ಆ್ಯಪ್ನಗರ

IND vs AUS: 9 ವರ್ಷಗಳ ಬಳಿಕ ಭಾರತದ ಒಡಿಐ ತಂಡಕ್ಕೆ ಜಯದೇವ್‌ ಉನಾದ್ಕಟ್‌ ಕಮ್‌ಬ್ಯಾಕ್‌!

India vs Australia ODI Series 2023: ಇದೇ ವರ್ಷ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆಯೋಜನೆ ಆಗಲಿದೆ. ಇದಕ್ಕೆ ಪೂರ್ವ ಸಿದ್ಧತೆಯ ಯೋಜನೆ ರೂಪಿಸಿಕೊಂಡಿರುವ ಟೀಮ್ ಇಂಡಿಯಾ, ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿ ಬಳಿಕ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯನ್ನು ಆಡಲಿದೆ. ಈ ಸರಣಿ ಸಲುವಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ರೋಹಿತ್‌ ಶರ್ಮಾ ಸಾರಥ್ಯದ ತಂಡ ಪ್ರಕಟ ಮಾಡಿದ್ದು, ಜಯದೇವ್‌ ಉನಾದ್ಕಟ್‌ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Authored byವಿಜೇತ್ ಕುಮಾರ್ | Vijaya Karnataka Web 19 Feb 2023, 11:53 pm

ಹೈಲೈಟ್ಸ್‌:

  • ಬರೋಬ್ಬರಿ 9 ವರ್ಷಗಳ ಬಳಿಕ ಭಾರತದ ಏಕದಿನ ಕ್ರಿಕೆಟ್‌ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ ಜಯದೇವ್‌ ಉನಾದ್ಕಟ್‌.
  • ಆಸೀಸ್‌ ವಿರುದ್ಧದ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಮೂಲಕ ಒಡಿಐ ತಂಡಕ್ಕೆ ರವೀಂದ್ರ ಜಡೇಜಾ ಕಮ್‌ಬ್ಯಾಕ್‌ ಮಾಡಿದ್ದಾರೆ.
  • ಮಾರ್ಚ್‌ 17ರಿಂದು 22ರವರೆಗೆ ಹೈ-ವೋಲ್ಟೇಜ್‌ ಸರಣಿಯ ಮೂರು ಪಂದ್ಯಗಳ ಆಯೋಜನೆ ಆಗಲಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Jaydev Unadkat
ಭಾರತ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ ಜಯದೇವ್ ಉನಾದ್ಕಟ್‌ (ಚಿತ್ರ: ಟಿಒಐ).
ಬೆಂಗಳೂರು: ಭಾರತದ ಏಕದಿನ ಕ್ರಿಕೆಟ್‌ ತಂಡಕ್ಕೆ ಬರೋಬ್ಬರಿ 9 ವರ್ಷಗಳ ಬಳಿಕ ಎಡಗೈ ವೇಗದ ಬೌಲರ್‌ ಜಯದೇವ್‌ ಉನಾದ್ಕಟ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ಆತಿಥೇಯ ಟೀಮ್ ಇಂಡಿಯಾ, ಇದೇ ವರ್ಷ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಸಮರಾಭ್ಯಾಸ ನಡೆಸುತ್ತಿದೆ. ಮಾರ್ಚ್‌ 17ರಿಂದ 22ರವರೆಗೆ ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ನಡೆಯಲಿದ್ದು, ಈ ಸಲುವಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಫೆ.19ರಂದು (ಭಾನುವಾರ) ರೋಹಿತ್‌ ಶರ್ಮಾ ಸಾರಥ್ಯದ ಭಾರತದ ಒಡಿಐ ತಂಡವನ್ನು ಪ್ರಕಟ ಮಾಡಿದೆ.
ಭಾನುವಾರ ಅಂತ್ಯಗೊಂಡ 2022-23ರ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಸೌರಾಷ್ಟ್ರ ತಂಡ ಬಂಗಾಳ ಎದುರು 9 ವಿಕೆಟ್‌ಗಳ ಜಯ ದಾಖಲಿಸಿ ಟ್ರೋಫಿ ಎತ್ತಿ ಹಿಡಿಯಿತು. ಪಂದ್ಯದಲ್ಲಿ ಸೌರಾಷ್ಟ್ರ ತಂಡವನ್ನು ಮುನ್ನಡೆಸಿದ್ದ ಜಯದೇವ್‌ ಉನಾದ್ಕಟ್‌ ಒಟ್ಟಾರೆ 9 ವಿಕೆಟ್‌ ಪಡೆದು ಪಂದ್ಯಶ್ರೇಷ್ಠ ಗೌರವ ಪಡೆದರು. ಕಳೆದ ಎರಡು ವರ್ಷಗಳಲ್ಲಿ ದೇಶಿ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿರುವ ಎಡಗೈ ವೇಗಿ ಜಯದೇವ್‌ ಉನಾದ್ಕಟ್‌, ಇದರ ಫಲವಾಗಿ ಈಗ ಭಾರತದ ಏಕದಿನ ಕ್ರಿಕೆಟ್‌ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಈ ಮೂಲಕ ಬರೋಬ್ಬರು 9 ವರ್ಷಗಳ ಬಳಿಕ ಭಾರತದ ಒಡಿಐ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. 2013ರ ನವೆಂಬರ್‌ನಲ್ಲಿ ಅವರು ವೆಸ್ಟ್‌ ಇಂಡೀಸ್‌ ಎದುರು ತಮ್ಮ ಕಡೆಯ ಒಡಿಐ ಪಂದ್ಯವನ್ನಾಡಿದ್ದರು.

IND vs AUS: ಆಸೀಸ್‌ ವಿರುದ್ಧದ ಅಂತಿಮ ಎರಡು ಟೆಸ್ಟ್‌ಗಳಿಗೆ ಭಾರತ ತಂಡ ಪ್ರಕಟ!
ತಂಡಕ್ಕೆ ಮರಳಿದ ಜಡೇಜಾ
ಕಳೆದ ವರ್ಷ ಏಷ್ಯಾ ಕಪ್‌ ಟೂರ್ನಿ ವೇಳೆ ಮಂಡಿ ನೋವಿನ ಗಾಯದ ಸಮಸ್ಯೆ ಎದುರಿಸಿದ್ದ ಆಲ್‌ರೌಂಡರ್‌ ರವೀಂದ್ರ ಜಡೇಜಾ, ಬಳಿಕ ಶಸ್ತ್ರಚಿಕಿತ್ಸೆ ಪಡೆದು 5 ತಿಂಗಳ ವಿಶ್ರಾಂತಿ ಪಡೆದಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಿ ಬ್ಯಾಕ್‌ ಟು ಬ್ಯಾಕ್‌ ಪಂದ್ಯಶ್ರೇಷ್ಠ ಗೌರವ ಪಡೆದಿರುವ ಜಡೇಜಾ, ಇದೀಗ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

IND vs AUS: 6 ವಿಕೆಟ್‌ಗಳಿಂದ 2ನೇ ಟೆಸ್ಟ್‌ ಗೆದ್ದು ಟ್ರೋಫಿ ಉಳಿಸಿಕೊಂಡ ಭಾರತ!
ಮಾರ್ಚ್‌ 17ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಪಂದ್ಗಯ ನಡೆಯಲಿದೆ. ಬಳಿಕ ಎರಡನೇ ಹಣಾಹಣಿ ಮಾರ್ಚ್‌ 19ರಂದು ವೈಝಾಗ್‌ನಲ್ಲಿ ಜರುಗಲಿದೆ. ಮೂರನೇ ಹಾಗೂ ಅಂತಿಮ ಪಂದ್ಯ ಮಾರ್ಚ್‌ 22ರಂದು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್‌ ಶರ್ಮಾ ಅಲಭ್ಯರಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನು ಮುನ್ನಡೆಲಿದ್ದಾರೆ.

KL Rahul: 'ಅರ್ಧಶತಕ ಬಾರಿಸಿದ್ದರೂ ವೇಸ್ಟ್‌', ರಾಹುಲ್‌ ವಿರುದ್ಧ ಮತ್ತೆ ಗುಡುಗಿದ ವೆಂಕಿ!
ಆಸ್ಟ್ರೇಲಿಯಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್ (ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌), ಇಶಾನ್ ಕಿಶನ್ (ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮ್ರಾನ್ ಮಲಿಕ್, ಶಾರ್ದುಲ್ ಠಾಕೂರ್, ಅಕ್ಷರ್‌ ಪಟೇಲ್, ಜಯದೇವ್ ಉನಾದ್ಕಟ್.

ಭಾರತ ತಂಡ 2023ರಲ್ಲಿ ಭರ್ಜರಿ ಆರಂಭ ಪಡೆದಿದ್ದು, ತಾಯ್ನಾಡಿನಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಗಳಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮೆರೆದಿದೆ. ಆಸ್ಟ್ರೇಲಿಯಾ ವಿರುದ್ಧವೂ ಅಂಥದ್ದೇ ಪ್ರದರ್ಶನವನ್ನು ಎದುರು ನೋಡುತ್ತಿದೆ.
ಲೇಖಕರ ಬಗ್ಗೆ
ವಿಜೇತ್ ಕುಮಾರ್
ವಿಜಯ ಕರ್ನಾಟಕ ವೆಬ್‌ನಲ್ಲಿ ಕ್ರೀಡಾ ವಿಭಾಗದ ಪತ್ರಕರ್ತರಾಗಿ 2019ರಿಂದ ಸೇವೆಯಲ್ಲಿದ್ದಾರೆ. ಇದಕ್ಕೂ ಮುನ್ನ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಂಜೆ ವಾಣಿ ಮತ್ತು ಒನ್‌ ಇಂಡಿಯಾ ಸಂಸ್ಥೆಗಳಲ್ಲಿ ಟೆಕ್‌, ಆಟೊಮೊಬೈಲ್ಸ್‌, ರಾಜಕೀಯ, ಸಿನಿಮಾ ಮತ್ತು ವಾಣಿಜ್ಯ ಕ್ಷೇತ್ರಗಳ ಬಗ್ಗೆ ವರದಿ ಮಾಡಿದ ಅನುಭವ ಹೊಂದಿದ್ದು, ಟೆನಿಸ್‌, ಬ್ಯಾಡ್ಮಿಂಟನ್‌ ಮತ್ತು ಕ್ರಿಕೆಟ್‌ ಇವರ ಅಚ್ಚುಮೆಚ್ಚಿನ ಕ್ರೀಡೆಗಳು. ಪವರ್‌ಲಿಫ್ಟಿಂಗ್ ಇವರ ಹೊಸ ಪ್ರವೃತ್ತಿ, ವ್ಯಾಯಾಮ, ಸಾಹಿತ್ಯ ಓದು, ಪ್ರವಾಸ, ಬೈಕಿಂಗ್‌ ಹಾಗೂ ಚಾರಣ ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌