ಆ್ಯಪ್ನಗರ

ಆಸಿಸ್‌ ವಿರುದ್ಧದ ಟಿ20 ಸರಣಿ, ಯುವ ಆಟಗಾರರಿಗೆ ಮಣೆ?

ಆಸ್ಟ್ರೇಲಿಯಾ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿ ಫೆಬ್ರವರಿ 24 ಮತ್ತು 27ರಂದು ನಡೆಯಲಿದೆ. ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ಮತ್ತು ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

Vijaya Karnataka Web 18 Feb 2019, 2:12 pm
ಬೆಂಗಳೂರು: ಮುಂಬರುವ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಕ್ರಿಕೆಟ್‌ ಅಭಿಮಾನಿಗಳಲ್ಲಿ ರೋಚಕತೆ ಮೂಡಿಸಿದೆ. ಈ ಸರಣಿಯಿಂದ ವಿಶ್ವಕಪ್‌ಗೆ ಮುನ್ನುಡಿ ಎಂಬುದು ಮಾತ್ರವಲ್ಲ, ಕೆಲವು ಯುವ ಪ್ರತಿಭೆಗಳಿಗೆ ಪ್ರಮುಖ ವೇದಿಕೆಯಾಗಿದೆ.
Vijaya Karnataka Web Kohli Dhoni


ಆಸ್ಟ್ರೇಲಿಯಾ ವಿರುದ್ಧ ಎರಡು ಟಿ-20 ಪಂದ್ಯಗಳು ನಡೆಯಲಿದ್ದು, ಫೆಬ್ರವರಿ 24ಕ್ಕೆ ವಿಶಾಖಪಟ್ಟಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಎರಡನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫೆಬ್ರವರಿ 27ರಂದು ನಡೆಯಲಿದೆ.

ಮುಂಬರುವ ಏಕದಿನ ಸರಣಿಗಾಗಿ ಟಿ20 ಸರಣಿಯಲ್ಲಿ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ಹಾಗಾಗಿ ಯುವ ಪ್ರತಿಭೆಗಳಿಗೆ ಇದೊಂದು ಉತ್ತಮ ವೇದಿಕೆಯಾಗಿ ಪರಿಣಮಿಸಿದೆ. ಇವರ ಪೈಕಿ ಲೆಗ್‌ ಸ್ಪಿನ್ನರ್‌ ಮಯಾಂಕ್‌ ಮಾರ್ಕಂಡೆ ಪ್ರಮುಖರಾಗಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಇಂತಹ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆ್ಯರನ್‌ ಫಿಂಚ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮಾರ್ಕಸ್‌ ಸ್ಟಾಯ್ನಿಸ್‌, ಕುಮ್ಮಿನ್ಸ್‌ ಸೇರಿದಂತೆ ಎಲ್ಲಾ ಪ್ರಮುಖ ಆಟಗಾರರು ತಂಡದಲ್ಲಿ ಇರಲಿದ್ದಾರೆ.

ಭಾರತ ತಂಡ

ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ, ಶಿಖರ್‌ ಧವನ್‌, ಎಂಎಸ್‌ ಧೋನಿ, ರಿಶಬ್‌ ಪಂತ್‌, ದಿನೇಶ್‌ ಕಾರ್ತಿಕ್‌, ವಿಜಯ್‌ ಶಂಕರ್‌, ಹಾರ್ದಿಕ್‌ ಪಾಂಡ್ಯ, ಕೃನಾಲ್‌ ಪಾಂಡ್ಯ, ಕೆಎಲ್‌ ರಾಹುಲ್‌, ಜಸ್‌ಪ್ರಿತ್‌ ಬುಮ್ರಾ, ಉಮೇಶ್‌ ಯಾದವ್‌, ಯಜುವೇಂದ್ರ ಚಹಲ್‌, ಸಿದ್ಧಾರ್ಥ್‌ ಕೌಲ್‌, ಮಯಾಂಕ್‌ ಮಾರ್ಕಂಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌