ಆ್ಯಪ್ನಗರ

ದ.ಆಫ್ರಿಕಾ ಸರಣಿಯಲ್ಲಿ ಭರ್ಜರಿ ಕಮ್‌ಬ್ಯಾಕ್ ಸೂಚನೆ ನೀಡಿದ ಹಾರ್ದಿಕ್ ಪಾಂಡ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯವು ಮಾ.12ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಇದರಂತೆ ಭರ್ಜರಿ ಪುನರಾಗಮನವನ್ನು ಎದುರು ನೋಡುತ್ತಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಕಠಿಣ ತರಬೇತಿಯನ್ನು ಆರಂಭಿಸಿದ್ದಾರೆ.

Vijaya Karnataka Web 11 Mar 2020, 11:27 am

ಹೈಲೈಟ್ಸ್‌:

  • ಫಾರ್ಮ್‌ಗಿಂತಲೂ ಮ್ಯಾಚ್ ಫಿಟ್ನೆಸ್ ಸಾಬೀತು ಮಾಡುವುದೇ ಹಾರ್ದಿಕ್ ಪಾಲಿಗೆ ದೊಡ್ಡ ಸವಾಲು.
  • ಐಪಿಎಲ್‌ಗೂ ಮೊದಲು ನಡೆಯುತ್ತಿರುವ ಅಂತಿಮ ಟೂರ್ನಿ.
  • ಹೊಸ ಸವಾಲುಗಳಿಗೆ ಸಜ್ಜಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಹಾರ್ದಿಕ್ ಪಾಂಡ್ಯ
ಧರ್ಮಶಾಲಾ: ಗಾಯದಿಂದ ಸಂಪೂರ್ಣವಾಗಿ ಚೇತರಿಕೆಗೊಂಡು ಟೀಮ್ ಇಂಡಿಯಾ ಕಮ್‌ಬ್ಯಾಕ್ ಗುರಿಯಿರಿಸಿಕೊಂಡಿರುವ ಆಲೌರೌಂಡರ್ ಹಾರ್ದಿಕ್ ಪಾಂಡ್ಯ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಮುಂಚಿತವಾಗಿ ಕಠಿಣ ತರಬೇತಿಯಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ನೂತನ ಸವಾಲಿಗೆ ಸಜ್ಜಾಗಿದ್ದಾರೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಮಾರ್ಚ್ 12ರಂದು ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಕೊರೊನಾ ವೈರಸ್ ಸೋಂಕು ಹರಡುವ ಭೀತಿಯ ಮಧ್ಯೆಯೇ ಈ ಟೂರ್ನಿ ಆಯೋಜಿಸಲಾಗುತ್ತಿದೆ ಎಂಬುದು ಗಮನಾರ್ಹವೆನಿಸುತ್ತದೆ.

ಬೆನ್ನು ನೋವಿಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಲಂಡನ್‌ನಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿದ್ದರು. ತದಾ ಬಳಿಕ ವರ್ಷಾರಂಭದಲ್ಲಿ ನಡೆದ ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ತಂಡಕ್ಕೆ ಕಮ್‌ಬ್ಯಾಕ್ ಮಾಡಬೇಕಿತ್ತು. ಆದರೆ ಸಂಪೂರ್ಣವಾಗಿ ಚೇತರಿಕೆಗೊಳ್ಳದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಮತ್ತಷ್ಟು ಸಮಯ ಕಳೆಯುವಂತಾಗಿತ್ತು. ಒಟ್ಟಾರೆಯಾಗಿ ಗಾಯದ ಸಮಸ್ಯೆಯಿಂದಾಗಿ ಏಳು ತಿಂಗಳುಗಳಷ್ಟು ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿಯುವಂತಾಗಿದೆ.

ಕೊರೊನಾ ಸವಾಲಿಗೆ ಕ್ರಿಕೆಟಿಗರು ಸಜ್ಜು; ಮಾಸ್ಕ್ ಧರಿಸಿ ವಿಮಾನವೇರಿದ ಚಹಲ್

ತದಾ ಬಳಿಕ ಡಿವೈ ಪಾಟೀಲ್ ದೇಶೀಯ ಟಿ20 ಕ್ರಿಕೆಟ್‌ನಲ್ಲಿ ಪಾಲ್ಗೊಂಡು ಎರಡು ಭರ್ಜರಿ ಶತಕಗಳನ್ನು ಬಾರಿಸಿರುವ ಹಾರ್ದಿಕ್ ಪಾಂಡ್ಯ, ಸಂಪೂರ್ಣ ಫಿಟ್ ಎಂಬುದನ್ನು ಸಾರಿದ್ದರು. ಇದಾದ ಬೆನ್ನಲ್ಲೇ ಸುನಿಲ್ ಜೋಶಿ ನೇತೃತ್ವದ ನೂತನ ಆಯ್ಕೆ ಸಮಿತಿಯು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ತಂಡಕ್ಕೆ ಸೇರ್ಪಡೆಗೊಳಿಸಿತ್ತು.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಸೂಕ್ತ ಆಲ್‌ರೌಂಡರ್ ಆಟಗಾರನ ಕೊರತೆಯನ್ನು ಎದುರಿಸಿತ್ತು. ಅಕ್ಟೋಬರ್ ತಿಂಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಪಾಂಡ್ಯ ಸಂಪೂರ್ಣ ಫಿಟ್ನೆಸ್ ಮರಳಿ ಪಡೆಯುವುದು ಅತಿ ಅಗತ್ಯವೆನಿಸಿದೆ. ಈ ನಿಟ್ಟಿನಲ್ಲಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡಾ ನೆರವಾಗಲಿದೆ. ಹಾರ್ದಿಕ್ ಪಾಂಡ್ಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.

ಮಗದೊಂದು ಸ್ಮರಣೀಯ ಸಚಿನ್ ದಾಖಲೆ ಮುರಿಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ!

ಧರ್ಮಶಾಲಾದಲ್ಲಿ ನಡೆಯಲಿರುವ ಏಕದಿನ ಪಂದ್ಯಕ್ಕೂ ಮುನ್ನ ಅಭ್ಯಾಸ ಅವಧಿಯಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ, ಸಂಪೂರ್ಣ ಸಕ್ರಿಯವಾಗಿ ಕಾಣಿಸಿಕೊಳ್ಳುವ ಮೂಲಕ ತಂಡದ ವಾತಾವರಣವನ್ನು ಬದಲಾಯಿಸಲು ನೆರವಾದರು. ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ದಾಳಿಯಲ್ಲೂ ಹಾರ್ದಿಕ್ ಪಾಂಡ್ಯ ಅಭ್ಯಾಸ ನಡೆಸಿದರು. ಈ ಸಂದರ್ಭದಲ್ಲಿ ಕೋಚ್ ರವಿಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ಸೂಕ್ಷ್ಮವಾಗಿ ಗಮನಿಸಿದ್ದರು. ಒಟ್ಟಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯು ಹಾರ್ದಿಕ್ ಪಾಂಡ್ಯ ಪಾಲಿಗೆ ತಮ್ಮ ಫಿಟ್ನೆಸ್ ಸಾಬೀತುಪಡಿಸಲು ಅತಿ ಮಹತ್ವದೆನಿಸಿದೆ.

ಭಾರತ vs ದಕ್ಷಿಣ ಆಫ್ರಿಕಾ ಏಕದಿನ ಸರಣಿ ವೇಳಾಪಟ್ಟಿ ಇಂತಿದೆ:

ಮೊದಲ ಏಕದಿನ: ಮಾ. 12 (ಗುರುವಾರ), ಧರ್ಮಶಾಲಾ
ದ್ವಿತೀಯ ಏಕದಿನ: ಮಾ. 15, (ಭಾನುವಾರ), ಲಕ್ನೋ
ಅಂತಿಮ ಏಕದಿನ: ಮಾ. 18, (ಬುಧವಾರ), ಕೋಲ್ಕತಾ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌