IND vs AUS: ಭಾರತ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ ಅಚ್ಚರಿ ಹೇಳಿಕೆ ನೀಡಿದ ಡೇವಿಡ್ ವಾರ್ನರ್!
David Warner quite tired ahead of Test series against India: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೆಬ್ರವರಿ 9 ರಿಂದ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಾದಾಟ ನಡೆಸಲಿವೆ. ಈ ಮಹತ್ವದ ಟೆಸ್ಟ್ ಸರಣಿಗೂ ಮುನ್ನ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಈ ಬೇಸಿಗೆಯಲ್ಲಿ ಬುಡುವಿಲ್ಲದ ವೇಳಾಪಟ್ಟಿಯಿಂದ ನಾನು ತುಂಬಾ ದಣಿದಿದ್ದೇನೆ. ಆದರೆ, ಈ ವೇಳೆ ಉತ್ತಮ ಹಾಗೂ ತಾಜಾತನದಿಂದ ಇರಲು ಪ್ರಯತ್ನಿಸುತ್ತಿದ್ದೇನೆಂದು ಸಿಡ್ನಿ ಥಂಡರ್ಸ್ ತಂಡದ ಆಟಗಾರ ತಿಳಿಸಿದ್ದಾರೆ.
ಹೈಲೈಟ್ಸ್:
- ಫೆಬ್ರವರಿ 9 ರಿಂದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ.
- ಭಾರತ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೂ ಆಸ್ಟ್ರೇಲಿಯಾ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
- ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಫೈನಲ್ಗೆ ತಲುಪುವ ಹಾದಿಯಲ್ಲಿ ಭಾರತ ತಂಡಕ್ಕೆ ಈ ಟೆಸ್ಟ್ ಸರಣಿ ತುಂಬಾ ಮಹತ್ವವನ್ನು ಪಡೆದುಕೊಂಡಿದೆ.
ಮೆಲ್ಬೋರ್ನ್: ಫೆಬ್ರವರಿ 9 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. 4 ಪಂದ್ಯಗಳ ಸರಣಿಯ ಮೊದಲನೇ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆಡಲು ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಫೆಬ್ರವರಿ 1 ರಂದು ಭಾರತಕ್ಕೆ ಆಗಮಿಸಲಿದೆ. ಕೊನೆಯ ಬಾರಿ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಅವರದೇ ನೆಲದಲ್ಲಿ ಸೋಲಿಸಿತ್ತು. ಹಾಗಾಗಿ ಈ ಸರಣಿಯಲ್ಲೂ ಟೀಮ್ ಇಂಡಿಯಾ ಗೆಲುವಿನ ನೆಚ್ಚಿನ ತಂಡವಾಗಿದೆ. ಭಾರತ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಾನು ತುಂಬಾ ದಣಿದಿದ್ದೇನೆ ಎಂದು ಆಸ್ಟ್ರೇಲಿಯಾದ ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಹೇಳಿಕೊಂಡಿದ್ದಾರೆ. ಜಿಂಬಾಬ್ವೆ, ನ್ಯೂಜಿಲೆಂಡ್, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗಳನ್ನು ಒಳಗೊಂಡಿರುವ ಬಿಡುವಿಲ್ಲದ ಬೇಸಿಗೆ ವೇಳಾಪಟ್ಟಿಯಲ್ಲಿ 36 ವರ್ಷದ ವಾರ್ನರ್ ಅನೇಕ ಸ್ವರೂಪಗಳಲ್ಲಿ ಆಡಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಆಡುವುದಲ್ಲದೆ, ವಾರ್ನರ್ ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಥಂಡರ್ಸ್ಗಾ ಈಗಾಗಲೇ 6 ಪಂದ್ಯಗಳನ್ನು ಆಡಿದ್ದಾರೆ.
ಈ ಬಗ್ಗೆಕ್ರಕ್ಬಝ್ ಜೊತೆ ಮಾತನಾಡಿರುವ ಡೇವಿಡ್ ವಾರ್ನರ್, "ಇದು ತುಂಬಾ ಸವಾಲಿನದು. ನನಗೆ ತುಂಬಾ ಆಯಾಸವಾಗಿದೆ. ಕೆಲವು ಆಟಗಾರರು ಯುಎಇ ಲೀಗ್ ಆಡಲು ಹೋಗಿದ್ದಾರೆ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ನನ್ನ ಬಗ್ಗೆ ಹೇಳುವುದಾದರೆ, ಇನ್ನೂ ಒಂದು ರಾತ್ರಿ ಕುಟುಂಬದೊಂದಿಗೆ ಮನೆಯಲ್ಲಿದ್ದರೆ ಚೆನ್ನಾಗಿರುತ್ತಿತ್ತು. ಆದರೆ ಇದು ನನ್ನಿಂದ ಸಾಧ್ಯವಾಗುತ್ತಿಲ್ಲ," ಎಂದು ತಿಳಿಸಿದ್ದಾರೆ.
ಅಪಾಯಕಾರಿ ಆರಂಭಿಕ ಆಟಗಾರ ವಾರ್ನರ್ ತಮ್ಮ 100 ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಗಳಿಸುವ ಮೂಲಕ ತಮ್ಮ ಕಳಪೆ ಫಾರ್ಮ್ನಿಂದ ಕಮ್ಬ್ಯಾಕ್ ಮಾಡಿದ್ದರು. ಇತ್ತೀಚೆಗೆ ಸಿಡ್ನಿ ಥಂಡರ್ಸ್ ಪರ ಪಂದ್ಯದಲ್ಲಿ 20 ಎಸೆತಗಳಲ್ಲಿ ಅಜೇಯ 36 ರನ್ ಗಳಿಸಿದ್ದರು. ಥಂಡರ್ಸ್ ತಂಡದಲ್ಲಿ ಒಂದಿಷ್ಟು ಶಕ್ತಿ ತುಂಬಲು ಪ್ರಯತ್ನಿಸುತ್ತಿದ್ದೇನೆ. ಆದರೆ ಈ ವರ್ಷ ನನ್ನ ಪಾಲಿನ ಸಂಗತಿಗಳು ಚೆನ್ನಾಗಿಲ್ಲ. ಆದರೆ ಮುಂದಿನ ವರ್ಷ ನಾನು ಈಗಿರುವುದಕ್ಕಿಂತ ಹೆಚ್ಚು ತಾಜಾತನವಾಗಿ ಆಡುತ್ತೇನೆ ಎಂದಿದ್ದಾರೆ.
"ಮುಂದಿನ ದಿನ ವರ್ಷ ಉತ್ತಮ ಹಾಗೂ ಇನ್ನಷ್ಟು ತಾಜಾತನದಿಂದ ಆಡಲು ಪ್ರಯತ್ನಿಸುತ್ತೇನೆ. ಈ ಬೇಸಿಗೆಯಲ್ಲಿ ನಾವು ತವರಿನಲ್ಲಿ ಸಾಕಷ್ಟು ಕ್ರಿಕೆಟ್ ಆಡಲಿದ್ದೇವೆ. ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಸೇರಿದಂತೆ ತಂಡದ ವೆಳಾಪಟ್ಟಿ ಜಾಸ್ತಿ ಇದೆ. ವೈಯಕ್ತಿಕವಾಗಿ ಹೇಳಬೇಕೆಂದರೆ, ಆದಷ್ಟು ತಾಜಾತನದಿಂದ ಇರಲು ಪ್ರಯತ್ನಿಸುತ್ತೇನೆ," ಎಂದು ಹೇಳಿದ್ದಾರೆ.
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅರ್ಹತೆ ಪಡೆಯಲು ಭಾರತ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯೂ ಅತ್ಯಂತ ನಿರ್ಣಾಯಕವಾಗಿದೆ. ಈ ಸರಣಿಯನ್ನು ಭಾರತ ಗೆದ್ದುಕೊಂಡರೆ ಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯ ಬಹಳ ಎಚ್ಚರಿಕೆಯಿಂದ ಈ ಸರಣಿಯಲ್ಲಿ ಆಡಲಿದೆ.
ಈ ಬಗ್ಗೆಕ್ರಕ್ಬಝ್ ಜೊತೆ ಮಾತನಾಡಿರುವ ಡೇವಿಡ್ ವಾರ್ನರ್, "ಇದು ತುಂಬಾ ಸವಾಲಿನದು. ನನಗೆ ತುಂಬಾ ಆಯಾಸವಾಗಿದೆ. ಕೆಲವು ಆಟಗಾರರು ಯುಎಇ ಲೀಗ್ ಆಡಲು ಹೋಗಿದ್ದಾರೆ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ನನ್ನ ಬಗ್ಗೆ ಹೇಳುವುದಾದರೆ, ಇನ್ನೂ ಒಂದು ರಾತ್ರಿ ಕುಟುಂಬದೊಂದಿಗೆ ಮನೆಯಲ್ಲಿದ್ದರೆ ಚೆನ್ನಾಗಿರುತ್ತಿತ್ತು. ಆದರೆ ಇದು ನನ್ನಿಂದ ಸಾಧ್ಯವಾಗುತ್ತಿಲ್ಲ," ಎಂದು ತಿಳಿಸಿದ್ದಾರೆ.
ಅಪಾಯಕಾರಿ ಆರಂಭಿಕ ಆಟಗಾರ ವಾರ್ನರ್ ತಮ್ಮ 100 ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಗಳಿಸುವ ಮೂಲಕ ತಮ್ಮ ಕಳಪೆ ಫಾರ್ಮ್ನಿಂದ ಕಮ್ಬ್ಯಾಕ್ ಮಾಡಿದ್ದರು. ಇತ್ತೀಚೆಗೆ ಸಿಡ್ನಿ ಥಂಡರ್ಸ್ ಪರ ಪಂದ್ಯದಲ್ಲಿ 20 ಎಸೆತಗಳಲ್ಲಿ ಅಜೇಯ 36 ರನ್ ಗಳಿಸಿದ್ದರು. ಥಂಡರ್ಸ್ ತಂಡದಲ್ಲಿ ಒಂದಿಷ್ಟು ಶಕ್ತಿ ತುಂಬಲು ಪ್ರಯತ್ನಿಸುತ್ತಿದ್ದೇನೆ. ಆದರೆ ಈ ವರ್ಷ ನನ್ನ ಪಾಲಿನ ಸಂಗತಿಗಳು ಚೆನ್ನಾಗಿಲ್ಲ. ಆದರೆ ಮುಂದಿನ ವರ್ಷ ನಾನು ಈಗಿರುವುದಕ್ಕಿಂತ ಹೆಚ್ಚು ತಾಜಾತನವಾಗಿ ಆಡುತ್ತೇನೆ ಎಂದಿದ್ದಾರೆ.
"ಮುಂದಿನ ದಿನ ವರ್ಷ ಉತ್ತಮ ಹಾಗೂ ಇನ್ನಷ್ಟು ತಾಜಾತನದಿಂದ ಆಡಲು ಪ್ರಯತ್ನಿಸುತ್ತೇನೆ. ಈ ಬೇಸಿಗೆಯಲ್ಲಿ ನಾವು ತವರಿನಲ್ಲಿ ಸಾಕಷ್ಟು ಕ್ರಿಕೆಟ್ ಆಡಲಿದ್ದೇವೆ. ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಸೇರಿದಂತೆ ತಂಡದ ವೆಳಾಪಟ್ಟಿ ಜಾಸ್ತಿ ಇದೆ. ವೈಯಕ್ತಿಕವಾಗಿ ಹೇಳಬೇಕೆಂದರೆ, ಆದಷ್ಟು ತಾಜಾತನದಿಂದ ಇರಲು ಪ್ರಯತ್ನಿಸುತ್ತೇನೆ," ಎಂದು ಹೇಳಿದ್ದಾರೆ.
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ಅರ್ಹತೆ ಪಡೆಯಲು ಭಾರತ ತಂಡಕ್ಕೆ ಆಸ್ಟ್ರೇಲಿಯಾ ವಿರುದ್ಧದ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯೂ ಅತ್ಯಂತ ನಿರ್ಣಾಯಕವಾಗಿದೆ. ಈ ಸರಣಿಯನ್ನು ಭಾರತ ಗೆದ್ದುಕೊಂಡರೆ ಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯ ಬಹಳ ಎಚ್ಚರಿಕೆಯಿಂದ ಈ ಸರಣಿಯಲ್ಲಿ ಆಡಲಿದೆ.