ಆ್ಯಪ್ನಗರ

IPL 2019: ಈ ಸಲ ಕಪ್ ನಮ್ದೆ?

ಐಪಿಎಲ್ 2019 ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ ಆರಂಭಕ್ಕೆ ಇನ್ನೊಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಈ ಬಾರಿಯಾದರೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸು ನನಸಾಗಲಿದೆಯೇ ಎಂಬುದು ಕುತೂಹಲವೆನಿಸಿದೆ.

Vijaya Karnataka Web 14 Feb 2019, 3:10 pm

ಹೈಲೈಟ್ಸ್‌:

  • ಮೂರು ಬಾರಿ ರನ್ನರ್-ಅಪ್ ಪ್ರಶಸ್ತಿ ಗೆದ್ದಿರುವ ಆರ್‌ಸಿಬಿ.
  • ಈ ಸಲ ಕಪ್ ನಮ್ದೆ; ಅಭಿಮಾನಿಗಳ ಕೂಗು.
  • ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಮೇಲೆ ಅತಿ ಹೆಚ್ಚಿನ ನಿರೀಕ್ಷೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web kohli-abde
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ಗೆ ಮಾರ್ಚ್ 23ರಂದು ಚಾಲನೆ ದೊಕರಲಿದೆ.
ಐಪಿಎಲ್ 2019 ವೇಳಾಪಟ್ಟಿ ಇನ್ನಷ್ಟೇ ಬಿಡುಗಡೆಗೊಳ್ಳಬೇಕಿದೆ. ಇದರಂತೆ ಎಲ್ಲ ತಂಡಗಳು ಪೂರ್ವ ತಯಾರಿಯಲ್ಲಿ ತೊಡಗಿಸಿಕೊಂಡಿದೆ.

ಈ ನಡುವೆ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಕಿರೀಟದ ಹುಡುಕಾಟದಲ್ಲಿದೆ. ಇದರೊಂದಿಗೆ 'ಈ ಸಲ ಕಪ್ ನಮ್ದೆ' ಘೋಷವಾಕ್ಯಕ್ಕೆ ಚುರುಕು ಮುಟ್ಟಿದೆ.

2009, 2011 ಹಾಗೂ 2016ನೇ ಸಾಲಿನಲ್ಲಿ ರನ್ನರ್-ಅಪ್ ಪ್ರಶಸ್ತಿಗಳನ್ನು ಗೆದ್ದಿರುವುದು ಬೆಂಗಳೂರಿನ ಇದುವರೆಗಿನ ಶ್ರೇಷ್ಠ ಸಾಧನೆಯಾಗಿದೆ.

ಮುಂಬರುವ ಏಕದಿನ ವಿಶ್ವಕಪ್‌ಗೂ ಮುನ್ನ ಆರ್‌ಸಿಬಿ ಚೊಚ್ಚಲ ಕಿರೀಟ ಗೆಲ್ಲಲು ಸಾಧ್ಯವಾಗಲಿದೆಯೇ ಎಂಬುದು ತುಂಬಾನೇ ಕುತೂಹಲವೆನಿಸಿದೆ.

ಈಗಾಗಲೇ ತಂಡದ ವ್ಯವಸ್ಥಾಪಕ ಮಂಡಳಿಯಲ್ಲಿ ಬದಲಾವಣೆ ತರಲಾಗಿದೆ. ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಪ್ರಮುಖ ಕೋಚ್ ಹುದ್ದೆಯನ್ನು ನಿಭಾಯಿಸಲಿದ್ದಾರೆ. ಆಶಿಶ್ ನೆಹ್ರಾ ಬೌಲಿಂಗ್ ಕೋಚ್ ಆಗಿರಲಿದ್ದಾರೆ.

ವಿರಾಟ್ ಕೊಹ್ಲಿ ಜತೆಗೆ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ ಅಮೋಘ ಫಾರ್ಮ್ ಕಂಡುಕೊಳ್ಳಬೇಕಿದೆ. ಯುಜ್ವೇಂದ್ರ ಚಹಲ್, ಮೊಯಿನ್ ಅಲಿ, ಕಾಲಿನ್ ಡಿ ಗ್ರಾಂಡ್‌ಹೋಮ್, ಟಿಮ್ ಸೌಥಿ, ವಾಷಿಂಗ್ಟನ್ ಸುಂದರ್, ಶಿಮ್ರಾನ್ ಹೆಟ್ಮಾಯರ್ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌