ಆ್ಯಪ್ನಗರ

ರೋಹಿತ್‌ಗೆ ಸೆಕೆಂಡ್ ಚಾನ್ಸ್; ಭುವಿ, ಸಹಾಗೆ ಕೊಕ್ ಏಕೆ?

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ಆರಂಭವಾಗಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿನ ಟೀಮ್ ಇಂಡಿಯಾ ಆಯ್ಕೆಯು ಹಲವಾರು ಅಚ್ಚರಿಗಳಿಗೆ ಎಡೆ ಮಾಡಿಕೊಟ್ಟಿದೆ.

Vijaya Karnataka Web 13 Jan 2018, 3:08 pm
ಸೆಂಚುರಿಯನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ಆರಂಭವಾಗಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿನ ಟೀಮ್ ಇಂಡಿಯಾ ಆಯ್ಕೆಯು ಹಲವಾರು ಅಚ್ಚರಿಗಳಿಗೆ ಎಡೆ ಮಾಡಿಕೊಟ್ಟಿದೆ.
Vijaya Karnataka Web ind vs sa rohit gets second lifeline ishant saha in for bhuvi and saha
ರೋಹಿತ್‌ಗೆ ಸೆಕೆಂಡ್ ಚಾನ್ಸ್; ಭುವಿ, ಸಹಾಗೆ ಕೊಕ್ ಏಕೆ?


ಇಲ್ಲಿ ಪ್ರಮುಖವಾಗಿಯೂ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆಗಳನ್ನು ತರಲಾಗಿದೆ. ಎಡಗೈ ಆರಂಭಿಕ ಶಿಖರ್ ಧವನ್, ಬಲಗೈ ವೇಗಿ ಭುವನೇಶ್ವರ್ ಕುಮಾರ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಸ್ಥಾನಗಳಿಗೆ ಕನ್ನಡಿಗ ಕೆಎಲ್ ರಾಹುಲ್, ಅನುಭವಿ ಇಶಾಂತ್ ಶರ್ಮಾ ಮತ್ತು ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಪಾರ್ಥಿವ್ ಪಟೇಲ್ ಆಯ್ಕೆ ಮಾಡಲಾಗಿದೆ.

ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ವೈಫಲ್ಯ ಅನುಭವಿಸಿರುವ ಶಿಖರ್ ಧವನ್ ಸ್ಥಾನಕ್ಕೆ ರಾಹುಲ್ ಆಯ್ಕೆ ನಿರೀಕ್ಷಿತವಾಗಿತ್ತು. ಆದರೆ ಇನ್ ಫಾರ್ಮ್ ಆಟಗಾರರಾದ ಭುವಿ ಹಾಗೂ ಸಹಾ ಸ್ಥಾನಗಳಿಗೆ ಇಶಾಂತ್ ಹಾಗೂ ಪಾರ್ಥಿವ್ ಆಯ್ಕೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.

ಇಲ್ಲಿ ಗಮನಾರ್ಹ ಅಂಶವೆಂದರೆ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಸೇರಿದಂತೆ ಒಟ್ಟು ಆರು ವಿಕೆಟುಗಳನ್ನು ಭುವಿ ಕಬಳಿಸಿದ್ದರು. ಅತ್ತ ವಿಕೆಟ್ ಹಿಂದುಗಡೆ ನಿಂತು 10 ಕ್ಯಾಚ್‌ಗಳನ್ನು ಹಿಡಿರುವ ಸಹಾ ವಿಶ್ವ ದಾಖಲೆಯನ್ನು ಬರೆದಿದ್ದರು.

ಇವೆಲ್ಲದರ ಹೊರತಾಗಿಯೂ ನಾಯಕ ವಿರಾಟ್ ಕೊಹ್ಲಿ ನಿರ್ಧಾರವು ಅಚ್ಚರಿಗೆ ಕಾರಣವಾಗಿದೆ. ಸ್ವಿಂಗ್ ಬೌಲರ್‌ಗಳಿಗೆ ಪಿಚ್‌ನಿಂದ ನೆರವು ಸಿಗುತ್ತಿಲ್ಲವೆಂಬ ಏಕೈಕ ಕಾರಣಕ್ಕೆ ಭುವಿ ಅವರನ್ನು ಕೈಬಿಡಲಾಗಿದೆ. ಹಾಗೆಯೇ ಬ್ಯಾಟಿಂಗ್ ವಿಭಾಗವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪಾರ್ಥಿವ್‌ಗೆ ಮಣೆ ಹಾಕಲಾಗಿದೆ. ಇದರಿಂದ ಸಹಾ ಕೂಡಾ ಅವಕಾಶ ವಂಚಿತರಾಗಿದ್ದಾರೆ.

ಈ ನಡುವೆ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ಮತ್ತೆ ಕಡೆಗಣಿಸಲಾಗಿದ್ದು, ರೋಹಿತ್ ಶರ್ಮಾಗೆ ಮಗದೊಂದು ಅವಕಾಶ ನೀಡಲಾಗಿದೆ. ಒಟ್ಟಿನಲ್ಲಿ ನಾಯಕ ವಿರಾಟ್ ಕೊಹ್ಲಿ ನಿರ್ಧಾರವು ಎಷ್ಟರ ಮಟ್ಟಿಗೆ ಸರಿ ಎಂಬುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌