ಆ್ಯಪ್ನಗರ

ಭಾರತ ಕಿರಿಯರ ತಂಡಕ್ಕೆ ಜಯ

ಇತ್ತೀಚೆಗಷ್ಟೇ ಅಂತ್ಯಗೊಂಡ ಆತಿಥೇಯ ಶ್ರೀಲಂಕಾದ ಕಿರಿಯರ ತಂಡದ ವಿರುದ್ಧದ ಯುವ ಟೆಸ್ಟ್‌ ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದ್ದ 19 ವರ್ಷದೊಳಗಿನವರ ಭಾರತ ಕ್ರಿಕೆಟ್‌ ತಂಡ, ಸೋಮವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ದಾಖಲಿಸಿದೆ.

Vijaya Karnataka 31 Jul 2018, 11:13 am
ಕೊಲಂಬೊ: ಇತ್ತೀಚೆಗಷ್ಟೇ ಅಂತ್ಯಗೊಂಡ ಆತಿಥೇಯ ಶ್ರೀಲಂಕಾದ ಕಿರಿಯರ ತಂಡದ ವಿರುದ್ಧದ ಯುವ ಟೆಸ್ಟ್‌ ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದ್ದ 19 ವರ್ಷದೊಳಗಿನವರ ಭಾರತ ಕ್ರಿಕೆಟ್‌ ತಂಡ, ಸೋಮವಾರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಜಯ ದಾಖಲಿಸಿದೆ.
Vijaya Karnataka Web youth-cricket-02


ಇಲ್ಲಿನ ಪಿ ಸಾರಾ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಶ್ರೀಲಂಕಾ ಯುವ ಪಡೆ, 38.4 ಓವರ್‌ಗಳಲ್ಲಿ 143 ರನ್‌ಗಳಿಗೆ ಆಲ್‌ಔಟ್‌ ಆಯಿತು. ಬಳಿಕ ಗುರಿ ಬೆನ್ನತ್ತಿದ ಯುವ ಇಂಡಿಯಾ, 37.1 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 144 ರನ್‌ಗಳನ್ನು ದಾಖಲಿಸಿತು. ಈ ಮೂಲಕ ಯುವ ಏಕದಿನ ಕ್ರಿಕೆಟ್‌ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದಿದೆ. ಭಾರತದ ಪರ ಅನುಜ್‌ ರಾವತ್‌ ಅರ್ಧಶತಕ ದಾಖಲಿಸಿ ಮಿಂಚಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌