ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಭಾರತ ಪ್ಲೇಯಿಂಗ್ XI ಆರಿಸಿದ ಆಕಾಶ್ ಚೋಪ್ರಾ!
2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಆಕಾಶ್ ಚೋಪ್ರಾ, ಟೀಮ್ ಇಂಡಿಯಾದ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡಿದ್ದಾರೆ. ಆದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ದಿನೇಶ್ ಕಾರ್ತಿಕ್ ಹಾಗೂ ಕುಲ್ದೀಪ್ ಯಾದವ್ ಅವರನ್ನು ಕೈ ಬಿಟ್ಟಿದ್ದಾರೆ.
ಹೈಲೈಟ್ಸ್:
- ಜೂನ್ 9 ರಿಂದ ಐದು ಪಂದ್ಯಗಳ ಟಿ20 ಸರಣಿ ಆಡಲಿರುವ ಭಾರತ-ದಕ್ಷಿಣ ಆಫ್ರಿಕಾ.
- ತವರು ಟಿ20 ಸರಣಿಗೆ ಭಾರತ ತಂಡದ ಅತ್ಯುತ್ತಮ ಪ್ಲೇಯಿಂಗ್ ಆರಿಸಿದ ಆಕಾಶ್ ಚೋಪ್ರಾ.
- ಕೆ.ಎಲ್ ರಾಹುಲ್ ಜೊತೆಗೆ ಋತುರಾಜ್ ಗಾಯಕ್ವಾಡ್ ಇನಿಂಗ್ಸ್ ಆರಂಭಿಸಲಿ ಎಂದ ಆಕಾಶ್.
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ಆರಿಸಿದ ಟೀಮ್ ಇಂಡಿಯಾ ಮಾಜಿ ಆರಂಭಿಕ ಆಕಾಶ್ ಚೋಪ್ರಾ, ಹಿರಿಯ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಹಾಗೂ ಕುಲ್ದೀಪ್ ಯಾದವ್ ಅವರನ್ನು ಕೈ ಬಿಟ್ಟು ಅಚ್ಚರಿ ಮೂಡಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟೂರ್ನಿಯು ಮೇ. 29 ರಂದು ಅಂತ್ಯವಾಗಲಿದೆ. ಜೂನ್ 9ರಿಂದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಈ ಸರಣಿಗೆ 18 ಸದಸ್ಯ ಭಾರತ ತಂಡವನ್ನು ಭಾನುವಾರ ಬಿಸಿಸಿಐ ಪ್ರಕಟಿಸಿದ್ದು, ದಿನೇಶ್ ಕಾರ್ತಿಕ್ ಹಾಗೂ ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್ ರಾಹುಲ್ ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ಕೆ.ಎಲ್ ರಾಹುಲ್ ಅವರ ಜೊತೆಗೆ ಋತುರಾಜ್ ಗಾಯಕ್ವಾಡ್ ಅವರನ್ನು ಇನಿಂಗ್ಸ್ ಆರಂಭಿಸಲು ಆಯ್ಕೆ ಮಾಡಿದ್ದಾರೆ.
ದ. ಆಫ್ರಿಕಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್ ನಾಯಕ!
"ಭಾರತ ತಂಡದ ಸಂಯೋಜನೆ ಬಗ್ಗೆ ನೋಡುವುದಾದರೆ, ಕೆ.ಎಲ್ ರಾಹುಲ್ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಬೇಕೆಂದು ನೀವು ಭಾವಿಸುತ್ತಿದ್ದೀರಿ. ಆದರೆ, ತಂಡದಲ್ಲಿ ಸಾಕಷ್ಟು ವಿಕೆಟ್ ಕೀಪರ್ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವುದು ಬೇಡ. ರಾಹುಲ್ ಜೊತೆ ಋತುರಾಜ್ ಗಾಯಕ್ವಾಡ್ ಇನಿಂಗ್ಸ್ ಆರಂಭಿಸಬೇಕೆಂದು," ಎಂದು ಚೋಪ್ರಾ ತಿಳಿಸಿದ್ದಾರೆ.
"ಭಾರತ ಪ್ಲೇಯಿಂಗ್ ಇಲೆವೆನ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಹೂಡ ಖಚಿತವಾಗಿ ಸ್ಥಾನ ಪಡೆಯಲಿದ್ದಾರೆಂಬ ಬಗ್ಗೆ ತಮಗೆ ಖಚಿತತೆ ಇದೆ. ಇವರ ಬಳಿಕ ರಿಷಭ್ ಪಂತ್ ಹಾಗೂ ಹಾರ್ದಿಕ್. ಈ ಇಬ್ಬರ ಮೂಲಕ ತಂಡದ ಮಧ್ಯಮ ಕ್ರಮಾಂಕ ಶಕ್ತಿಯುತವಾಗಿ ಕಾಣಿಸಿಕೊಳ್ಳಲಿದೆ," ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ: ಭಾರತ ತಂಡಕ್ಕೆ ಚೇತೇಶ್ವರ್ ಪೂಜಾರ ಕಮ್ಬ್ಯಾಕ್!
ದಿನೇಶ್ ಕಾರ್ತಿಕ್ ಅವರ ಜೊತೆಗೆ ವೆಂಕಟೇಶ್ ಅಯ್ಯರ್ ಅವರನ್ನೂ ಆಕಾಶ್ ಚೋಪ್ರಾ ಆಯ್ಕೆ ಮಾಡಲಿಲ್ಲ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಆರ್ಸಿಬಿ ಪರ 14 ಪಂದ್ಯಗಳಿಂದ ಕಾರ್ತಿಕ್, 191.33ರ ಸ್ಟ್ರೈಕ್ ರೇಟ್ನಲ್ಲಿ 287 ರನ್ ಸಿಡಿಸಿದ್ದಾರೆ. ಅದರಲ್ಲೂ 9 ಪಂದ್ಯಗಳಲ್ಲಿ ಅವರು ಅಜೇಯರಾಗಿ ಉಳಿದಿರುವುದು ವಿಶೇಷ ಸಂಗತಿ.
ದಕ್ಷಿಣ ಆಫ್ರಿಕಾ ವಿರುದ್ಧ ಆಕಾಶ್ ಚೋಪ್ರಾ ಅವರ ಭಾರತ ತಂಡ: ಕೆ.ಎಲ್ ರಾಹುಲ್, ಋತುರಾಜ್ ಗಾಯಕ್ವಾಡ್/ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡ, ರಿಷಭ್ ಪಂತ್(ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಆವೇಶ್ ಖಾನ್.
'ರಿಷಭ್ ಪಂತ್ ಮಾಡಿದ ದೊಡ್ಡ ಎಡವಟ್ಟು', ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅದೇ ಕಾರಣ!
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೆ ಭಾರತ ಟಿ20 ತಂಡಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ಕೀಪರ್/ ಉಪನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್ ರಾಹುಲ್ ಭಾರತ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ. ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ಕೆ.ಎಲ್ ರಾಹುಲ್ ಅವರ ಜೊತೆಗೆ ಋತುರಾಜ್ ಗಾಯಕ್ವಾಡ್ ಅವರನ್ನು ಇನಿಂಗ್ಸ್ ಆರಂಭಿಸಲು ಆಯ್ಕೆ ಮಾಡಿದ್ದಾರೆ.
ದ. ಆಫ್ರಿಕಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡ ಪ್ರಕಟ, ಕೆಎಲ್ ರಾಹುಲ್ ನಾಯಕ!
"ಭಾರತ ತಂಡದ ಸಂಯೋಜನೆ ಬಗ್ಗೆ ನೋಡುವುದಾದರೆ, ಕೆ.ಎಲ್ ರಾಹುಲ್ ಜೊತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಬೇಕೆಂದು ನೀವು ಭಾವಿಸುತ್ತಿದ್ದೀರಿ. ಆದರೆ, ತಂಡದಲ್ಲಿ ಸಾಕಷ್ಟು ವಿಕೆಟ್ ಕೀಪರ್ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವುದು ಬೇಡ. ರಾಹುಲ್ ಜೊತೆ ಋತುರಾಜ್ ಗಾಯಕ್ವಾಡ್ ಇನಿಂಗ್ಸ್ ಆರಂಭಿಸಬೇಕೆಂದು," ಎಂದು ಚೋಪ್ರಾ ತಿಳಿಸಿದ್ದಾರೆ.
"ಭಾರತ ಪ್ಲೇಯಿಂಗ್ ಇಲೆವೆನ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಹೂಡ ಖಚಿತವಾಗಿ ಸ್ಥಾನ ಪಡೆಯಲಿದ್ದಾರೆಂಬ ಬಗ್ಗೆ ತಮಗೆ ಖಚಿತತೆ ಇದೆ. ಇವರ ಬಳಿಕ ರಿಷಭ್ ಪಂತ್ ಹಾಗೂ ಹಾರ್ದಿಕ್. ಈ ಇಬ್ಬರ ಮೂಲಕ ತಂಡದ ಮಧ್ಯಮ ಕ್ರಮಾಂಕ ಶಕ್ತಿಯುತವಾಗಿ ಕಾಣಿಸಿಕೊಳ್ಳಲಿದೆ," ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ: ಭಾರತ ತಂಡಕ್ಕೆ ಚೇತೇಶ್ವರ್ ಪೂಜಾರ ಕಮ್ಬ್ಯಾಕ್!
ದಿನೇಶ್ ಕಾರ್ತಿಕ್ ಅವರ ಜೊತೆಗೆ ವೆಂಕಟೇಶ್ ಅಯ್ಯರ್ ಅವರನ್ನೂ ಆಕಾಶ್ ಚೋಪ್ರಾ ಆಯ್ಕೆ ಮಾಡಲಿಲ್ಲ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ದಿನೇಶ್ ಕಾರ್ತಿಕ್ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಆರ್ಸಿಬಿ ಪರ 14 ಪಂದ್ಯಗಳಿಂದ ಕಾರ್ತಿಕ್, 191.33ರ ಸ್ಟ್ರೈಕ್ ರೇಟ್ನಲ್ಲಿ 287 ರನ್ ಸಿಡಿಸಿದ್ದಾರೆ. ಅದರಲ್ಲೂ 9 ಪಂದ್ಯಗಳಲ್ಲಿ ಅವರು ಅಜೇಯರಾಗಿ ಉಳಿದಿರುವುದು ವಿಶೇಷ ಸಂಗತಿ.
ದಕ್ಷಿಣ ಆಫ್ರಿಕಾ ವಿರುದ್ಧ ಆಕಾಶ್ ಚೋಪ್ರಾ ಅವರ ಭಾರತ ತಂಡ: ಕೆ.ಎಲ್ ರಾಹುಲ್, ಋತುರಾಜ್ ಗಾಯಕ್ವಾಡ್/ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ದೀಪಕ್ ಹೂಡ, ರಿಷಭ್ ಪಂತ್(ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಆವೇಶ್ ಖಾನ್.
'ರಿಷಭ್ ಪಂತ್ ಮಾಡಿದ ದೊಡ್ಡ ಎಡವಟ್ಟು', ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅದೇ ಕಾರಣ!
ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೆ ಭಾರತ ಟಿ20 ತಂಡಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ಕೀಪರ್/ ಉಪನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.