ಆ್ಯಪ್ನಗರ

ಇತ್ತೀಚಿನ ಪ್ರದರ್ಶನದಿಂದ ಧೋನಿ ಮೌಲ್ಯಮಾಪನ ಬೇಡ: ತಿವಾರಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನ 10ನೇ ಆವೃತ್ತಿಯಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡವು ಗಮನಾರ್ಹ ಪ್ರದರ್ಶನವನ್ನು ಮುಂದುವರಿಸಿದೆ. ಕಳೆದ ಬಾರಿ ಏಳನೇ ಸ್ಥಾನದಲ್ಲಿ ತೃಪ್ತಿಪಟ್ಟುಕೊಂಡಿದ್ದ ಪುಣೆ ತಂಡ ಈ ಬಾರಿ ಬಹುತೇಕ ಪ್ಲೇ ಆಫ್ ಪ್ರವೇಶಿಸುವುದು ನಿಚ್ಚಳವೆನಿಸಿದೆ.

ಟೈಮ್ಸ್ ಆಫ್ ಇಂಡಿಯಾ 12 May 2017, 3:18 pm
ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಚಾಂಪಿಯನ್‌ಶಿಪ್‌ನ 10ನೇ ಆವೃತ್ತಿಯಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ತಂಡವು ಗಮನಾರ್ಹ ಪ್ರದರ್ಶನವನ್ನು ಮುಂದುವರಿಸಿದೆ. ಕಳೆದ ಬಾರಿ ಏಳನೇ ಸ್ಥಾನದಲ್ಲಿ ತೃಪ್ತಿಪಟ್ಟುಕೊಂಡಿದ್ದ ಪುಣೆ ತಂಡ ಈ ಬಾರಿ ಬಹುತೇಕ ಪ್ಲೇ ಆಫ್ ಪ್ರವೇಶಿಸುವುದು ನಿಚ್ಚಳವೆನಿಸಿದೆ.
Vijaya Karnataka Web its unfair to judge ms dhoni over his recent performances manoj tiwary
ಇತ್ತೀಚಿನ ಪ್ರದರ್ಶನದಿಂದ ಧೋನಿ ಮೌಲ್ಯಮಾಪನ ಬೇಡ: ತಿವಾರಿ


ಕಳೆದ ಬಾರಿ ನಾಯಕತ್ವ ಜವಾಬ್ದಾರಿ ವಹಿಸಿದ್ದ ಮಹೇಂದ್ರ ಸಿಂಗ್ ಧೋನಿ ಬದಲಾಯಿಸಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರನ್ನು ತಂಡದ ನಾಯಕರನ್ನಾಗಿ ನೇಮಕ ಮಾಡಲಾಗಿತ್ತು.

ಇತ್ತೀಚಿನ ಕೆಲವು ಸಮಯಗಳಿಂದ ಧೋನಿ ಫಾರ್ಮ್ ಕಂಡುಕೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ. ಒಂದೆರಡು ಇನ್ನಿಂಗ್ಸ್‌ಗಳ ಹೊರತಾಗಿ ಧೋನಿ ರನ್ ಬರ ಎದುರಿಸುತ್ತಿದ್ದಾರೆ.

ಆದರೆ ಇತ್ತೀಚಿನ ಪ್ರದರ್ಶನದಿಂದ ಧೋನಿ ಪ್ರದರ್ಶನವನ್ನು ಮೌಲ್ಯಮಾಪನ ಮಾಡುವುದು ಸರಿಯಲ್ಲ ಎಂದು ಪುಣೆ ತಂಡದ ಆಟಗಾರನಾಗಿರುವ ಮನೋಜ್ ತಿವಾರಿ ಅಭಿಪ್ರಾಯಪಟ್ಟಿದ್ದಾರೆ.

ಧೋನಿ ಹಾಗೂ ಸ್ಮಿತ್ ನಾಯಕತ್ವದ ಬಗ್ಗೆ ವಿಚಾರಿಸಿದಾಗ, ಇಬ್ಬರು ತಮ್ಮದೇ ಆದ ರೀತಿಯಲ್ಲಿ ತಂಡವನ್ನು ಮುನ್ನಡೆಸುತ್ತಾರೆ. ಇಲ್ಲಿ ಧೋನಿ ಅನುಭವವನ್ನು ಸ್ಮಿತ್ ಪಡೆದುಕೊಳ್ಳುತ್ತಾರೆ. ಯಾವತ್ತೂ ತಂಡದಲ್ಲಿ ಮಹಿ ಜೊತೆಗಿರುವುದು ಉತ್ತಮ ಎಂದಿದ್ದಾರೆ.

ಧೋನಿ ತಮ್ಮ ವೃತ್ತಿ ಜೀವನದುದ್ದಕ್ಕೂ ಅಮೋಘ ಫಾರ್ಮ್ ಕಾಪಾಡಿಕೊಂಡಿದ್ದಾರೆ. ಹಾಗೆಯೇ ಪರಿಸ್ಥಿತಿಗೆ ತಕ್ಕಂತೆ ಆಟವಾಡುತ್ತಾರೆ. ಪ್ರತಿ ಬಾರಿಯೂ ಅವರಿಂದ ಆಕ್ರಮಣಕಾರಿ ಆಟ ನಿರೀಕ್ಷಿಸುವುದು ಸಮಂಜಸವಲ್ಲ. ಕೆಲವೊಮ್ಮೆ ಪರಿಸ್ಥಿತಿಗೆ ತಕ್ಕಂತೆ ಕಲಾತ್ಮಕ ಇನ್ನಿಂಗ್ಸ್ ಕಟ್ಟಬೇಕಾಗುತ್ತದೆ ಎಂದಿದ್ದಾರೆ.

ಏತನ್ಮಧ್ಯೆ ಯುವ ಆಟಗಾರರು ಭಯವಿಲ್ಲದ ಆಟವನ್ನು ಪ್ರದರ್ಶಿಸುತ್ತಿದ್ದಾರೆಂದು ತಿವಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ಹಾಗೆಯೇ ತಾನು ಸಹ ಪರಿಸ್ಥಿತಿಗೆ ತಕ್ಕಂತೆ ಆಡುವ ಯೋಜನೆ ಹೊಂದಿರುವುದಾಗಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌