ಆ್ಯಪ್ನಗರ

ಐರ್ಲೆಂಡ್‌ ವಿರುದ್ಧದ ಟಿ20: ಭಾರತಕ್ಕೆ 'ಪವರ್‌ ಪ್ಲೇಯರ್‌' ಸೂಚಿಸಿದ ಸಂಜಯ್‌ ಮಾಂಜ್ರೇಕರ್‌!

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ 2-2 ಅಂತರದ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಈಗ ಇಂಗ್ಲೆಂಡ್‌ ಪ್ರವಾಸದಲ್ಲಿದೆ. ಆತೀಥೇಯ ಇಂಗ್ಲೆಂಡ್‌ ವಿರುದ್ಧದ ಸರಣಿಗಳ ಆರಂಭಕ್ಕೂ ಮುನ್ನ ಭಾರತ ತಂಡ ಕ್ರಿಕೆಟ್‌ ಕೂಸು ಐರ್ಲೆಂಡ್‌ ಎದುರು ಜೂನ್ 26 ಮತ್ತು 28ರಂದು ಎರಡು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಪೈಪೋಟಿ ನಡೆಸಲಿದೆ. ಅನುಭವಿಗಳ ಅನುಪಸ್ಥಿತಿ ನಡುವೆ ಬಿಸಿಸಿಐ ಈ ಸರಣಿಗೆ ಹಾರ್ದಿಕ್‌ ಪಾಂಡ್ಯ ಸಾರಥ್ಯದ 17 ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಿ ಆಗಿದ್ದು, ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಪ್ಲೇಯಿಂಗ್ ಇಲೆವೆನ್‌ ಆಯ್ಕೆ ಬಗ್ಗೆ ಮಾತನಾಡಿದ್ದಾರೆ.

Authored byವಿಜೇತ್ ಕುಮಾರ್ | Vijaya Karnataka Web 24 Jun 2022, 4:49 pm

ಹೈಲೈಟ್ಸ್‌:

  • ಭಾರತ ಮತ್ತು ಐರ್ಲೆಂಡ್‌ ನಡುವಣ ಎರಡು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿ.
  • ಟೀಮ್ ಇಂಡಿಯಾ ಪ್ಲೇಯಿಂಗ್‌ ಇಲೆವೆನ್‌ಗೆ ಸಲಹೆ ಸೂಚಿಸಿದ ಸಂಜಯ್‌ ಮಾಂಜ್ರೇಕರ್‌.
  • ಲಖನೌ ಸೂಪರ್‌ ಜಯಂಟ್ಸ್‌ ಆಲ್‌ರೌಂಡ್‌ ಆಟಗಾರರನ್ನು ಆಡಿಸಿ ಎಂದ ಮಾಜಿ ಕ್ರಿಕೆಟಿಗ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web sanjay manjrekar on deepak hooda
ಭಾರತ ತಂಡದ ಮಾಜಿ ಆಟಗಾರ ಸಂಜಯ್‌ ಮಾಂಜ್ರೇಕರ್‌ (ಚಿತ್ರ: ಟ್ವಿಟರ್‌/ಟಿಒಐ).
ಹೊಸದಿಲ್ಲಿ: ಕ್ರಿಕೆಟ್‌ ಕೂಸು ಐರ್ಲೆಂಡ್‌ ಎದುರು ಟೀಮ್ ಇಂಡಿಯಾ ಎರಡು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯನ್ನು ಆಡಲಿದ್ದು, ಪಂದ್ಯಗಳು ಇದೇ ಜೂನ್‌ 26 ಮತ್ತು 28ರಂದು ಜರುಗಲಿವೆ. ಅನುಭವಿ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹಾರ್ದಿಕ್‌ ಪಾಂಡ್ಯ ಸಾರಥ್ಯದ ಬಹುತೇಕ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡ ಈ ಸರಣಿಯಲ್ಲಿ ಪೈಪೋಟಿ ನಡೆಸಲಿದೆ.
ಇತ್ತೀಚೆಗೆ ಅಂತ್ಯಗೊಂಡ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಭಾರತ ಅನುಭವಿಗಳ ಅನುಪಸ್ಥಿತಿ ನಡುವೆಯೂ 2-2ರ ಸಮಬಲ ಸಾಧಿಸಿತ್ತು. ಈ ಸರಣಿಯಲ್ಲಿ ಆಡಿದ್ದ ಬಹುತೇಕ ಆಟಗಾರರನ್ನು ಐರ್ಲೆಂಡ್‌ ವಿರುದ್ಧದ ಸರಣಿಗೆ ಕಾಯ್ದುಕೊಳ್ಳಲಾಗಿದೆ. ಆದರೆ, ರಿಷಭ್ ಪಂತ್‌ ಮತ್ತು ಶ್ರೇಯಸ್‌ ಅಯ್ಯರ್‌ ವಿಶ್ರಾಂತಿ ತೆಗೆದುಕೊಂಡಿದ್ದಾರೆ. ಅವರ ಜಾಗದಲ್ಲಿ ಸಂಜು ಸ್ಯಾಮ್ಸನ್‌ ಮತ್ತು ರಾಹುಲ್‌ ತ್ರಿಪಾಠಿ ಭಾರತ ತಂಡಕ್ಕೆ ಸೇರ್ಪಡೆಯಾಗಿದ್ದು, ಗಾಯದ ಸಮಸ್ಯೆಯಿಂದ ಚೇತರಿಸಿರುವ ಸೂರ್ಯಕುಮಾರ್‌ ಯಾದವ್‌ ಕೂಡ ಕಮ್‌ಬ್ಯಾಕ್‌ ಮಾಡಿದ್ದಾರೆ.

ಹೀಗಿರುವಾಗ ರಿಷಭ್ ಮತ್ತು ಶ್ರೇಯಸ್‌ ಅನುಪಸ್ಥಿತಿಯಲ್ಲಿ ಭಾರತ ತಂಡದಲ್ಲಿ ಖಾಲಿಯಾಗಿರುವ 3ನೇ ಮತ್ತು 4ನೇ ಕ್ರಮಾಂಕದಲ್ಲಿ ಯಾರು ಬ್ಯಾಟ್‌ ಮಾಡಬೇಕು? ಎಂಬುದರ ಬಗ್ಗೆ ಭಾರಿ ಚರ್ಚೆಯಾಗುತ್ತಿದೆ. ಈ ಕುರಿತಾಗಿ ಮಾತಿಗಿಳಿದ ಮಾಜಿ ಕ್ರಿಕೆಟಿಗ ಹಾಗೂ ಜನಪ್ರಿಯ ಕ್ರಿಕೆಟ್‌ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್‌, ಭಾರತ ತಂಡದ ತನ್ನ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಸಲುವಾಗಿ ಲಖನೌ ಸೂಪರ್‌ ಜಯಂಟ್ಸ್‌ ತಂಡದ ಆಲ್‌ರೌಂಡರ್‌ನ ಆಯ್ಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಕೇವಲ ಈ ಸರಣಿಗಷ್ಟೇ ಅಲ್ಲ ಮುಂಬರುವ ಟಿ20 ವಿಶ್ವಕಪ್‌ ಟೂರ್ನಿಗೂ ಈ ಆಟಗಾರನ ಮೇಲೆ ವಿಶ್ವಾಸ ಇಡಬೇಕು ಎಂದಿದ್ದಾರೆ.

ಟೀಮ್ ಇಂಡಿಯಾಗಿಂತಲೂ ಪಾಕಿಸ್ತಾನವೇ ಬಲಿಷ್ಠ ತಂಡ: ರಶೀದ್‌ ಲತೀಫ್‌!

"ಐರ್ಲೆಂಡ್‌ ವಿರುದ್ಧದ ಸರಣಿಯಲ್ಲಿ ದೀಪಕ್‌ ಹೂಡ ಅವರನ್ನು ಆಡಿಸುತ್ತಾರೆ ಎಂದೇ ನಿರೀಕ್ಷಿಸಿದ್ದೇನೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ದೀಪಕ್‌ ಹೂಡ ಶ್ರೇಷ್ಠ ಆಟವಾಡಿದ್ದಾರೆ. ತಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ," ಎಂದು ಸೋನಿ ಸ್ಪೋರ್ಟ್ಸ್‌ ನೆಟ್ವರ್ಕ್‌ ವಾಹಿನಿಯ ಕಾರ್ಯಕ್ರಮದಲ್ಲಿ ಮಾಂಜ್ರೇಕರ್‌ ಹೇಳಿದ್ದಾರೆ.

ಐಪಿಎಲ್‌ 2022 ಟೂರ್ನಿಯಲ್ಲಿ ಎಲ್‌ಎಸ್‌ಜಿ ತಂಡದ ಪರ ಬ್ಯಾಟ್‌ ಬೀಸಿದ್ದ ಬರೋಡ ಆಲ್‌ರೌಂಡರ್‌ ದೀಪಕ್‌ ಹೂಡ, ಆಡಿದ 14 ಇನಿಂಗ್ಸ್‌ಗಳಿಂದ 451 ರನ್‌ಗಳನ್ನು ಬಾರಿಸಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು, ಜೊತೆಗೆ 36 ಫೋರ್‌ ಮತ್ತು 18 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇದೇ ವರ್ಷ ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಯಲ್ಲಿ ಹೂಡ ಭಾರತ ತಂಡಕ್ಕೆ ಪದಾರ್ಪಣೆ ಮಾಡಿ, ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೂರೂ ಪಂದ್ಯಗಳಲ್ಲಿ ಆಡಿದ್ದರು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹಾರ್ದಿಕ್‌ ಪಾಂಡ್ಯ ಮತ್ತು ದಿನೇಶ್‌ ಕಾರ್ತಿಕ್‌ ಕಮ್‌ಬ್ಯಾಕ್‌ ಹಾರಣ ದೀಪಕ್‌ ಹೂಡ ಅವರಿಗೆ ಅವಕಾಶ ಕ್ಷೀಣಿಸಿದೆ.

ಸದ್ದಿಲ್ಲದೆ ಧೋನಿ ಹೆಸರಲ್ಲಿದ್ದ 'ಸಿಕ್ಸರ್‌ಗಳ ದಾಖಲೆ' ಮುರಿದ ಜೋಸ್‌ ಬಟ್ಲರ್‌!

"ಭಾರತ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ದೀಪಕ್‌ ಹೂಡ ಅವರಂತಹ ಪವರ್ ಫುಲ್ ಆಟಗಾರನ ಅಗತ್ಯವಿದೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವುದು ಕಷ್ಟದ ಕೆಲಸ. ಆದರೆ, ಐಪಿಎಲ್‌ ಟೂರ್ನಿಯಲ್ಲಿ ಹೂಡ ಮಧ್ಯಮ ಕ್ರಮಾಂಕದಲ್ಲಿ ಆಡಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಭಾರತ ತಂಡಕ್ಕೆ ಅವರ ಅವಶ್ಯಕತೆ ಇದೆ. ಖಂಡಿಯಾ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ ಅವರತ್ತ ಗಮನ ನೀಡಲಿದೆ ಎಂಬ ವಿಶ್ವಾಶವಿದೆ," ಎಂದಿದ್ದಾರೆ.
ಲೇಖಕರ ಬಗ್ಗೆ
ವಿಜೇತ್ ಕುಮಾರ್
ವಿಜಯ ಕರ್ನಾಟಕ ವೆಬ್‌ನಲ್ಲಿ ಕ್ರೀಡಾ ವಿಭಾಗದ ಪತ್ರಕರ್ತರಾಗಿ 2019ರಿಂದ ಸೇವೆಯಲ್ಲಿದ್ದಾರೆ. ಇದಕ್ಕೂ ಮುನ್ನ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಂಜೆ ವಾಣಿ ಮತ್ತು ಒನ್‌ ಇಂಡಿಯಾ ಸಂಸ್ಥೆಗಳಲ್ಲಿ ಟೆಕ್‌, ಆಟೊಮೊಬೈಲ್ಸ್‌, ರಾಜಕೀಯ, ಸಿನಿಮಾ ಮತ್ತು ವಾಣಿಜ್ಯ ಕ್ಷೇತ್ರಗಳ ಬಗ್ಗೆ ವರದಿ ಮಾಡಿದ ಅನುಭವ ಹೊಂದಿದ್ದು, ಟೆನಿಸ್‌, ಬ್ಯಾಡ್ಮಿಂಟನ್‌ ಮತ್ತು ಕ್ರಿಕೆಟ್‌ ಇವರ ಅಚ್ಚುಮೆಚ್ಚಿನ ಕ್ರೀಡೆಗಳು. ಪವರ್‌ಲಿಫ್ಟಿಂಗ್ ಇವರ ಹೊಸ ಪ್ರವೃತ್ತಿ, ವ್ಯಾಯಾಮ, ಸಾಹಿತ್ಯ ಓದು, ಪ್ರವಾಸ, ಬೈಕಿಂಗ್‌ ಹಾಗೂ ಚಾರಣ ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌