ಆ್ಯಪ್ನಗರ

ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ ಪ್ರಕಟ: 3ನೇ ಏಕದಿನ ಪಂದ್ಯಕ್ಕೆ ಬೆಂಗಳೂರು ಆತಿಥ್ಯ

ಟೀಮ್ಜ‌ ಇಂಡಿಯಾ 2020ರ 14ರಂದು ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಎದುರು ಸೆಣಸಾಡಲಿದ್ದು, ಸರಣಿಯ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾಗಿದೆ.

Vijaya Karnataka Web 24 Dec 2019, 8:56 pm
ಬೆಂಗಳೂರು: ಭಾರತ ತಂಡ ಮುಂದಿನ ವರ್ಷ ನ್ಯೂಜಿಲೆಂಡ್‌ ಪ್ರವಾಸಕ್ಕೂ ಮುನ್ನ ತವರಿನಂಗಣದಲ್ಲಿ ಪ್ರವಾಸಿ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಗಳನ್ನಾಡಲಿದೆ.
Vijaya Karnataka Web IND vs AUS ODI series 2020


ಭಾರತ ತಂಡದ ಜನವರಿ 5ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿಯಲ್ಲಿ ಪೈಪೋಟಿ ನಡೆಸಲಿದ್ದು, ಬಳಿಕ ಜ.14ರಂದು ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಎದುರು ಸೆಣಸಾಡಲಿದೆ.

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಆಡಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೊದಲ ಏಕದಿನ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಜನವರಿ 14ರಂದು ನಡೆಯಲಿದೆ. ಸರಣಿಯತ ಮೂರೂ ಪಂದ್ಯಗಳು ಹೊನಲು ಬೆಳಕಿನಡಿಯಲ್ಲಿ ನಡೆಯಲಿದ್ದು, ಮಧ್ಯಾಹ್ನೆ 2 ಗಂಟೆಗೆ ಶುರುವಾಗಲಿದೆ.

ಶ್ರೀಲಂಕಾ ವಿರುದ್ಧದ ಸರಣಿಗೆ ಟೀಮ್‌ ಇಂಡಿಯಾ ಪ್ರಕಟ: ಬುಮ್ರಾ ರಿಟರ್ನ್ಸ್‌, ಹಿಟ್‌ಮ್ಯಾನ್‌ಗೆ ರೆಸ್ಟ್‌

ಎರಡನೇ ಒಡಿಐ ಪಂದ್ಯಕ್ಕೆ ರಾಜ್‌ಕೋಟ್‌ನ ಸೌರಾಷ್ಟ್ರ ರಾಜ್ಯ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು, ಜನವರಿ 17ರಂದು ಪಂದ್ಯ ನಡೆಯಲಿದೆ. ಜ.19ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3ನೇ ಹಾಗೂ ಅಂತಿಮ ಏಕದಿನ ಕದನ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಒಡಿಐ ಸರಣಿಯ ವೇಳಾಪಟ್ಟಿ ಹೀಗಿದೆ

ಜನವರಿ 14: ಭಾರತ vs ಆಸ್ಟ್ರೇಲಿಯಾ,
1ನೇ ಏಕದಿನ ಪಂದ್ಯ
ಸ್ಥಳ: ಮುಂಬೈನ ವಾಂಖೆಡೆ ಕ್ರೀಡಾಂಗಣ
ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆಗೆ

2019ರಲ್ಲಿ ಟೀಮ್‌ ಇಂಡಿಯಾ ನಿರ್ಮಿಸಿದ ಶ್ರೇಷ್ಠ ದಾಖಲೆಗಳ ಸಂಪೂರ್ಣ ವಿವರ ಇಲ್ಲಿದೆ!

ಜನವರಿ 17: ಭಾರತ vs ಆಸ್ಟ್ರೇಲಿಯಾ
2ನೇ ಏಕದಿನ ಪಂದ್ಯ
ಸ್ಥಳ: ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣ, ರಾಜ್‌ಕೋಟ್
ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆಗೆ

ಜನವರಿ 19, ಭಾರತ vs ಆಸ್ಟ್ರೇಲಿಯಾ
3ನೇ ಏಕದಿನ ಪಂದ್ಯ
ಸ್ಥಳ: ಎಂ.ಚಿನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆಗೆ

'ಗಾಯಗೊಂಡ ಮಾತ್ರಕ್ಕೆ ನಾನೇನು ಬ್ಯಾಟಿಂಗ್‌ ಮರೆತಿಲ್ಲ' ಎಂದ ಗಬ್ಬರ್‌!


ಜ.14ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ
ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ರೋಹಿತ್‌ ಶರ್ಮಾ, ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌, ಮನೀಶ್‌ ಪಾಂಡೆ, ರಿಷಭ್‌ ಪಂತ್‌ (ವಿಕೆಟ್‌ಕೀಪರ್‌), ಕೇದಾರ್‌ ಜಾಧವ್‌, ಶಿವಂ ದುಬೇ, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಹಲ್‌, ನವದೀಪ್‌ ಸೈನಿ, ಶಾರ್ದುಲ್‌ ಠಾಕೂರ್‌, ಜಸ್‌ಪ್ರೀತ್‌ ಬುಮ್ರಾ.

ಟೀಮ್‌ ಇಂಡಿಯಾ ಆಟಗಾರರ ಆಯ್ಕೆಯಲ್ಲಿ ತಾರತಮ್ಯದ ವಿರುದ್ಧ ಗುಡುಗಿದ ಭಜ್ಜಿ!

ಜ.05ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಟಿ20-ಐ ಸರಣಿಗೆ ಭಾರತ ತಂಡ
ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಕೆಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌, ರಿಷಭ್‌ ಪಂತ್‌ (ವಿಕೆಟ್‌ಕೀಪರ್‌), ರವೀಂದ್ರ ಜಡೇಜಾ, ಶಿವಂ ದುಬೇ, ಯಜುವೇಂದ್ರ ಚಹಲ್‌, ಕುಲ್ದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ನವದೀಪ್‌ ಸೈನಿ, ಶಾರ್ದುಲ್‌ ಠಾಕೂರ್‌, ಮನೀಶ್‌ ಪಾಂಡೆ, ವಾಷಿಂಗ್ಟನ್‌ ಸುಂದರ್‌, ಸಂಜು ಸ್ಯಾಮ್ಸನ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌