ಆ್ಯಪ್ನಗರ

ಚಿನ್ನಸ್ವಾಮಿಯಲ್ಲಿ ರನ್ ಹೊಳೆ ನಿರೀಕ್ಷೆ

ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ರನ್ ಹೊಳೆಯನ್ನೇ ನಿರೀಕ್ಷಿಸಲಾಗುತ್ತಿದೆ.

TOI.in 26 Feb 2019, 5:06 pm
ಬೆಂಗಳೂರು: ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯಾ ನಡುವಣ ಹೈ ವೋಲ್ಟೇಜ್ ಟ್ವೆಂಟಿ-20 ಕದನವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರದಂದು ನಡೆಯಲಿದೆ.
Vijaya Karnataka Web kl-rahul-practise


ವಿಶಾಖಪಟ್ಟಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸೋಲನ್ನಪ್ಪಿರುವ ಟೀಮ್ ಇಂಡಿಯಾ, ಸರಣಿಯನ್ನು ಸಮಬಲಗೊಳಿಸಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ವಿಶಾಖಪಟ್ಟಣದಲ್ಲಿ ಲೋ ಸ್ಕೋರಿಂಗ್ ಪಂದ್ಯ ನಡೆದಿದ್ದರೆ ಚಿನ್ನಸ್ವಾಮಿಯಲ್ಲಿ ಭಾರಿ ರನ್ ಹೊಳೆ ನಿರೀಕ್ಷಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಟಿಂಗ್ ಸ್ನೇಹಿ ಪಿಚ್ ಸಿದ್ಧಪಡಿಸಲಾಗಿದೆ.

ಐಪಿಎಲ್‌ಗೆ ಹೋಲಿಸಿದರೆ ಅಷ್ಟೊಂದು ರನ್ ಹೊಳೆ ಇರಲಾರದು. ಆದರೆ ಸರಾಸರಿ 180 ರನ್ ದಾಖಲಾಗಲಿದೆ ಎಂಬುದನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮೂಲಗಳು ತಿಳಿಸಿದೆ. ಇದರೊಂದಿಗೆ ಪ್ರೇಕ್ಷಕರಿಗಂತೂ ಸ್ಪಷ್ಟ ಮನರಂಜನೆ ಸಿಗಲಿದೆ.

ಚಿನ್ನಸ್ವಾಮಿಯಲ್ಲಿ ಹೊಸ ಪಿಚ್ ಸಿದ್ಧಪಡಿಸಲಾಗಿದೆ. ಎರಡು ತಿಂಗಳುಗಳ ಹಿಂದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಇದನ್ನು ಬಳಕೆ ಮಾಡಲಾಗಿತ್ತು. ಅಲ್ಲದೆ ಮಂಜು ಕೂಡಾ ಪರಿಣಾಮಕಾರಿ ಎನಿಸಿಕೊಳ್ಳಲು ಸಾಧ್ಯತೆ ಕಡಿಮೆಯಾಗಿದೆ.

2017ರಲ್ಲಿ ಇಂಗ್ಲೆಂಡ್ ವಿರುದ್ಧ ಇದೇ ಮೈದಾನದಲ್ಲಿ ಆಡಿದಾಗ ಭಾರತ ಆರು ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿತ್ತು. ಅಲ್ಲದೆ 75 ರನ್‌ಗಳ ಅಧಿಕಾರಯುತ ಗೆಲುವು ದಾಖಲಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌