ಪಾರ್ಲ್ (ದಕ್ಷಿಣ ಆಫ್ರಿಕಾ): ಅವಕಾಶ ಕೊಟ್ಟರೆ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗುತ್ತೇನೆ ಎಂದು ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಬಳಿಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ನಾಯಕ ಯಾರಾಗುತ್ತಾರೆ? ಎಂದು ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಬುಮ್ರಾ ತಮ್ಮ ಹೆಸರನ್ನು ಮುಂದಿಟ್ಟಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ಅವರ ಕ್ಯಾಪ್ಟನ್ಸಿ ಅವಧಿ ಅಂತ್ಯಗೊಂಡಿದೆ. ಇದರ ಬೆನ್ನಲ್ಲೇ ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಮುಂದಿನ ಕ್ಯಾಪ್ಟನ್ ಆಗುವ ರೇಸ್ನಲ್ಲಿ ಮುಂದಿದ್ದಾರೆ.
"ಅವಕಾಶ ಕೊಟ್ಟದ್ದೇ ಆದರೆ, ಅದನ್ನು ಗೌರವ ಎಂದು ಸ್ವೀಕರಿಸಿ ಭಾರತ ತಂಡವನ್ನು ಮುನ್ನಡೆಸುತ್ತೇನೆ.. ಇದಕ್ಕೆ ತಂಡದ ಬೇರೆ ಯಾವ ಆಟಗಾರರು ಕೂಡ ತಕರಾರು ತೆಗೆಯುವುದಿಲ್ಲ. ನಾಯಕತ್ವದ ಗುಂಪಿನಲ್ಲಿ ಯಾವುದೇ ಜವಾಬ್ದಾರಿ ಸಿಗಲಿ, ತಂಡದ ಯಶಸ್ಸಿಗಾಗಿ ನನ್ನ ಸಲಕ ಪ್ರಯತ್ನ ನಡೆಸುತ್ತೇನೆ," ಎಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಬುಮ್ರಾ ಹೇಳಿಕೊಂಡಿದ್ದಾರೆ. ಬುಧವಾರ ಒಡಿಐ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ ಕೆಎಲ್ ರಾಹುಲ್ ಈ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಜಸ್ಪ್ರೀತ್ ಬುಮ್ರಾ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ.
"ಈ ಸಂಗತಿಯನ್ನು ಒಮ್ಮೆ ಈ ದೃಷ್ಟಿಯಿಂದ ನೋಡಿ. ಜವಾಬ್ದಾರಿಯನ್ನು ಹೊರುವುದು ಮತ್ತು ಆಟಗಾರರೊಂದಿಗೆ ಮಾತನಾಡಿ ಅವರ ಶ್ರೇಷ್ಠ ಆಟ ಹೊರತರುವಂತೆ ಮಾಡುವ ಕೆಲಸವನ್ನು ನಾನು ಮೊದಲಿನಿಂದಲೂ ಮಾಡುತ್ತಾ ಬಂದಿದ್ದೇನೆ. ಯಾವುದೇ ಪರಿಸ್ಥಿತಿ ಇರಲಿ. ಭವಿಷ್ಯದಲ್ಲೂ ನಾನು ಇದನ್ನೇ ಮಾಡುತ್ತೇನೆ," ಎಂದು ಬುಮ್ರಾ ಹೇಳಿದ್ದಾರೆ.
ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವ ಬಿಟ್ಟ ಬಗ್ಗೆ ಮಾತನಾಡಿದ ಬುಮ್ರಾ, ಮಾಜಿ ನಾಯಕನ ಈ ನಿರ್ಧಾರವನ್ನು ತಂಡದ ಎಲ್ಲಾ ಆಟಗಾರರು ಗೌರವಿಸಿದ್ದಾರೆ ಎಂದಿದ್ದಾರೆ.
ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದೇಕೆ? ಮೀಟಿಂಗ್ನಲ್ಲಿ ನಡೆದಿದ್ದೇನು? ಬುಮ್ರಾ ವಿವರಣೆ!
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ತಾಯ್ನಾಡಿನಲ್ಲಿ ವೆಸ್ಟ್ ಇಂಡೀಸ್ ಎದುರು ತಲಾ ಮೂರು ಪಂದ್ಯಗಳ ಟಿ20 ಮತ್ತು ಒಡಿಐ ಸರಣಿಗಳನ್ನು ಆಡಲಿದೆ. ಇದರ ಬಳಿಕ ಫೆಬ್ರವರಿ ಅಂತ್ಯದ ಹೊತ್ತಿಗೆ ಶ್ರೀಲಂಕಾ ಎದುರು 2 ಟೆಸ್ಟ್ಗಳ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಟೆಸ್ಟ್ ತಂಡಕ್ಕೆ ನೂತನ ಕ್ಯಾಪ್ಟನ್ ಆಯ್ಕೆಯಾಗಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿ ವೇಳಾಪಟ್ಟಿ
ಪ್ರಥಮ ಒಡಿಐ: ಜನವರಿ 19, ಪಾರ್ಲ್
ದ್ವಿತೀಯ ಒಡಿಐ: ಜನವರಿ 21, ಪಾರ್ಲ್
ತೃತೀಯ ಒಡಿಐ: ಜನವರಿ 23, ಕೇಪ್ ಟೌನ್
ಟೀಮ್ ಇಂಡಿಯಾದ ಪರಿಷ್ಕೃತ ತಂಡ ಹೀಗಿದೆಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ಕೀಪರ್), ಇಶಾನ್ ಕಿಶನ್ (ವಿಕೆಟ್ಕೀಪರ್), ವೆಂಕಟೇಶ್ ಅಯ್ಯರ್, ಶಾರ್ದುಲ್ ಠಾಕೂರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ದೀಪಕ್ ಚಹರ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.
"ಅವಕಾಶ ಕೊಟ್ಟದ್ದೇ ಆದರೆ, ಅದನ್ನು ಗೌರವ ಎಂದು ಸ್ವೀಕರಿಸಿ ಭಾರತ ತಂಡವನ್ನು ಮುನ್ನಡೆಸುತ್ತೇನೆ.. ಇದಕ್ಕೆ ತಂಡದ ಬೇರೆ ಯಾವ ಆಟಗಾರರು ಕೂಡ ತಕರಾರು ತೆಗೆಯುವುದಿಲ್ಲ. ನಾಯಕತ್ವದ ಗುಂಪಿನಲ್ಲಿ ಯಾವುದೇ ಜವಾಬ್ದಾರಿ ಸಿಗಲಿ, ತಂಡದ ಯಶಸ್ಸಿಗಾಗಿ ನನ್ನ ಸಲಕ ಪ್ರಯತ್ನ ನಡೆಸುತ್ತೇನೆ," ಎಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಬುಮ್ರಾ ಹೇಳಿಕೊಂಡಿದ್ದಾರೆ. ಬುಧವಾರ ಒಡಿಐ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ ಕೆಎಲ್ ರಾಹುಲ್ ಈ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಜಸ್ಪ್ರೀತ್ ಬುಮ್ರಾ ಉಪನಾಯಕನ ಜವಾಬ್ದಾರಿ ನಿಭಾಯಿಸಲಿದ್ದಾರೆ.
"ಈ ಸಂಗತಿಯನ್ನು ಒಮ್ಮೆ ಈ ದೃಷ್ಟಿಯಿಂದ ನೋಡಿ. ಜವಾಬ್ದಾರಿಯನ್ನು ಹೊರುವುದು ಮತ್ತು ಆಟಗಾರರೊಂದಿಗೆ ಮಾತನಾಡಿ ಅವರ ಶ್ರೇಷ್ಠ ಆಟ ಹೊರತರುವಂತೆ ಮಾಡುವ ಕೆಲಸವನ್ನು ನಾನು ಮೊದಲಿನಿಂದಲೂ ಮಾಡುತ್ತಾ ಬಂದಿದ್ದೇನೆ. ಯಾವುದೇ ಪರಿಸ್ಥಿತಿ ಇರಲಿ. ಭವಿಷ್ಯದಲ್ಲೂ ನಾನು ಇದನ್ನೇ ಮಾಡುತ್ತೇನೆ," ಎಂದು ಬುಮ್ರಾ ಹೇಳಿದ್ದಾರೆ.
ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವ ಬಿಟ್ಟ ಬಗ್ಗೆ ಮಾತನಾಡಿದ ಬುಮ್ರಾ, ಮಾಜಿ ನಾಯಕನ ಈ ನಿರ್ಧಾರವನ್ನು ತಂಡದ ಎಲ್ಲಾ ಆಟಗಾರರು ಗೌರವಿಸಿದ್ದಾರೆ ಎಂದಿದ್ದಾರೆ.
ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದೇಕೆ? ಮೀಟಿಂಗ್ನಲ್ಲಿ ನಡೆದಿದ್ದೇನು? ಬುಮ್ರಾ ವಿವರಣೆ!
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ತಾಯ್ನಾಡಿನಲ್ಲಿ ವೆಸ್ಟ್ ಇಂಡೀಸ್ ಎದುರು ತಲಾ ಮೂರು ಪಂದ್ಯಗಳ ಟಿ20 ಮತ್ತು ಒಡಿಐ ಸರಣಿಗಳನ್ನು ಆಡಲಿದೆ. ಇದರ ಬಳಿಕ ಫೆಬ್ರವರಿ ಅಂತ್ಯದ ಹೊತ್ತಿಗೆ ಶ್ರೀಲಂಕಾ ಎದುರು 2 ಟೆಸ್ಟ್ಗಳ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಟೆಸ್ಟ್ ತಂಡಕ್ಕೆ ನೂತನ ಕ್ಯಾಪ್ಟನ್ ಆಯ್ಕೆಯಾಗಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿ ವೇಳಾಪಟ್ಟಿ
ಪ್ರಥಮ ಒಡಿಐ: ಜನವರಿ 19, ಪಾರ್ಲ್
ದ್ವಿತೀಯ ಒಡಿಐ: ಜನವರಿ 21, ಪಾರ್ಲ್
ತೃತೀಯ ಒಡಿಐ: ಜನವರಿ 23, ಕೇಪ್ ಟೌನ್
ಟೀಮ್ ಇಂಡಿಯಾದ ಪರಿಷ್ಕೃತ ತಂಡ ಹೀಗಿದೆಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ಕೀಪರ್), ಇಶಾನ್ ಕಿಶನ್ (ವಿಕೆಟ್ಕೀಪರ್), ವೆಂಕಟೇಶ್ ಅಯ್ಯರ್, ಶಾರ್ದುಲ್ ಠಾಕೂರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್, ದೀಪಕ್ ಚಹರ್, ಪ್ರಸಿಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.