ಆ್ಯಪ್ನಗರ

IND vs AUS: 3ನೇ ಒಡಿಐಗೆ ಸೂರ್ಯಕುಮಾರ್‌ ಬದಲು ಸಂಜುಗೆ ಚಾನ್ಸ್‌ ಕೊಡಿ ಎಂದ ಜಾಫರ್‌!

Wasim Jaffer Bats for Sanju samson: ಆಸ್ಟ್ರೇಲಿಯಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೂರ್ಯಕುಮಾರ್‌ ಯಾದವ್‌ ಗೋಲ್ಡನ್‌ ಡಕ್‌ಔಟ್‌ ಆಗಿದ್ದಾರೆ. ಮಿಚೆಲ್‌ ಸ್ಟಾರ್ಕ್ ಬೌಲಿಂಗ್‌ ರಣತಂತ್ರ ಎದುರಿಸುವಲ್ಲಿ ವಿಫಲರಾಗಿರುವ ಸೂರ್ಯಕುಮಾರ್‌ ಯಾದವ್ ಎರಡೂ ಪಂದ್ಯಗಳಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರನೇ ಹಾಗೂ ಏಕದಿನ ಸರಣಿಯ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಮಾಡಿಕೊಡಬೇಕೆಂದು ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವಸೀಮ್‌ ಜಾಫರ್‌ ಆಗ್ರಹಿಸಿದ್ದಾರೆ.

Authored byರಮೇಶ ಕೋಟೆ | Vijaya Karnataka Web 20 Mar 2023, 1:11 pm

ಹೈಲೈಟ್ಸ್‌:

  • ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ನಡೆಯುತ್ತಿದೆ.
  • ಆರಂಭಿಕ ಎರಡೂ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅವರು ಗೋಲ್ಡನ್‌ ಡಕ್‌ಔಟ್‌ ಆಗಿದ್ದರು.
  • ಮೂರನೇ ಪಂದ್ಯಕ್ಕೆ ಸೂರ್ಯಕುಮಾರ್‌ ಯಾದವ್‌ ಬದಲು ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಿ ಎಂದ ವಸೀಮ್ ಜಾಫರ್ ಆಗ್ರಹಿಸಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sanju samson
ಸಂಜು ಸ್ಯಾಮ್ಸನ್‌ (ಚಿತ್ರ: ಟ್ವಿಟರ್‌)
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಎರಡೂ ಪಂದ್ಯಗಳಲ್ಲಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿರುವ ಟಿ20 ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅವರ ಬದಲು ಮೂರನೇ ಪಂದ್ಯಕ್ಕೆ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಬೇಕೆಂದು ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವಸೀಮ್‌ ಜಾಫರ್‌ ಆಗ್ರಹಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್‌ ಪಂದ್ಯದ ವೇಳೆ ಶ್ರೇಯಸ್‌ ಅಯ್ಯರ್‌ ಅವರು ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ. ಇದರ ಫಲವಾಗಿ ಏಕದಿನ ಸರಣಿಯಲ್ಲಿ ಆಡಲು ಸೂರ್ಯಕುಮಾರ್‌ ಯಾದವ್‌ಗೆ ಅವಕಾಶ ಲಭಿಸಿತ್ತು.

ಆದರೆ, ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಮುಂಬೈ ಮೂಲದ ಬ್ಯಾಟ್ಸ್‌ಮನ್‌ ವಿಫಲರಾಗಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಮಿಚೆಲ್‌ ಸ್ಟಾರ್ಕ್‌ಗೆ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದ ಸೂರ್ಯಕುಮಾರ್‌ ಯಾದವ್‌, ವಿಶಾಖಪಟ್ಟಂನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ಮಿಚೆಲ್‌ ಸ್ಟಾರ್ಕ್‌ಗೆ ಮತ್ತೆ ಅದೇ ಹಾದಿಯಲ್ಲಿ ವಿಕೆಟ್‌ ಒಪ್ಪಿಸಿದ್ದರು.
IND vs AUS: 'ಟಿ20ಗೆ ಓಕೆ, ಒಡಿಐಗೆ ಬೇಡ'-ಸೂರ್ಯಕುಮಾರ್‌ ಎದುರಿಸುತ್ತಿರುವ ಸಮಸ್ಯೆ ತಿಳಿಸಿದ ಗವಾಸ್ಕರ್!
ಇಎಸ್‌ಪಿಎನ್‌ ಕ್ರಿಕ್‌ಇನ್ಪೋ ಜೊತೆ ಮಾತನಾಡಿದ ವಸೀಮ್‌ ಜಾಫರ್‌, ಆಸ್ಟ್ರೇಲಿಯಾ ವಿರುದ್ಧ ಚೆನ್ನೈ ಎಂ ಚಿದಂಬರಂನಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಸೂರ್ಯಕುಮಾರ್‌ ಯಾದವ್‌ ಅವರ ಬದಲು ಸಂಜು ಸ್ಯಾಮ್ಸನ್ ಅವರನ್ನು ಕರೆತರಬೇಕೆಂದು ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದ್ದಾರೆ.

"ಸೂರ್ಯಕುಮಾರ್ ಯಾದವ್ ಎದುರಿಸಿದ ಮೊದಲ ಎಸೆತವು 145 ಕಿ.ಮೀ ವೇಗದಿಂದ ಕೂಡಿತ್ತು ಎಂದು ನಾವು ಅವರ ಮೇಲೆ ಸಹಾನುಭೂತಿ ತೋರಬಹುದು. ಎಡಗೈ ಸೀಮರ್ ಚೆಂಡನ್ನು ಹಿಂದಕ್ಕೆ ತರಲು ಪ್ರಯತ್ನಿಸಿದಾಗ ಅದು ಸವಾಲಿನದಾಗಿರುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಮತ್ತೊಮ್ಮೆ ಮಿಚೆಲ್ ಸ್ಟಾರ್ಕ್ ಬೌಲ್ ಮಾಡಿದಾಗ, ಅವರು ಸ್ಟಂಪ್‌ಗಳ ಮೇಲೆ ದಾಳಿ ಮಾಡುತ್ತಾರೆ ಮತ್ತು ಚೆಂಡನ್ನು ಸ್ವಿಂಗ್ ಮಾಡಬಹುದು ಎಂದು ಸೂರ್ಯಕುಮಾರ್‌ ಯಾದವ್‌ ಮೊದಲೇ ನಿರೀಕ್ಷಿಸಬೇಕಾಗಿತ್ತು ಹಾಗೂ ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಬೇಕಾಗಿತ್ತು," ಎಂದು ವಸೀಮ್‌ ಜಾಫರ್ ಹೇಳಿದ್ದಾರೆ.
IND vs AUS: ಕಳೆದ 13 ವರ್ಷಗಳಿಂದ ನನ್ನ ಯೋಜನೆ ಬದಲಾಗಿಲ್ಲವೆಂದ ಮಿಚೆಲ್‌ ಸ್ಟಾರ್ಕ್‌!
ಭಾರತ ಏಕದಿನ ತಂಡದಲ್ಲಿ ಸಿಕ್ಕ ಸೀಮಿತ ಅವಕಾಶಗಳಲ್ಲಿ ಸಂಜು ಸ್ಯಾಮ್ಸನ್ ಅತ್ಯುತ್ತಮ ಪ್ರದರ್ಶನವನ್ನು ತೋರಿದ್ದಾರೆ. ಆಡಿರುವ 11 ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್‌ 66ರ ಸರಾಸರಿಯಲ್ಲಿ 330 ರನ್‌ಗಳನ್ನು ಗಳಿಸಿದ್ದಾರೆ. ಹಾಗಾಗಿ ಭಾರತ ಏಕದಿನ ತಂಡದಲ್ಲಿ ಆಡಲು ಸಂಜು ಸ್ಯಾಮ್ಸನ್‌ ಅರ್ಹರಾಗಿದ್ದಾರೆ ಎಂದು ಜಾಫರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

'ವೈಫಲ್ಯದ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ಅವರನ್ನು ಮೂರನೇ ಪಂದ್ಯಕ್ಕೆ ಟೀಮ್‌ ಮ್ಯಾನೇಜ್‌ಮೆಂಟ್‌ ಉಳಿಸಿಕೊಳ್ಳಲಿದೆಯೇ ಎಂದು ಕಾದು ನೋಡಬೇಕಾಗುತ್ತದೆ. ಒಂದು ವೇಳೆ ಸಿಕ್ಕ ಸೀಮಿತ ಅವಕಾಶಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿರುವ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಿದರೂ ಒಳ್ಳೆಯ ಆಯ್ಕೆಯಾಗಲಿದೆ," ಎಂದು ವಸೀಮ್ ಜಾಫರ್‌ ತಿಳಿಸಿದ್ದಾರೆ.
IND vs AUS: ದ್ವಿತೀಯ ಒಡಿಐನಲ್ಲಿ ಟೀಮ್ ಇಂಡಿಯಾಗೆ 10 ವಿಕೆಟ್‌ಗಳ ಹೀನಾಯ ಸೋಲು!
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿವೆ. ಬುಧವಾರದ ಪಂದ್ಯ ಗೆಲ್ಲುವ ತಂಡ ಏಕದಿನ ಸರಣಿಯನ್ನು ಮುಡಿಗೇರಿಸಿಕೊಳ್ಳಲಿದೆ.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌