ಬೆಂಗಳೂರು: ವಿರಾಟ್ ಕೊಹ್ಲಿ, ತಮ್ಮ ಶ್ರೇಷ್ಠ ಲಯ ಮರಳಿ ಪಡೆದಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಶತಕ ಗಳಿಸಲಾಗದೆ ಒತ್ತಡದಲ್ಲಿ ಮುಳುಗಿದ್ದ ಭಾರತ ತಂಡದ ಮಾಜಿ ನಾಯಕ ಇದೀಗ ಮತ್ತೊಮ್ಮೆ ಗರ್ಜಿಸಲು ಆರಂಭಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಂತ್ಯಗೊಂಡ ಏಷ್ಯಾ ಕಪ್ 2022 ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಮಿಂಚಿನ ಆಟವಾಡಿದ ಕೊಹ್ಲಿ, ಆಡಿದ 5 ಇನಿಂಗ್ಸ್ಗಳಲ್ಲಿ ಒಟ್ಟಾರೆ 276 ರನ್ಗಳನ್ನು ಬಾರಿಸಿದರು. ಎಲ್ಲಕ್ಕಿಂತಲೂ ಮಿಗಿಲಾಗಿ ಸೂಪರ್-4 ಹಂತದಲ್ಲಿ ನಡೆದ ಕೊನೇ ಪಂದ್ಯದಲ್ಲಿ ಅಫಘಾನಿಸ್ತಾನ ಎದುರು 61 ಎಸೆತಗಳಲ್ಲಿ ಅಜೇಯ 122 ರನ್ಗಳನ್ನು ಬಾರಿಸುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಶತಕಗಳ ಬರವನ್ನು ನೀಗಿಸಿಕೊಂಡರು. ಅಫಘಾನಿಸ್ತಾನ ಎದುರು ರೋಹಿತ್ ಶರ್ಮಾ ಸ್ಥಾನದಲ್ಲಿ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿ ಮನಮೋಹಕ ಶತಕ ಬಾರಿಸಿದ ಬೆನ್ನಲ್ಲೇ ಟಿ20 ಕ್ರಿಕೆಟ್ನಲ್ಲಿ ವಿರಾಟ್ ಓಪನರ್ ಆಗಿಯೇ ಮುಂದುವರಿಯಬೇಕು ಎಂದು ವ್ಯಾಪಕ ಚರ್ಚೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಆಸ್ಟ್ರೇಲಿಯಾದ ದಿಗ್ಗಜ ಬ್ಯಾಟರ್ ಮ್ಯಾಥ್ಯೂ ಹೇಡೆನ್, ಮುಂಬರುವ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಆಡಲೇ ಬಾರದು ಎಂದಿದ್ದಾರೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್, ಕೊಹ್ಲಿ ಅವರನ್ನು 3ನೇ ಕ್ರಮಾಂಕದಲ್ಲೇ ಬಳಸಿಕೊಳ್ಳಬೇಕು ಎಂದಿದ್ದಾರೆ.
"ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ನಡೆಯುತ್ತಿರುವ ದೊಡ್ಡ ಚರ್ಚೆ ಇದಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಮತ್ತು ಗೌತಮ್ ಗಂಭೀರ್ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಭಾರತ ತಂಡದ ಪರ ವಿರಾಟ್ ಕೊಹ್ಲಿ ಓಪನರ್ ಆಗಿಯೇ ಆಡಬೇಕು ಎಂಬುದು ಸರಿಯಲ್ಲ. ಅವರ ಬ್ಯಾಟಿಂಗ್ ಕ್ರಮಾಂಕ ಸರಳ. ಅವರನ್ನು 3ನೇ ಕ್ರಮಾಂಕದಲ್ಲೇ ಆಡಿಸಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆಗೆ ಅವಕಾಶವೇ ಕೊಡಬಾರದು," ಎಂದು ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಹೇಡೆನ್ ಹೇಳಿದ್ದಾರೆ.
"ಇಲ್ಲಿ ಗೊಂದಲ ಬೇಡ. ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಅದ್ಭುತ ಆಟವಾಡಿದ್ದಾರೆ. ಈ ರೀತಿಯ ಚರ್ಚೆಗಳನ್ನು ಮಾಡಿ ಅವರ ಮನದಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ಅನಗತ್ಯ ಒತ್ತಡ ಅವರ ಮೇಲೆ ಹೇರಿದಂತ್ತಾಗುತ್ತದೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲೂ ಇಂಥದ್ದೇ ಆಟವಾಡಬಲ್ಲರು. ಆತ ವಿಶ್ವ ಶ್ರೇಷ್ಠ ಆಟಗಾರ. ಅವರು ಮೂರನೇ ಕ್ರಂಮಾಂಕದಲ್ಲೇ ಬ್ಯಾಟ್ ಮಾಡಬೇಕು ಎಂಬುದು ನನ್ನ ಅಭಿಪ್ರಾಯ," ಎಂದು ವಿವರಿಸಿದ್ದಾರೆ.
ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ತಂಡ ಅಕ್ಟೋಬರ್ 10ಕ್ಕೆ ಕಾಂಗರೂ ನಾಡಿಗೆ ಪ್ರಯಾಣ ಬೆಳೆಸಲಿದ್ದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಎದುರು ಅಭ್ಯಾಸ ಪಂದ್ಯಗಳನ್ನು ಆಡಿ, ಅಕ್ಟೋಬರ್ 23ರಂದು ಸೂಪರ್ 12 ಹಂತದ ಮೊದಲ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪೈಪೋಟಿ ನಡೆಸಲಿದೆ. ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ಭಾರತ ತಂಡವನ್ನು ಪ್ರಕಟ ಮಾಡಿ ಆಗಿದೆ.
ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಕಾಯ್ದಿರಿಸಿದ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ದೀಪಕ್ ಚಹರ್, ರವಿ ಬಿಷ್ಣೋಯ್.
"ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ನಡೆಯುತ್ತಿರುವ ದೊಡ್ಡ ಚರ್ಚೆ ಇದಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಮತ್ತು ಗೌತಮ್ ಗಂಭೀರ್ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಭಾರತ ತಂಡದ ಪರ ವಿರಾಟ್ ಕೊಹ್ಲಿ ಓಪನರ್ ಆಗಿಯೇ ಆಡಬೇಕು ಎಂಬುದು ಸರಿಯಲ್ಲ. ಅವರ ಬ್ಯಾಟಿಂಗ್ ಕ್ರಮಾಂಕ ಸರಳ. ಅವರನ್ನು 3ನೇ ಕ್ರಮಾಂಕದಲ್ಲೇ ಆಡಿಸಬೇಕು. ಈ ಬಗ್ಗೆ ಹೆಚ್ಚಿನ ಚರ್ಚೆಗೆ ಅವಕಾಶವೇ ಕೊಡಬಾರದು," ಎಂದು ಸ್ಟಾರ್ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಹೇಡೆನ್ ಹೇಳಿದ್ದಾರೆ.
"ಇಲ್ಲಿ ಗೊಂದಲ ಬೇಡ. ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಅದ್ಭುತ ಆಟವಾಡಿದ್ದಾರೆ. ಈ ರೀತಿಯ ಚರ್ಚೆಗಳನ್ನು ಮಾಡಿ ಅವರ ಮನದಲ್ಲಿ ಗೊಂದಲ ಸೃಷ್ಟಿಸುವುದು ಬೇಡ. ಅನಗತ್ಯ ಒತ್ತಡ ಅವರ ಮೇಲೆ ಹೇರಿದಂತ್ತಾಗುತ್ತದೆ. ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲೂ ಇಂಥದ್ದೇ ಆಟವಾಡಬಲ್ಲರು. ಆತ ವಿಶ್ವ ಶ್ರೇಷ್ಠ ಆಟಗಾರ. ಅವರು ಮೂರನೇ ಕ್ರಂಮಾಂಕದಲ್ಲೇ ಬ್ಯಾಟ್ ಮಾಡಬೇಕು ಎಂಬುದು ನನ್ನ ಅಭಿಪ್ರಾಯ," ಎಂದು ವಿವರಿಸಿದ್ದಾರೆ.
ಆಸ್ಟ್ರೇಲಿಯಾದ ಆತಿಥ್ಯದಲ್ಲಿ ಅಕ್ಟೋಬರ್ 16ರಿಂದ ನವೆಂಬರ್ 13ರವರೆಗೆ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಭಾರತ ತಂಡ ಅಕ್ಟೋಬರ್ 10ಕ್ಕೆ ಕಾಂಗರೂ ನಾಡಿಗೆ ಪ್ರಯಾಣ ಬೆಳೆಸಲಿದ್ದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಎದುರು ಅಭ್ಯಾಸ ಪಂದ್ಯಗಳನ್ನು ಆಡಿ, ಅಕ್ಟೋಬರ್ 23ರಂದು ಸೂಪರ್ 12 ಹಂತದ ಮೊದಲ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಪೈಪೋಟಿ ನಡೆಸಲಿದೆ. ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ಭಾರತ ತಂಡವನ್ನು ಪ್ರಕಟ ಮಾಡಿ ಆಗಿದೆ.
ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಕಾಯ್ದಿರಿಸಿದ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ದೀಪಕ್ ಚಹರ್, ರವಿ ಬಿಷ್ಣೋಯ್.