ಆ್ಯಪ್ನಗರ

ಭುವಿ, ಬುಮ್ರಾಗೆ ಬುಲಾವ್‌

ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಉಳಿದ 3 ಪಂದ್ಯಗಳಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ವೇಗಿಗಳಾದ ಭುವನೇಶ್ವರ್‌ ಕುಮಾರ್‌ ಮತ್ತು ಜಸ್‌ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿದ್ದಾರೆ.

PTI 26 Oct 2018, 5:00 am
ಇಂಡೊ-ವಿಂಡೀಸ್‌ ಏಕದಿನ ಸರಣಿ: ಕೊನೆಯ 3 ಪಂದ್ಯಗಳಿಗೆ ಭಾರತ ತಂಡ ಪ್ರಕಟ
Vijaya Karnataka Web india call up pace duo kumar bumrah for odis
ಭುವಿ, ಬುಮ್ರಾಗೆ ಬುಲಾವ್‌


ಹೊಸದಿಲ್ಲಿ: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಉಳಿದ 3 ಪಂದ್ಯಗಳಿಗೆ ಭಾರತ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ವೇಗಿಗಳಾದ ಭುವನೇಶ್ವರ್‌ ಕುಮಾರ್‌ ಮತ್ತು ಜಸ್‌ಪ್ರೀತ್‌ ಬುಮ್ರಾ ತಂಡಕ್ಕೆ ಮರಳಿದ್ದಾರೆ.

ಇದೇ ವೇಳೆ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರನ್ನು ತಂಡದಿಂದ ಹೊರಗಿಡಲಾಗಿದೆ. 5 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದಿರುವ ಭಾರತ ತಂಡ 2ನೇ ಪಂದ್ಯದಲ್ಲಿ ಟೈ ಫಲಿತಾಂಶ ಕಂಡರೂ 1-0 ಅಂತರದಲ್ಲಿ ಸರಣಿ ಮುನ್ನಡೆಯಲ್ಲಿದೆ.

ವಿಶಾಖಪಟ್ಟಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ 6 ವಿಕೆಟ್‌ಗೆ 321 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿದರೂ ರೋಚಕ ಟೈ ಫಲಿತಾಂಶ ಹೊರಬಿದ್ದಿತ್ತು. ಟೀಮ್‌ ಇಂಡಿಯಾ ನಾಯಕ ಭರ್ಜರಿ ಬ್ಯಾಟಿಂಗ್‌ ಮೂಲಕ 157 ರನ್‌ ಸಿಡಿಸಿ ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 10 ಸಾವಿರ ರನ್‌ಗಳನ್ನು ಪೂರೈಸಿದ ಹೆಗ್ಗಳಿಕೆಗೆ ಪಾತ್ರರಾದರು. ಆದರೆ, ಪಂದ್ಯದಲ್ಲಿ ಗೆಲುವು ಮಾತ್ರ ಭಾರತದ ಕೈತಪ್ಪಿ ಹೋಯಿತು.

ಟೆಸ್ಟ್‌ ಸರಣಿಯಲ್ಲಿ 0-2 ಅಂತರದಲ್ಲಿ ಹೀನಾಯ ಸೋಲುಂಡಿದ್ದ ವೆಸ್ಟ್‌ ಇಂಡೀಸ್‌ ತಂಡ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸತತ 300ಕ್ಕೂ ಹೆಚ್ಚು ರನ್‌ ಗಳಿಸುವ ಮೂಲಕ ಪ್ರಬಲ ಪೈಪೋಟಿ ನೀಡಿದೆ. ಹೀಗಾಗಿ ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಅ.27ರಂದು ಶನಿವಾರ ನಡೆಯಲಿರುವ ಮೂರನೇ ಏಕದಿನ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ತಂಡ ತಿರುಗೇಟು ನೀಡಿ ಭಾರತಕ್ಕೆ ಸೋಲುಣಿಸುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

ಭಾರತ ತಂಡ ಇಂತಿದೆ
ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ, ಶಿಖರ್‌ ಧವನ್‌, ಅಂಬಾಟಿ ರಾಯುಡು, ರಿಷಭ್‌ ಪಂತ್‌, ಎಂ.ಎಸ್‌ ಧೋನಿ (ವಿಕೆಟ್‌ಕೀಪರ್‌), ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್‌, ಯುಜ್ವೇಂದ್ರ ಚಹಲ್‌, ಭುವನೇಶ್ವರ್‌ ಕುಮಾರ್‌, ಜಸ್‌ಪ್ರೀತ್‌ ಬುಮ್ರಾ, ಖಲೀಲ್‌ ಅಹ್ಮದ್‌, ಉಮೇಶ್‌ ಯಾದವ್‌, ಕೆ.ಎಲ್‌ ರಾಹುಲ್‌ ಮತ್ತು ಮನೀಶ್‌ ಪಾಂಡೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌