ಆ್ಯಪ್ನಗರ

ಭಾರತ-ಶ್ರೀಲಂಕಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ.

Vijaya Karnataka Web 16 Nov 2017, 11:21 am
ಕೊಲ್ಕತ್ತಾ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಮಳೆ ಸುರಿದ ಪರಿಣಾಮ ಮೈದಾನ ಒದ್ದೆಯಾಗಿದ್ದು, ನಿಗದಿತ ಸಮಯಕ್ಕೆ ಟಾಸ್ ಮಾಡಲಾಗಿಲ್ಲ. ಪಂದ್ಯ ತಡವಾಗಿ ಆರಂಭವಾಗುವ ನಿರೀಕ್ಷೆ ಇದೆ.
Vijaya Karnataka Web india vs sri lanka live
ಭಾರತ-ಶ್ರೀಲಂಕಾ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ


ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದ ಆತಿಥ್ಯದಲ್ಲಿ ನಡೆಯುವ ಪಂದ್ಯದಲ್ಲಿ ವಿಶ್ವದ ನಂ.1 ತಂಡ ಭಾರತ ಗೆಲ್ಲುವ ನೆಚ್ಚಿನ ಪಡೆ ಎಂಬುದರಲ್ಲಿ ಯಾವುದೇ ಅನುಮಾನ ಉಳಿದಿಲ್ಲ. ಕಳೆದ ಶ್ರೀಲಂಕಾ ಪ್ರವಾಸದ ಟೆಸ್ಟ್‌(3-0), ಏಕದಿನ(5-0) ಹಾಗೂ ಟಿ20(1-0) ಸರಣಿಯ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಅದೇ ಪಾರಮ್ಯವನ್ನು ತವರು ನೆಲದಲ್ಲೂ ಮುಂದುವರಿಸುವ ವಿಶ್ವಾಸದಲ್ಲಿದೆ.

ಈಗಾಗಲೇ ನಾಯಕ ವಿರಾಟ್‌ ಕೊಹ್ಲಿ ಸಾರಥ್ಯದಲ್ಲಿ ಟೀಮ್‌ ಇಂಡಿಯಾ ಸತತ 8 ಟೆಸ್ಟ್‌ ಸರಣಿಗಳನ್ನು ಗೆದ್ದಿದೆ. ಇದರಲ್ಲಿ 2 ಸರಣಿಗಳನ್ನು ಲಂಕಾ ನೆಲದಲ್ಲಿ (2015, 2017) ಗೆದ್ದಿರುವ ಭಾರತ, ಮತ್ತೆ ಸಿಂಹ ಬೇಟೆಗೆ ಹೊಂಚು ಹಾಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌