ಆ್ಯಪ್ನಗರ

ದಸರಾ ಹಬ್ಬದ ಶುಭ ಸಂದೇಶವನ್ನು ಸಾರಿದ ಕ್ರೀಡಾಪಟುಗಳು

ದೇಶೆದೆಲ್ಲೆಡೆ ದಸರಾ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಇದರಂಗವಾಗಿ ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಕ್ರೀಡಾ ಕ್ಷೇತ್ರದ ಪ್ರಮುಖ ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ.

Vijaya Karnataka Web 8 Oct 2019, 2:46 pm
ಹೊಸದಿಲ್ಲಿ: ದೇಶದೆಲ್ಲೆಡೆ ದಸರಾ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಕ್ರೀಡಾ ಕ್ಷೇತ್ರಗಳು ಗಣ್ಯರು ಜನರಿಗೆ ಶುಭಾಶಯಗಳನ್ನು ಸಾರಿದ್ದಾರೆ.
Vijaya Karnataka Web dasara


ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್, ಅಭಿಮಾನಿಗಳಿಗೆ ಶುಭಾಶಯ ಸಾರಿದವರಲ್ಲಿ ಮೊದಲಿಗರಾಗಿದ್ದಾರೆ. ಈ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಉತ್ತಮ ಆರೋಗ್ಯ, ಸಂತೋಷ ಹಾಗೂ ಯಶಸ್ವಿಯನ್ನು ತರುವಂತಾಗಲಿ ಎಂದು ಹಾರೈಸಿದ್ದಾರೆ.

ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ತಮ್ಮ ಸಂದೇಶದಲ್ಲಿ ದಸರಾ ಹಬ್ಬವು ಜೀವನದಲ್ಲಿ ಧೈರ್ಯ, ಭರವಸೆ ಹಾಗೂ ಶ್ರೇಯಸ್ಕರ ಶುಭಾರಂಭವನ್ನು ನೀಡಲಿ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ, ಟರ್ಬನೇಟರ್ ಹರ್ಭಜನ್ ಸಿಂಗ್, ಚೇತೇಶ್ವರ ಪೂಜಾರ, ಕುಸ್ತಿಪಟು ಬಜರಂಗ್ ಪೂನಿಯಾ ಮುಂತಾದವರು ಶುಭ ಸಂದೇಶವನ್ನು ಸಾರಿದ್ದಾರೆ.

ಮೈಸೂರು ದಸರಾ ಅಂಗವಾಗಿ ನಗರದಲ್ಲಿ ಸಂಭ್ರಮ ಸಡಗರ ಮುಗಿಲು ಮುಟ್ಟಿದೆ. ಜಂಜೂ ಸವಾರಿಯ ವೈಯಾರವನ್ನು ಮೈಸೂರಿನಲ್ಲಿ ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌