆಸರನ್ನು ಕಡೆಗಣಿಸಲಾಗಿದೆ.

Vijaya Karnataka Web 12 Feb 2019, 12:16 pm
ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಸಮೀಪಿಸುತ್ತಿರುವಂತೆಯೇ ತಂಡದಲ್ಲಿ ಯಾರೆಲ್ಲ ಗುರುತಿಸಿಕೊಳ್ಳಲಿದ್ದಾರೆ ಎಂಬ ಚರ್ಚೆಯು ಜೋರಾಗಿ ಕೇಳಿಬರುತ್ತಿದೆ.
Vijaya Karnataka Web harbhajan-singh


ಈ ನಡುವೆ ಆಫ್ ಸ್ಪಿನ್ನರ್ 2019 ಏಕದಿನ ವಿಶ್ವಕಪ್‌ಗಾಗಿ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಕೆಲವೊಂದು ಅಚ್ಚರಿಯ ಆಯ್ಕೆಯನ್ನು ಮಾಡಿದ್ದಾರೆ.

ವಿಶ್ವಕಪ್ ತಂಡದಲ್ಲಿ ಉಮೇಶ್ ಯಾದವ್ ಹಾಗೂ ವಿಜಯ್ ಶಂಕರ್‌ಗೆ ಸ್ಥಾನ ನೀಡಲಾಗಿದೆ. ಇನ್ನೊಂದೆಡೆ ರವೀಂದ್ರ ಜಡೇಜಾರನ್ನು ಸಂಭ್ಯಾವ ಆಟಗಾರರ ಪಟ್ಟಿಯಲ್ಲಿ ಸೇರಿಸಿದ್ದಾರೆ.

15 ಸದಸ್ಯ ಬಳಗದಲ್ಲಿ ಕರ್ನಾಟಕ ಕೆಎಲ್ ರಾಹುಲ್‌ರನ್ನು ಭಜ್ಜಿ ಕಡೆಗಣಿಸಿದ್ದಾರೆ. ಬ್ಯಾಟಿಂಗ್ ಪಟ್ಟಿಯಲ್ಲಿ ನಾಯಕ ರೋಹಿತ್ ಶರ್ಮಾ, ರೋಹಿತ್ ಶರ್ಮಾ, ಶಿಖರ್ ಧವನ್, ಅಂಬಟಿ ರಾಯುಡು, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ಧೋನಿ ಹಾಗೂ ಕೇದರ್ ಜಾಧವ್ ಇದ್ದಾರೆ. ಹಾರ್ದಿಕ್ ಪಾಂಡ್ಯ ಹಾಗೂ ವಿಜಯ್ ಶಂಕರ್ ಆಲ್‌ರೌಂಡರ್ ಆಗಿರಲಿದ್ದಾರೆ.

ಕುಲ್‌ದೀಪ್ ಯಾದವ್ ಹಾಗೂ ಯುಜ್ವೇಂದ್ರ ಚಹಲ್ ಸ್ಪಿನ್ ಅಸ್ತ್ರವಾಗಲಿದ್ದಾರೆ. ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಜತೆಗೆ ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಪ್ರಮುಖ ವೇಗದ ಅಸ್ತ್ರವಾಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌