ಆ್ಯಪ್ನಗರ

ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಪ್ರತಿಧ್ವನಿಸಿದ 'ಕಾವೇರಿ ಕೂಗು' ಅಭಿಯಾನ

ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಕಾವೇರಿ ಕೂಗು ಅಭಿಯಾನಕ್ಕೆ ಅಭಿಮಾನಿಗಳಿಂದ ಭಾರಿ ಬೆಂಬಲ ದೊರಕಿದೆ. ಕಾವೇರಿ ನದಿ ರಕ್ಷಣೆಗಾಗಿ ಈಶ ಫೌಂಡೇಷನ್ ನೇತೃತ್ವದಲ್ಲಿ 242 ಕೋಟಿ ಸಸಿಗಳನ್ನು ನೆಡುವು ಗುರಿಯನ್ನು ಹೊಂದಲಾಗಿದೆ.

Vijaya Karnataka Web 31 Aug 2019, 7:44 pm
ಮೈಸೂರು: ಕಾವೇರಿ ನದಿಯ ಪುನಶ್ಚೇತನಕ್ಕೆ 'ಕಾವೇರಿ ಕೂಗು' ಅಭಿಯಾನದ ಮೂಲಕ ನದಿಯ ಅಚ್ಚುಕಟ್ಟು ಪಾತ್ರದಲ್ಲಿ 242 ಕೋಟಿ ಸಸಿಗಳನ್ನು ನೆಡುವ ಗುರಿಯನ್ನು ಈಶ ಫೌಂಡೇಷನ್‌ ಹೊಂದಿದೆ.
Vijaya Karnataka Web cauvery-calling


ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ ನೇತೃತ್ವದಲ್ಲಿ ಮಹಾನ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಕಾವೇರಿ ಕೂಗೂ ಕರ್ನಾಟಕ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲೂ ಪ್ರತಿಧ್ವನಿಸಿದೆ. ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ಕಾವೇರಿ ಕೂಗು ಅಭಿಯಾನಕ್ಕೆ ಭಾರಿ ಬೆಂಬಲ ದೊರಕಿದೆ.

ಕಾವೇರಿ ಕೂಗು ಅಭಿಯಾನಕ್ಕೆ ಬೆಂಬಲವಾಗಿ ಅಭಿಮಾನಿಗಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಜೈಕಾರ ಘೋಷಣೆಯನ್ನು ಕೂಗಿದರು.

ನದಿಗಳನ್ನು ರಕ್ಷಿಸಲು ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾವೇರಿಯನ್ನು ರಕ್ಷಿಸಲು ಇಂದೇ ಕಣಕ್ಕಿಳಿಯಲು ಕರೆ ನೀಡಲಾಗಿದೆ. ಹಾಗೆಯೇ ಎಲ್ಲ ತಂಡಗಳೂ ಕಾವೇರಿ ಕೂಗು ಅಭಿಯಾನಕ್ಕೆ ಬೆಂಬಲವನ್ನು ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌